Home Blog Left SidebarPage 323

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ

ಮಂಗಳೂರು: ಕಂಕನಾಡಿಯ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನ ಬಿಡುಗಡೆ

ಹೊಸ ಹೊಸ ಮಾದರಿಯ ದ್ವಿಚಕ್ರವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಮೋಟಾರ್‍ಸ್, ಇದೀಗ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನವನ್ನು ಕಂಕನಾಡಿಯ ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಕರೀಷ್ಮಾ ೨೧೦ಸಿಸಿಯ ದ್ವಿಚಕ್ರ ವಾಹನವನ್ನು ನಟರಾದ ಅರ್ಜುನ್ ಕಾಪಿಕಾಡ್ ಮತ್ತು ಅನೂಪ್ ಸಾಗರ್‌ರವರು ಮಾರುಕಟ್ಟೆಗೆ ಬಿಡುಗಡೆ

ಪಡುಬಿದ್ರಿ: ಯುವಕ ನಾಪತ್ತೆ, ಹೊಳೆಗೆ ಹಾರಿರುವ ಶಂಕೆ

ವ್ಯಕ್ತಿಯೋರ್ವರು ಸ್ಕೂಟರ್‌ನ್ನು ಉದ್ಯಾವರ ಸೇತುವೆಯ ಬಳಿ ಇಟ್ಟು ನಾಪತ್ತೆಯಾಗಿದ್ದು, ಅವರು ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸ್ಕೂಟರ್ ನೋಂದಾಣಿ ಸಂಖ್ಯೆಯ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಸ್ಕೂಟರ್ ಉಡುಪಿ ಮೂಲದ ರವೀಂದ್ರ ಎಂಬವರಿಗೆ ಸೇರಿದ್ದಾಗಿದ್ದು, ಅವರು ಉಡುಪಿಯ ಬೃಹತ್ತ್ ಎಲೆಕ್ಟ್ರಾನಿಕ್ ಮಳಿಗೆಯ ಚಾಲಕನಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಹೊಳೆಯಲ್ಲಿ ಹೆಲ್ಮೆಟ್ ತೇಲುತ್ತಿದ್ದು ಈಜು ಪಟ್ಟುಗಳು ನದಿಯಲ್ಲಿ ಆ ವ್ಯಕ್ತಿಗಾಗಿ ಜಾಲಾಡಿದರೂ

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು ನುಗ್ಗಿ ಕೂಗಾಡಿದ್ದು ಇಡೀ ಸಂಸತ್ತು ಎದ್ದು ಭಯಭೀತವಾಯಿತು. ಸ್ಪೀಕರ್ ಕೂಡಲೆ ಸ್ಥಾನದಿಂದ

ಮಂಗಳೂರು: ಗೂಗಲ್ ನಕ್ಷೆಯಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚು.

ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.

ನವದೆಹಲಿ: ಸಂಸತ್ ಎದುರು ಪ್ರತಿಭಟನೆ: ಪೊಲೀಸರಿಂದ ನೀಲಂ ಬಂಧನ

ಸರ್ವಾಧಿಕಾರ ನಿಲ್ಲಿಸಿ, ಅತ್ಯಾಚಾರ ತಡೆಯಿರಿ ಎಂದು ಸಂಸತ್ತಿನ ಹೊರಗಡೆ ಇಬ್ಬರು ಪ್ರತಿಭಟನೆ ನಡೆಸಿದರು. ನೀಲಂ ಎನ್ನುವ ಪ್ರತಿಭಟನೆ ನಡೆಸಿದ ಮಹಿಳೆಯನ್ನು ಪೋಲೀಸರು ಬಂಧಿಸಿದರು. ಅಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ನೀಲಂ ಅವರ ಸಂಗಾತಿಗಳು ಎನ್ನಲಾದ ಮತ್ತೂ ಮೂವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಜೈಭೀಮ್, ಜೈ ಭಾರತ್, ವಂದೇ ಮಾತರಂ ಘೋಷಣೆ ಕೂಗುತ್ತಿದ್ದ ಮಹಿಳೆ ನೀಲಂ ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು ಮತ್ತು ಸರಕಾರವು ಮಹಿಳೆಯರ

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು, ಬಂಧನ

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು ನುಗ್ಗಿ ಕೂಗಾಡಿದ್ದು ಇಡೀ ಸಂಸತ್ತು ಎದ್ದು ಭಯಭೀತವಾಯಿತು. ಸ್ಪೀಕರ್ ಓಂ ಬಿರ್ಲಾ ಕೂಡಲೆ ಸ್ಥಾನದಿಂದ

ಉಳ್ಳಾಲ: ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಾರಾಯಿ ದಂಧೆ: ಮೂವರ ವಶಕ್ಕೆ

ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಮಂಗಳವಾರ ತಡರಾತ್ರಿ ಪತ್ತೆಹಚ್ಚಿರುವ ಅಬಕಾರಿ ಪೊಲೀಸ್ರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್ ಹಾಗೂ ಅನ್ಸೀಫ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಪರಾರಿಯಾಗಿದ್ದಾನೆ ಎಂದು ಅಬಕಾರಿ ಪೊಲೀಸ್ರು ತಿಳಿಸಿದ್ದಾರೆ. ದಾಳಿ ವೇಳೆ ಸತೀಶ್ ತಲಪಾಡಿ ಮನೆಯಿಂದ ಲೀಟರ್ ಗಟ್ಟಲೆ

ಕಾಪು: ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ

ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು

ಕೇರಳ ಮುಖ್ಯಮಂತ್ರಿಯಿಂದ ಹಲ್ಲೆಗೆ ಸಂಚು:ರಾಜ್ಯಪಾಲ ಆರಿಫ್ ಮೊಹಮದ್ ಖಾನ್

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನನ್ನ ಮೇಲೆ ಹಲ್ಲೆಗೆ ಸಂಚು ನಡೆಸಿದ್ದಾರೆ ಎಂದು ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮದ್ ಖಾನ್ ಆರೋಪ ಮಾಡಿದ್ದಾರೆ. ದಿಲ್ಲಿಗೆ ಹೊರಟಿದ್ದ ರಾಜ್ಯಪಾಲರನ್ನು ವಿಮಾನ ನಿಲ್ದಾಣದ ಬಳಿ ತಡೆದ ಸಿಪಿಎಂ ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್‍ಎಫ್‍ಐನವರು ರಾಜ್ಯಪಾಲರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಕೂಡಲೆ ರಾಜ್ಯಪಾಲ ಆರಿಫ್ ಖಾನ್ ಅವರು ಸ್ಥಳಕ್ಕೆ ಬಂದ ಮಾಧ್ಯಮದವರಿಗೆ ನೀಡಿದ ಮಾಹಿತಿ ಇದು. ಮುಖ್ಯಮಂತ್ರಿ ಪಿಣರಾಯಿ