ಲಂಡನ್ ನ ಕಿಂಗ್ಸ್ಟನ್ ವಿಶ್ವವಿದ್ಯಾಲಯದ ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡ, ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ನ ರೋಮಾಂಚಕ ಪ್ರದರ್ಶನದಲ್ಲಿ ವಿಜಯ ಸಾಧಿಸಿದೆ. ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ಜಾಗತಿಕ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಾಗಿದ್ದು, ವಿಶ್ವದಾದ್ಯಂತ ವಿಶ್ವವಿದ್ಯಾನಿಲಯಗಳ ನೂರಾರು ತಂಡಗಳು ಭಾಗವಹಿಸಿದ್ದವು. ಕಿಂಗ್ಸ್ಟನ್
ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಕಂಬಳವು ಎಲ್ಲಾ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ
ಪುತ್ತೂರು: ಪ್ರತೀ ವರ್ಷದಂತೆ ಈ ವರ್ಷವೂ ಜ. 12 ರಂದು ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂಬ ಪರಿಕಲ್ಪನೆಯೊಂದಿಗೆ ಬಾರಿಯ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ ಯಂ ಕೃಷ್ಣ
ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಪ್ರತಿ ತಿಂಗಳು ಗೋಲ್ಡ್ ಸ್ಕಿಮ್ ನಡೆಯುತ್ತಿದ್ದು, ಇದಿಗ ಸೀಸನ್ 4 ರ ಹಂತದಲ್ಲಿ ಮೂರನೇ ತಿಂಗಳ ಡ್ರಾ ಕಾರ್ಯಕ್ರಮ ನಡೆಯಿತು. ಗ್ರಾಹಕರಿಗೆ ಪ್ರತಿ ತಿಂಗಳಿನಲ್ಲಿ ಬೇರೆ ಬೇರೆ ರೀತಿಯ ಸರ್ಪ್ರೈಸ್ ಗಿಫ್ಟ್, ಉಂಗುರ ಮತ್ತು ಹೊಸ ವರುಷದ ಪ್ರಯುಕ್ತ ಬಂಪರ್ ಪ್ರೈಸ್ ಆಗಿ ಲಕ್ಕಿ ಡ್ರಾ ದಲ್ಲಿ ಗ್ರಾಹಕರಿಗೆ ಆಲ್ಟೊ ಕಾರ್ ನ್ನು ಉಡುಗೊರೆಯಾಗಿ ನೀಡಿದ್ದಾರೆ. ಮೂರನೇ ಹಂತದ ಲಕ್ಕಿ ಡ್ರಾ ದಲ್ಲಿ ಆಲ್ಟೊ ಕಾರನ್ನು ಅಂಟೋನಿ ರೋಷನ್ ಅವರು
ಬಿಜೆಪಿಯ ಮಾಜೀ ಶಾಸಕ ಗೂಳಿಹಟ್ಟಿ ಶೇಖರ್ ಅವರು ನಾಗಪುರದ ಸಂಘ ಕೇಂದ್ರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂದು ನನಗೆ ಪ್ರವೇಶ ಕೊಡಲಿಲ್ಲ ಎಂದು ದೂರಿದ್ದಾರೆ. ಅದೇ ಸಮಯದಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಹೆಚ್ಚು ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿರುವುದು ವರದಿಯಾಗಿದೆ. ಇವೆಲ್ಲ ಒಳ ವೈರುಧ್ಯದ ವಿಷಯಗಳು. ಇದಕ್ಕೆ ಸಂವಾದಿಯಾಗಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಮತ್ತು ದಲಿತರ ಮೇಲೆ ಹಲ್ಲೆ ಹೆಚ್ಚಾಗಿರುವುದಾಗಿಯೂ ವರದಿಯಾಗಿದೆ. ಅದಕ್ಕೆ
