ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ಗೆ ಇಡಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ. ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳು ಚಿನ್ನದ ಪದಕಕ್ಕೆ ಭಾಜನವಾಗಿದೆ. ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು. ಈ ಕುರಿತು ಕೋಣಗಳ ಮಾಲೀಕರು
ನಿರಂತರ ಸಮಜೋಮುಖಿ ಕಾರ್ಯಗಳನ್ನೇ ತನ್ನ ಉಸಿರಾಗಿಸಿಕೊಂಡ ಪಡುಬಿದ್ರಿಯ ಆದ್ಯಾ ಫೌಂಡೇಷನ್ ವತಿಯಿಂದ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಪಡುಬಿದ್ರಿ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಸರಳ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ಮುಕ್ತೇಸರರಾದ ಜೀತೇಂದ್ರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಉದ್ಯೋಗ ಆಕಾಂಕ್ಷೀ ಗಳಿಗಾಗಿ ರಾಕೇಶ್ ಅಜಿಲ ಸಾರಥ್ಯದ ಆದ್ಯಾ
ವರನಟ ಡಾ. ರಾಜ್ಕುಮಾರ್ ಅವರ ಹುಟ್ಟೂರು ಗಾಜನೂರಿಗೂ, ಜಾರ್ಕುಮಾರ್ ಅವರ ಪೇರೂರು ಗ್ರಾಮಕ್ಕೂ ಏನು ಸಂಬಂಧ? ಈ ಪ್ರಶ್ನೆ ಹಲವರ ಹುಬ್ಬೇರಿಸಬಹುದು. ಪೇರೂರು ಪೆರಿಯ ಊರು. ಪೆರಿಯ ಪಿರಿಯ ಪ್ರಾಯದ ಹಳೆಯ ಊರು. ಹಾಗಾಗಿ ತೆಂಕಣ ಭಾರತದ ಇನ್ನೂರಕ್ಕೂ ಹೆಚ್ಚು ಪೇರೂರು (ಕನ್ನಾಡಿನ ಕೆಲವೆಡೆ ಹೇರೂರು ಆಗಿದೆ) ಗ್ರಾಮಗಳು ನದಿಯ ದಡಗಳಲ್ಲಿಯೇ ಇವೆ.ಗಾಜನೂರುಗಳು ಕೂಡ ಹಲವು ಇದ್ದು ಅವು ಕೂಡ ನದಿ ತೊರೆಯ ನೆರೆಯ ಊರುಗಳಾಗಿವೆ. ಗಾಜಿನ ಬಳೆ ತಯಾರಿಸುತ್ತಿದ್ದ ಊರುಗಳು
ಕುಂದಾಪುರ: ಸಾಕಷ್ಟು ಬಲಿಷ್ಠವಾಗಿದ್ದ ಬಿಲ್ಲವ ಸಮಾಜ 26 ಉಪಪಂಗಡಗಳಾಗಿ ಹರಿದು ಹಂಚಿ ಹೋಗಿದೆ. ಎಲ್ಲರೂ ಒಗ್ಗೂಡಿದರೆ ನಾವು ಇಡೀ ರಾಜ್ಯವನ್ನೇ ಆಳಬಹುದು. ಆದರೆ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್. ಆರ್ ಕಳವಳ ವ್ಯಕ್ತಪಡಿಸಿದರು. ನಗರದ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ ಬಿಲ್ಲವ ಸಮಾಜ ಸೇವಾ ಸಂಘ (ರಿ) ಕುಂದಾಪುರ ಇದರ 31 ನೇ ವರ್ಷದ ವಿದ್ಯಾರ್ಥಿವೇತನ ವಿತರಣೆ ಮತ್ತು
ಇದೇ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ತುಳುನಾಡಿನ ಕಂಬಳ ಆಯೋಜಿಸಿದ್ದ ಸಂಘಟಕರಿಗೆ ಬಿಬಿಎಂಪಿ- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ರೂ. 50,000 ದಂಡ ವಿಧಿಸಿದ್ದಾರೆ. ಅರಮನೆಯ ಕಾಂಪೌಂಡಿನ ಹೊರಗೆ ಹೇಗೆಂದರೆ ಹಾಗೆ ಬ್ಯಾನರ್ ಮತ್ತು ಫ್ಲೆಕ್ಸ್ ಹಾಕಲಾಗಿತ್ತು. ನಿಯಮ ಮೀರಿ ಇವೆಲ್ಲ ಇದ್ದುದರಿಂದ ಅವಕ್ಕೆ ಬಿಬಿಎಂಪಿ ದಂಡ ವಿಧಿಸಿದೆ. ಅಲ್ಲದೆ ಅವುಗಳನ್ನೆಲ್ಲ ತೆರವು ಮಾಡಿದೆ. ಉಳಿದಂತೆ 200 ಜೋಡಿಯಷ್ಟು ಕೋಣಗಳು ಭಾಗವಹಿಸಿದ ಬೆಂಗಳೂರು ಕಂಬಳ
ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್
ಡಿಸೆಂಬರ್ 9ರಂದು ದೇಶದಾದ್ಯಂತ ನಡೆಯಲಿರುವ ರಾಷ್ಟೀಯ ಲೋಕ ಅದಾಲತ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ವಿಚಾರಣೆಗೆ ಬಾಕಿಯಿರುವ ಹಳೆಯ ಪ್ರಕರಣಗಳನ್ನು ಎರಡೂ ಕಕ್ಷಿದಾರರ ಒಪ್ಪಿಗೆ ಮೇರೆಗೆ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸದವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶರ್ಮಿಳಾ ಸಿ ಎಸ್ ಹೇಳಿದರು. ಅವರು ಈ ಕುರಿತು
ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತಪಟ್ಟವರು. ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ
ರಾಜ್ಯದ ಪ್ರಮುಖ ಭಾಷೆಯಾದ ತುಳುವಿಗೆ ಹೆಚ್ಚುವರಿ ರಾಜ್ಯಭಾಷೆಯಾಗಿ ಮಾನ್ಯತೆ ನೀಡಲು ಪ್ರಯತ್ನಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ಆರಂಭಗೊಂಡಿರುವ ‘ಬೆಂಗಳೂರು ಕಂಬಳನಮ್ಮ ಕಂಬಳ’ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುರಾತನ ಕಾಲದಿಂದ ಬಂದಿರುವ ಕಂಬಳವು ಕರಾವಳಿಯ ಜಾನಪದ ಕಲೆ. ಅದು ಬೆಂಗಳೂರಿನಲ್ಲಿ ಯಾಕೆ ಎಂದು ಪ್ರಶ್ನಿಸಿದರು. ಕರಾವಳಿಯ ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಗಾಗಿ ಈ




























