Home Blog Left SidebarPage 350

ಕೆ. ಷರೀಫಾ ಅವರ ʼನೀರೊಳಗಣ ಕಿಚ್ಚುʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತೆ ಕೆ. ಷರೀಫಾರವರ ʼನೀರೊಳಗಣ ಕಿಚ್ಚುʼ ಕಥಾಸಂಕಲನ ಆಯ್ಕೆಯಾಗಿದೆ. ಕೃಷಿ ಮಾರುಕಟ್ಟೆ

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವು

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯಮ್ ಕೊನ್ರಾಡ್ ರೊಂಟ್‍ಜೆನ್ ಎಂಬ ವಿಜ್ಞಾನಿ ಕ್ಷ-ಕಿರಣಗಳನ್ನು ಪತ್ತೆ ಹಚ್ಚಿದನು. ಕ್ಯಾಥೋಡ್ ಕಿರಣಗಳ ಬಗ್ಗೆ ಸಂಶೋಧನೆ ನಡೆಸುವಾಗ

ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!

ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ

ಅಲೆವೂರು: ಟೆಂಪೋ ಬೈಕ್ ಡಿಕ್ಕಿ ಯುವಕ ಸಾವು

ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್ ( 28) ಮೃತ ದುರ್ದೈವಿಯಾಗಿದ್ದಾರೆ.

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ,ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ

ಬೆಳ್ತಂಗಡಿ: ತೆಕ್ಕಾರಿನಲ್ಲಿ ದೇವರ ಪುರಾತನ ಭಗ್ನ ವಿಗ್ರಹ ಪತ್ತೆ

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಭೈಲು ದೇವರ ಗುಡ್ಡೆಯಲ್ಲಿ ಬಾವಿ ನಿರ್ಮಾಣದ ವೇಳೆ 12ನೇ ಶತಮಾನದ್ದೆನ್ನಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಹಾಗೂ ಇನ್ನಿತರ ಪರಿಕರಗಳು ಪತ್ತೆಯಾಗಿವೆ. ದೇವಾಲಯವಿತ್ತೆನ್ನಲಾದ ದೇವರಗುಡ್ಡೆ ಪ್ರದೇಶದಲ್ಲಿ ಬೆಳ್ತಂಗಡಿ ಶಾಸಕರ ಮುತುವರ್ಜಿಯಿಂದ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಸಂಬಂಧ 5 ದಿನಗಳ ಹಿಂದೆ ಸ್ಥಳದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗಿತ್ತು. ಜೋತಿಷಿ ವೆಂಕಟರಮಣ ಭಟ್

ಮಂಗಳೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ನ.10 ರಂದು ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

ಮಂಗಳೂರು ಎ.ಬಿ.ಶೆಟ್ಟಿ ಸರ್ಕಲ್‌ನ ಪಾರಡಿಗಂ ಪ್ಲಾಜಾದಲ್ಲಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ನ.10 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ್ ಕಾಮತ್ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಜಂಟಿ ನಿದೇರ್ಶಕರಾಧ ಸುದರ್ಶನ್ ಬಿ ಹೊಳ್ಳ ಅವರು

ಕುಂದಾಪುರ: ಕೊಲ್ಲೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಕರವೇಯಿಂದ ಅಭಿಯಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಕೊಲ್ಲೂರಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ 70% ಕನ್ನಡ ಹಾಗೂ ಉಳಿದ ಭಾಷೆಗಳಿಗೆ ಶೇಕಡಾ 30/ ಕಡ್ಡಾಯಗೊಳಿಸುವಂತೆ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಉದ್ದೇಶಿಸಿ ಮಾತನಾಡಿದ ಅ.ರಾ