ಬಿಲ್ಕಿಸ್ ಬಾನೊ ಅತ್ಯಾಚಾರದ ಸಂಬಂಧ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 11 ಜನರ ಬಿಡುಗಡೆಗೆ ಗುಜರಾತ್ ಸೂಕ್ತ ಸರಕಾರ ಆಗಿರಲಿಲ್ಲ. ಕಪಟತನ, ನ್ಯಾಯ ವಂಚನೆ ಮೂಲಕ ಅವರನ್ನು ಗುಜರಾತ್ ಸರಕಾರ ಬಿಡಿಸಿಕೊಂಡಿದೆ ಮತ್ತೆ ಅವರು ಕೂಡಲೆ ಜೈಲಿಗೆ ಹೋಗಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪು ನ್ಯಾಯಾಂಗದ ಗೌರವ ಹೆಚ್ಚಿಸಿದೆ. ಗುಜರಾತ್ ಸರಕಾರದ ಮುಖವಾಡ ಕಳಚಿದೆ. 2002ರಲ್ಲಿ ಗುಜರಾತಿನಲ್ಲಿ ನಡೆದ ಅಮಾನವೀಯ ಧಾರ್ಮಿಕ ಕೊಲೆ, ಸುಲಿಗೆ, ಹಲ್ಲೆ, ದರೋಡೆ,
ಫೋರ್ಡೇಸ್ ಸ್ಪಾಟ್ಸ್ ಎನ್ನುವುದು ಬಾಯಿಯ ಒಳಗೆ ಕೆನ್ನೆಯ ಒಳಭಾಗದಲ್ಲಿ, ತುಟಿಗಳ ಒಳಭಾಗದಲ್ಲಿ ಕಂಡು ಬರುವ ಬಿಳಿ ಮತ್ತು ಹಳದಿ ಮಿಶ್ರಿತ ಚಿಕ್ಕದಾದ ಉಬ್ಬುಗಳಾಗಿರುತ್ತದೆ. ನೋಡಲು ಒಂದು ರೀತಿಯಲ್ಲಿ ಅಸಹ್ಯವಾಗಿ ಕಾಣುವ ಈ ಸ್ಪಾಟ್ಗಳು, ರೋಗಿಗಳನ್ನು ಕೆಲವೊಮ್ಮೆ ದಿಗಿಲುಗೊಳಿಸಿ ಕ್ಯಾನ್ಸರ್ ಎಂದು ತಲೆÀಕೆಡಿಸಿಕೊಂಡು ದಂತ ವೈದ್ಯರನ್ನು ಸತಾಯಿಸುವುದು ಕಂಡುಬಂದಿದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಗಳ ಬಾಯಿಯೊಳಗಿನ ಕೆನ್ನೆಯ ಒಳಭಾಗ, ತುಟಿಗಳ ಒ¼ಭಾಗ
ರೋಗ ಪತ್ತೆಗೆ ರಹದಾರಿ ನೀಡುವ ನಾಲಗೆನಾಲಗೆ ನಮ್ಮ ದೇಹದ ಬಹಳ ಮುಖ್ಯವಾದ ಅಂಗ. ಜೀರ್ಣಾಂಗ ವ್ಯವಸ್ಥೆಯು ಪ್ರಾಥಮಿಕ ಹಂತದಲ್ಲಿ ಅಂದರೆ ಹೆಬ್ಬಾಗಿಲಿನಲ್ಲಿ ಇರುವ ನಾಲಗೆ, ಜೀರ್ಣ ಪ್ರಕ್ರಿಯೆಗೆ ಅತೀ ಅಗತ್ಯ. ನಾವು ತಿನ್ನುವ ಆಹಾರದ ರುಚಿ ಸವಿಯಲು, ಆಹಾರ ಪದಾರ್ಥಗಳನ್ನು ಸೂಕ್ತವಾಗಿ ಜಗಿಯಲು, ಸ್ಪಷ್ಟವಾಗಿ ಮಾತನಾಡಲು ನಾಲಗೆಯ ಸಹಕಾರ ಅತೀ ಅಗತ್ಯ. ಈ ಕಾರಣದಿಂದಲೇ ನಮ್ಮ ಹಿರಿಯರು “ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ” ಎಂದು ಹೇಳಿದ ಮಾತು ಬಹಳ
ಮಂಗಳೂರು: “ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ ಪ್ರಜ್ವಲನೆಗೈಯಲಿದ್ದಾರೆ” ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾಹಿತಿ ನೀಡಿದರು. “ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪರಮಾನಂದ ಸಾಲಿಯಾನ್ ಅವರಿಗೆ ದಿ. ವನಿತಾ
ಬಿಲ್ಕಿಸ್ ಬಾನು ಅತ್ಯಾಚಾರಕ್ಕೆ ಶಿಕ್ಷೆಗೆ ಒಳಗಾದವರನ್ನು ಬಿಜೆಪಿಯು ತಾನೇ ಬಿಡಿಸಿ ಸ್ವಾಗತ ಕಾರ್ಯಕ್ರಮ ಕೂಡ ನಡೆಸಿತ್ತು. ಸುಪ್ರೀಂ ಕೋರ್ಟು ಅವರನ್ನು ಮತ್ತೆ ಜೈಲಿಗೆ ಹೋಗಿ ಎಂದು ಬಿಜೆಪಿ ಮುಖಕ್ಕೆ ಮಂಗಳಾರತಿ ಮಾಡಿದೆ. ನ್ಯಾಯಾಂಗದ ಮೇಲಿನ ನಂಬಿಕೆ ಉಳಿಯುವಂತೆ ಮಾಡಿದೆ. ಬಿಲ್ಕಿಸ್ ಒಂದು ಪ್ರದೇಶ; ಗುಂಪು ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಆ ಹೆಸರಿನಿಂದಲೆ ಗುರುತಿಸಲಾಗಿದೆ. ಆಕೆಯ ಅತ್ಯಾಚಾರಕ್ಕೆ ಶಿಕ್ಷೆಗೊಳಗಾದ 11 ಜನರ ಬಿಡುಗಡೆ ಆಗಿತ್ತು. ಅದಕ್ಕೆ



























