Home Blog Left SidebarPage 349

ದೀಪಾವಳಿಯ ಪ್ರಯುಕ್ತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಭರ್ಜರಿ ಆಫರ್..!

ದೀಪಾವಳಿ ಹಬ್ಬವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಅಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗಾಗಿ ದೀಪಾವಳಿ ವಿಶೇಷ ಆಫರ್ ನೀಡ್ತಾ ಇದೆ. ನ.11ರಿಂದ 14ರವರೆಗೆ ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಸಂಸ್ಥೆ ಆಕರ್ಷಕ ಕೊಡುಗೆ ನೀಡ್ತಾ ಇದೆ. ಚಿನ್ನಾಭರಣ ಖರೀದಿಗೆ

ಉಡುಪಿ: ಹಿರಿಯ ಧೀಮಂತ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಇನ್ನಿಲ್ಲ.

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯಾನ್ಸ್ ನಲ್ಲಿ ಕರೆದಯ್ತೂತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥ ಗೊಂಡಿದ್ದರು.ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ

ಅರಬ್ಬಿ ಸಮುದ್ರದಲ್ಲಿ ನೀರು ಪಾಲಾಗಿದ್ದ ಮೀನುಗಾರನ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಸಮುದ್ರ ಪಾಲಾಗಿದ್ದ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವನನ್ನು ಗಂಗೊಳ್ಳಿ ಮೀನುಗಾರರ ರಕ್ಷಿಸಿದ ಘಟನೆ ನಡೆದಿದೆ. ಸುಮಾರು 25 ವರ್ಷಪ್ರಾಯದ ಮುರುಗನ್ ಎಂಬಾತ ಸದ್ಯ ಪವಾಡ ಸದೃಶ್ಯವಾಗಿ ಬದುಕುಳಿದ ಮೀನುಗಾರ. ಗಂಗೊಳ್ಳಿಯಿಂದ ಮೀನುಗಾರಿಕೆ ಕತೆಗಳಿದ್ದ 30 ಜನರಿದ್ದ ಬೋಟ್ ನವರಿಗೆ ಸುಮಾರು 14 ನಾಟಿಕಲ್ ಮೈಲ್ ದೂರದಲ್ಲಿ ವ್ಯಕ್ತಿಯೋರ್ವ ಸಮುದ್ರದಲ್ಲಿ ಈಜುತ್ತಿರುವುದು ಕಂಡುಬಂದಿದೆ. ಹತ್ತಿರಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಸಮುದ್ರದ

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮ ಶಿಕ್ಷಣವು ಅಗತ್ಯ – ಮಿಥುನ್ ರೈ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು ಅಭಿನಂದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ರೈ ಯವರು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ವರದಿ ಬಂದಿಲ್ಲ : ಎಸ್ಪಿ ರಿಷ್ಯಂತ್

ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ. ಸದ್ಯ ಅಪಘಾತದ ವಿಚಾರಕ್ಕೆ ಹತ್ಯೆಯಾಗಿದೆ ಎಂಬುದು ಸದ್ಯದ ತನಿಖೆಯಿಂದ ಹೊರ

ವಿಟ್ಲ: ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಕಾಮಗಾರಿ: ವಿಟ್ಲದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ: ಸಂಜೀವ ಮಠಂದೂರು

ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಟಿಎಲ್ ಗುತ್ತಿಗೆ ನೀಡಿ ಸ್ಟರ್ಲೈಟ್ ಕಂಪೆನಿ ಸ್ಥಳ ಸರ್ವೇ ಮೂಲಕ ವಿದ್ಯುತ್ ಲೈನ್ ಅಳವಡಿಕೆಯ ಕಾರ್ಯಾರಂಭಕ್ಕೆ ಮುಂದಾಗಿದೆ ಇದನ್ನು ವಿರೋಧಿಸುವುದಾಗಿ ತಿಳಿಸಿದರು. ಯೋಜನೆ ಕೇಂದ್ರ

ಮಂಗಳೂರು: ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯ ಮರಳು ನೀತಿಯೇ ಕಾರಣ: ಹರೀಶ್ ಕುಮಾರ್

ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಜಿಲ್ಲಾ

ಬೈಂದೂರು: ಅಕಾಲಿಕ ಮಳೆಯಿಂದಾಗಿ ಭತ್ತದ ಕೃಷಿಗೆ ಜಲ ದಿಗ್ಬಂಧನ

ಬೈಂದೂರು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಭತ್ತದ ಫಸಲು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಕೃಷಿಕರು ಕಂಗಾಲಾಗಿ ದಿಕ್ಕು ತೋಚದಂತಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದ ಭತ್ತದ ಪೈರುಗಳು ಹಾಗೂ ಕಟಾವಿನ ನಂತರ ಜಾನುವಾರುಗಳ ಒಣ ಹುಲ್ಲುಗಳು, ಜೊತೆಗೆ ಕಟಾವಿನ ನಡುವೆ ದ್ವಿದಳ ಧಾನ್ಯಗಳನ್ನು ಸಹ ಈಗಾಗಲೇ ಬಿತ್ತನೆ ಮಾಡಿದ್ದು, ಅದು ಕೂಡ ಮಳೆಯಿಂದ ಹಾನಿಯಾಗಿ ಅಪಾರವಾದ ಬೆಳೆ ಹಾಗೂ ಜಾನುವಾರುಗಳ ಮೇವಿನ ಹುಲ್ಲುಗಳು ಹಾನಿಯಾಗಿದೆ. ಕೋಣ್ಕಿ, ಬಡಾಕೆರೆ, ತಾರೀಬೇರು, ಜಡ್ಡಾಡಿ,

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ ಮನವಿ ಸಲ್ಲಿಸಿದರು. ಸಾರ್ವಜನಿಕರ

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಐದು ವಾಹನಗಳು ಜಖಂ..!!

ಸುರತ್ಕಲ್‍ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಯೊಂದು ಆಕಸ್ಮಿಕವಾಗಿ ಹಿಂದಕ್ಕೆ ಚಲಿಸಿ, ನಿಲ್ಲಿಸಿದ್ದ ನಾಲ್ಕು ಕಾರು, ಒಂದು ಬೈಕ್‍ಗೆ ಗುದ್ದಿ ಹಾನಿ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಚಾಲಕ ಲಾರಿಯನ್ನು ನಿಲ್ಲಿಸಿ ಹೊರಗೆ ತೆರಳಿದ್ದ. ಏಕಾಏಕಿ ಹಿಂದಕ್ಕೆ ಚಲಿಸಿದ ಲೋಡ್ ಲಾರಿ ಡಿವೈಡರ್ ಬಳಿ ತಿರುವು ತೆಗೆದುಕೊಂಡು ಬಂದಿದೆ. ಇದರಿಂದ ಮಾರ್ಕೆಟ್ ಅಂಗಡಿಗೆ ಬಂದಿದ್ದ ಗ್ರಾಹಕರ ನಾಲ್ಕು