Home Blog Left SidebarPage 317

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎಂಟು ಮಂದಿಯ ರಕ್ಷಣೆ

ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ

ಪುತ್ತೂರು: ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ, ತೋಟ ನಾಶ

ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ನಾಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು ಜನತೆ ಅದರಲ್ಲೂ ಕೃಷಿಕರು ಆನೆ ದಾಳಿಯಿಂದ ಕಂಗಲಾಗಿದ್ದಾರೆ. ಪುತ್ತೂರಿನ ಪೆರ್ನಾಜೆ ಎಂಬಲ್ಲಿ ಬುಧವಾರ ತಡರಾತ್ರಿ ಕಾಡಾನೆ ಯೋಟಕ್ಕೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ಗಿಡ ಮರಗಳನ್ನು ನಾಶ ಮಾಡಿದೆ.

ಮಂಗಳೂರು:  ಡಿ.23ರಂದು ಕಣಚೂರು ಸಂಸ್ಥೆಯ ವತಿಯಿಂದ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023

ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ

ಬೈಂದೂರು: ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ

ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ  ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ ಸಲ್ಲಿಸಿದರು.  ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಶ್ರೀಮಂತವಾಗಿರುವ ಕ್ಷೇತ್ರ,

ತಮಿಳುನಾಡು ಮಂತ್ರಿ ಪೊನ್ಮುಡಿಯವರಿಗೆ ಶಿಕ್ಷೆ

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿಯವರಿಗೆ ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಭ್ರಷ್ಟಾಚಾರ ಆರೋಪದ ಕಾರಣಕ್ಕೆ ಮದರಾಸು ಹೈಕೋರ್ಟು ಮೂರು ವರುಷಗಳ ಸಾದಾ ಶಿಕ್ಷೆಯನ್ನು ಗುರುವಾರ ಬೆಳಿಗ್ಗೆ ವಿಧಿಸದೆ. ಮೊನ್ನೆ ಅಪರಾಧ ಸಾಬೀತು ಎಂದು ಸಾರಿದ ಉಚ್ಚ ನ್ಯಾಯಾಲಯವು ಇಂದು ಶಿಕ್ಷೆ ಎಷ್ಟೆಂದು ಸಾರಿತು. ಪೊನ್ಮುಡಿ ಮತ್ತು ಅವರ ಹೆಂಡತಿಯ ಹೆಸರಿನಲ್ಲಿ ರೂ. 1.75 ಕೋಟಿ ರೂಪಾಯಿಯ ಸಂಪತ್ತು ಇದ್ದು, ಅದು ಅವರ ಆದಾಯಕ್ಕಿಂತ 65.99% ಹೆಚ್ಚು ಎಂದು ಕೋರ್ಟು

ಬೆಳ್ತಂಗಡಿ: ಶಿಬಾಜೆಯಲ್ಲಿ ಅಂಗಡಿ ಧ್ವಂಸ: ಸ್ಥಳೀಯ ಮುಖಂಡರಿಂದ ಕೃತ್ಯ ಖಂಡನೆ

ಸುಮಾರು 25 ವರ್ಷಗಳಿಂದ ವರ್ಷಗಳಿಂದ ನಡೆಸುತ್ತಿದ್ದ ಅಂಗಡಿಯನ್ನು ರಾತ್ರೋ ರಾತ್ರಿ ದ್ವಂಸ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಾಸು ಪೂಜಾರಿ ಎಂಬವರಿಗೆ ಸೇರಿದ ಅಂಗಡಿಯನ್ನು ದ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಮುಖಂಡ ನವೀನ್ ನೆರಿಯ ಮಾತನಾಡಿ ಶಿಬಾಜೆ ಗ್ರಾಮದಲ್ಲಿ ಹಲವಾರು ಬೇಡದ ಚಟುವಟಿಕೆ ನಡೆಯುತ್ತಿವೆ. ಇದಕ್ಕೆ ದ್ವಂಸಕಾರಿ ತಂಡವೇ ಕಾರಣ. ಇಲ್ಲಿನ ದಲಿತರಿಗೆ ಹಾಗೂ ಇತರರಿಗೆ ಬದುಕಲು ಅವಕಾಶ ಕೊಡಿ ಎಂದು

