Home Blog Left SidebarPage 311

ಮಂಗಳೂರು: ಎಂಡಿಎಂಎ ಮಾರಾಟ ಆರೋಪ, ಇಬ್ಬರ ಬಂಧನ 

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಜಾಲ್‌ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್‌ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಎಂಡಿಎಂಎ ಹಾಗೂ ಕೃತ್ಯಕ್ಕೆ

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿ ಧಾಮ ಸಂಪ್ರೋಕ್ಷಣೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ ಅವರು, ಹಿರೇ ಬಸದಿಯು ಅತ್ಯಂತ ಪ್ರಾಚೀನ ಬಸದಿಯಾಗಿದೆ. 24 ತೀರ್ಥಂಕರರ ಲೆಪ್ಪದ ಮೂರ್ತಿಗಳನ್ನು

ಪುತ್ತೂರು: ಗುತ್ತಿಗೆದಾರ ವಿಜಯ್ ಕುಮಾರ್  ಆತ್ಮಹತ್ಯೆ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ

ಮೂಡುಬಿದಿರೆ: ಕಿಡ್ನಿ ವೈಫಲ್ಯ, ಚಿಕಿತ್ಸೆಗೆ ಸ್ಪಂದಿಸಿದ ಸಾಯಿ ಮಾರ್ನಾಡ್ ಸೇವಾ ಸಂಘ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ.    ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ 3ರಿಂದ 4 ಸಾವಿರದಷ್ಟು ವೆಚ್ಚವಾಗುತ್ತದೆ. ತೀರ ಬಡತನದಲ್ಲಿರುವ ಈ ಕುಟುಂಬಕ್ಕೆ ಚಿಕಿತ್ಸೆಯ

ಮೂಡುಬಿದಿರೆ: ಪ್ರೇಮ್ ಬಹದ್ದೂರ್ ನಿಧನ

ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ.    ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.  ಬಹದ್ದೂರು ಅವರಿಗೆ ಪತ್ನಿ, ಓರ್ವ ಪುತ್ರ

ಪಂಜಾಬ್ : ಅರ್ಜುನ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಶವವಾಗಿ ಪತ್ತೆ

ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್‌ಪಿ- ಉಪ ಪೊಲೀಸ್  ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ ಬಂದಿದೆ. ರಾತ್ರಿ ಹೊಸ ವರುಷಾಚರಣೆ ಸಂಬಂಧ ದಲ್ಬೀರ್ ಸಿಂಗ್ ಹೋದವರು ಮನೆಗೆ ವಾಪಾಸು ಆಗಿಲ್ಲ. ಹಾಗಾಗಿ ಇಂದು ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು. ಪೋಲೀಸರು ಹುಡುಕಾಟ ನಡೆಸಿದಾಗ ಜಲಂಧರ್ ಹೊರ ವಲಯದ ಬಸ್ತಿ

ಆಂಧ್ರಪ್ರದೇಶ : ಎಕ್ಸ್‌ ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿ ಉಡಾವಣೆ

ಎಕ್ಸ್‌ ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ಮಿತ ಎಕ್ಸ್‌ ರೇ ಪೋಲಾರಿಮೀಟರ್ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್‌ ಪೊಸ್ಯಾಟ್’ ಸೇರಿದಂತೆ ವಿದ್ಯಾಸಂಸ್ಥೆಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಂಬಂಧಿಸಿದ ಇತರೆ 9 ಉಪಗ್ರಹಗಳನ್ನು

ನವದೆಹಲಿ : ಹೊಸ ವರುಷದ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ‘ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ. ಹೊಸ ಗುರಿ ಮತ್ತು ಉದ್ದೇಶಗಳೊಂದಿಗೆ ಮುನ್ನಡೆಯಲು ಹೊಸವರ್ಷ ಬರುತ್ತಿದೆ’ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ. ‘ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್

ಮಂಗಳೂರು: ಬ್ರಹ್ಮಸಮಾಜ ಕಾಂಪ್ಲೆಕ್ಸ್‌ನಲ್ಲಿ ಹೈಯರ್ ಎಕ್ಸ್‌ಕ್ಲೂಸಿವ್ ಸ್ಟೋರ್ ಶುಭಾರಂಭ

ಮಂಗಳೂರಿನ ನವಭಾರತ್ ವೃತ್ತದಲ್ಲಿರುವ ಬ್ರಹ್ಮ ಸಮಾಜ ಕಾಂಪ್ಲೆಕ್ಸ್‌ನಲ್ಲಿ ಡಿಜಿಟಲ್ ಪ್ಲಾನೆಟ್‌ನವರ ಹೈಯರ್ ಎಕ್ಸ್ ಕ್ಲೂಸಿವ್ ಸ್ಟೋರ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿಶ್ವದ ನಂಬರ್ ವನ್ ಹೋಮ್ ಅಪ್ಲೈಯನ್ಸಸ್ ಹಾಗೂ ಭಾರತದ ಮೂರನೇ ಅತೀ ದೊಡ್ಡ ಬ್ರ್ಯಾಂಡ್ ಆಗಿರುವ ಹೈಯರ್‌ನ ಎಕ್ಸ್‌ಕ್ಲೂಸಿವ್ ಸ್ಟೋರ್ ಮಂಗಳೂರಿನಲ್ಲಿ ಶುಭಾರಂಭಗೊಂಡಿತು. ನೂತನ ಹೈಯರ್‌ನ ಎಕ್ಸ್‌ಕ್ಲೂಸಿವ್ ಸ್ಟೋರ್‌ನ್ನು ಮೂಡುಬಿದಿರೆಯ ಆಳ್ವಾಸ್ ಸಂಸ್ಥೆಯ ಚೇರ್ಮನ್ ಡಾ. ಎಂ. ಮೋಹನ್ ಆಳ್ವಾ

ಮಂಗಳೂರು: ತಮಾಮ್ ಫರ್ನೀಚರ್ ವರ್ಲ್ಡ್ ನೂತನ ಶೋರೂಂ ಉದ್ಘಾಟನೆ

ಪೀಠೋಪಕರಣ ಉದ್ಯಮದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ತಮಾಮ್ ಫರ್ನೀಚರ್ ವರ್ಲ್ಡ್ ನೂತನ ಶೋರೂಂ ನಗರದ ಪಂಪ್‌ವೆಲ್‌ನ ಬಳಿ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಉದ್ಘಾಟನೆಗೊಂಡಿತು. ಹಿಂದುಸ್ತಾನ್ ಬಾವಾ ಬಿಲ್ಡರ್ಸ್‌ನ ಆಡಳಿತ ನಿರ್ದೇಶಕರಾದ ಬಾವಾ ಅಬ್ದುಲ್ ಖಾದರ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಮಂಜೇಶ್ವರ ಶಾಸಕರಾದ ಎ.ಕೆ.ಎಂ ಅಶ್ರಫ್ ಅವರು ಮಾತನಾಡಿ, ತಮಾಮ್ ಸಂಸ್ಥೆಯು ಸಾಮಾನ್ಯ ವರ್ಗದಿಂದ ಶ್ರೀಮಂತನವರೆಗೆ ಕೈಗೆಟಕುವ ದರದಲ್ಲಿ ವಸ್ತುಗಳನ್ನು ಖರೀದಿ