ಸಾತ್ವಿಕ್ ರೆಡ್ಡಿ – ಚಿರಾಗ್ ಶೆಟ್ಟಿ ಜೋಡಿಗೆ ಖೇಲ್ ರತ್ನ

ಈ ಬಾರಿಯ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ಕಿರಣ್ ರೆಡ್ಡಿ ಮತ್ತು ಚಿರಾಗ್ ಶೆಟ್ಟಿಯವರಿಗೆ ನೀಡಲಾಗಿದೆ. ಇದೇ ವೇಳೆ 26 ಮಂದಿ ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಗಿದೆ. ಜಮ್ಮು ಕಾಶ್ಮೀರದ ಶೀತಲ್ ದೇವಿ ಕಾಲಿನಿಂದಲೇ ಬಿಲ್ಲೆಳೆದು ಬಾಣ ಬಿಟ್ಟು ಅಂತರರಾಷ್ಟ್ರೀಯ ಸಾಧನೆ ಮಾಡಿದವರು. ಅವರ ಜೊತೆಗೆ ಮೊಹಮದ್ ಶಮಿ, ಪಾರುಲ್ ಚೌಧರಿ, ನಸ್ರೀನ್, ಪ್ರಾಚಿ ಯಾದವ್, ವೈಶಾಲಿ, ಅದಿತಿ ಎಂದು 26 ಜನ ಅರ್ಜುನ

ಕುಪ್ಪಳ್ಳಿ:ಮಲೆನಾಡು ಕರಾವಳಿ ಜನಪರ  ಒಕ್ಕೂಟ ಎರಡು ದಿನಗಳ ಶಿಬಿರ ಯಶಸ್ವಿ

ಕುಪ್ಪಳ್ಳಿ: ಮಲೆನಾಡು ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ  ಎರಡು ದಿನಗಳ ನಾಯಕತ್ವ ಶಿಬಿರ ಯಶಸ್ವಿಯಾಗಿ ಅಂತ್ಯಗೊಂಡಿತ್ತು.ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಅನಿಲ್ ಹೊಸಕೊಪ್ಪ ಇವರ ತಂಡ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಎರಡು ದಿನಗ ನಾಯಕತ್ವ ಶಿಬಿರವನ್ನು‌ ಹಮ್ಮಿಕೊಂಡಿತ್ತು. ಶಿಬಿರಕ್ಕೆ ಚಿಕ್ಕಮಂಗಳೂರು, ಉಡುಪಿ, ಶಿವಮೊಗ್ಗ ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಜಿಲ್ಲೆ ಗಳಿಂದ ನೂರಾರು ಮಂದಿ‌ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆ

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೇಜಸ್ ತಾನು ಹಾವನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೋವನ್ನು ತಮ್ಮ ಗೆಳೆಯರೊಂದಿಗೂ ಹಂಚಿಕೊಂಡಿದ್ದಾರೆ. ಉರಿ ಬಿಸಿಲಿನಲ್ಲಿ

ಪಡುಬಿದ್ರಿ: ಡಿ.23ರಂದು ಸುಜ್ಲಾನ್ ಮುಂಭಾಗ ಭೂ ಅವ್ಯವಹಾರದ ವಿರುದ್ಧ ಪ್ರತಿಭಟನೆ: ಮಾಜಿ ಸಚಿವ ವಿನಯಕುಮಾರ್ ಸೊರಕೆ

ಸುಜ್ಲಾನ್ ಕಂಪನಿ ನಿರ್ಮಾಣ ಪೂರ್ವದಲ್ಲಿ ಪಡುಬಿದ್ರಿ, ನಂದಿಕೂರು, ಪಲಿಮಾರು ಪರಿಸರದಲ್ಲಿ ಕೆಐಡಿಬಿ ವತಿಯಿಂದ 1200 ಎಕ್ರೆ ಪ್ರದೇಶವನ್ನು ಭೂಸ್ವಾದೀನ ಮಾಡಿದ ಕಂಪನಿ ಇದೀಗ ನಷ್ಟ ಅನುಭವಿಸಿದ ಕಾರಣ ಆ ಜಾಗವನ್ನು ಕೆಐಡಿಗೆ ಮರಳಿಸಬೇಕಾಗಿದ್ದರೂ ಮರಳಿಸದೆ ಖಾಸಗಿ ವ್ಯಕ್ತಿಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡುವ ಮೂಲಕ ಅಕ್ರಮ ಎಸಗಲಾಗಿದ್ದು ಇದರ ವಿರುದ್ಧ ಸಾರ್ಜನಿಕವಾಗಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸುದ್ದಿಗೋಷ್ಠಿಯಲ್ಲಿ