Home Blog Left SidebarPage 354

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ

ನೆಲ್ಯಾಡಿ: ಕನ್ನಡಿಗರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು -ಗಣರಾಜ್ ಕುಂಬ್ಳೆ

ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಅವರು ವಹಿಸಿ ಕನ್ನಡಿಗರು ನಾಡು ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು, ಈ ಕೆಲಸ ವಿದ್ಯಾರ್ಥಿಗಳಿಂದಲೇ

ಮಂಗಳೂರು: ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ : ಶಾಸಕ ಡಾ| ವೈ. ಭರತ್ ಶೆಟ್ಟಿ

‘ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ’ ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ಹೇಳಿದರು. ಅವರು ಕುಳಾಯಿಯಲ್ಲಿ ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ (ರಿ.) ಇದರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು. ಜಿಂದಾಲ್ ಮಂಗಳೂರು ಕಲ್ಲಿದ್ದಲು ಘಟಕ ಮುಖ್ಯಸ್ಥ ಎಲ್. ರಾಮನಾಥನ್ ಮಾತನಾಡಿ

ಬೆಳ್ತಂಗಡಿ: ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ

ಬೆಳ್ತಂಗಡಿ ತಾಲೂಕಿನ ಶಿಶಿಲ ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮೇಳದ ಭಾಗವತರಾದ ಮೋಹನ್ ಶಿಶಿಲ ಮಾತನಾಡಿ, ಯಕ್ಷಗಾನ ಕಲೆ ಹಲವಾರು ವರ್ಗಗಳಿಂದ ಇದೆ ಆದರೆ ಜನರು ಈಗೀಗ ಟಿವಿ ಮೊಬೈಲ್ ಗಳಲ್ಲಿ ಬೇರೆ ಬೇರೆ ಕಾರ್ಯಕ್ರಮ ನೋಡುತ್ತಾರೆ ಆದ್ದರಿಂದ ಹಳ್ಳಿ ಜನರಿಗೆ ಯಕ್ಷಗಾನದ ಅರಿವು ಮೂಡಿಸುವ ಕಾರ್ಯಕ್ರಮ ನಾವು ಮಾಡುತ್ತಿದ್ದೇವೆ,ಇದರಿಂದ ಬಂದ ಉಳಿಕೆ ಹಣವನ್ನು ಅಂಗವಿಕಲರಿಗೆ ಹಾಗೂ

ಮೂಡುಬಿದಿರೆ: ವಿಶೇಷ ಚೇತನರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ದ.ಕ ಜಿಪಂ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ ಸ್ವರಾಜ್ಯ ಮೈದಾನದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ರ್ಯದ ಮಕ್ಕಳ ಕ್ರೀಡಾ ಕೂಟಕ್ಕೆ ಮೂಡುಬಿದಿರೆ ರೋಟರಿ ಕ್ಲಬ್‍ನ ಅಧ್ಯಕ್ಷ ನಾಗರಾಜ್ ಬಿ.ಚಾಲನೆಯನ್ನು ನೀಡಿದರು.

ನೆಲ್ಯಾಡಿ: ಬೈಕ್, ಇಕೊಮೆಟ್ ಡಿಕ್ಕಿ-ಬೈಕ್ ಸವಾರ ಮೃತ್ಯು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ಬೈಕ್ ಹಾಗೂ ಇಕೊಮೆಟ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನ.1ರಂದು ರಾತ್ರಿ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮೆಹತೋ(35ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಸೆಂಟ್ರಿಗ್ ಕೆಲಸ ಮಾಡಿಕೊಂಡಿದ್ದರು. ಇವರು ನ.1ರಂದು ಸಂಜೆ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಾನ್ಪರೆನ್ಸ್‌ ಹಾಲ್‌ನಲ್ಲಿ ಚುನಾವಣೆ ಕುರಿತು ಹಿಯರಿಂಗ್‌ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್‌ ಮತ್ತಿತರರು ಅಂದಿನ

ವಿಶ್ವ ಬೊಜ್ಜು ಜಾಗ್ರತಿದಿನ..ಅಕ್ಟೋಬರ್26

ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ

ಪುತ್ತೂರು: ಕ್ಯೊಲದಲ್ಲಿ ಅಡಿಕೆ ತುಂಬಿದ ಗೋಣಿ ಕಳವು ಪ್ರಕರಣ: ನಾಲ್ವರ ಬಂಧನ

ಪುತ್ತೂರು: ಬಡಗನ್ನೂರು ಗ್ರಾಮದ ಕ್ಯೂಲ ದ ಹಳೆಯ ಮನೆಯೊಂದರ ಅಟ್ಟದಲ್ಲಿದ್ದ ಅಡಿಕೆ ತುಂಬಿದ ಗೋಣಿಗಳನ್ನು ಕಳವು ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ, (20) ಹಾಗೂ ಜಯಚಂದ್ರ, (21) ಮತ್ತು ನಿಡ್ಪಳ್ಳಿ ಗ್ರಾಮದ ನಿವಾಸಿಗಳಾದ ಅಶೋಕ, (24) ಮತ್ತು ಪುನೀತ್ (20) ಬಂಧಿತರು ಕ್ಯೋಲ ಸಮೀಪದ ನವೀನ್ ರೈ ಎಂಬವರ ಹಳೆಯ ಮನೆಯ

ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ : ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಂದು ಬಹಳ ಸಂತೋಷದ ದಿನ. ಈ ದಿನ ಬೇರೆ ವಿಚಾರವನ್ನು ನಾನು ಮಾತನಾಡಲ್ಲ. ಎಂಇಎಸ್ ಗಲಾಟೆ ಮತ್ತು ಮಹಾರಾಷ್ಟ್ರ ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದರವ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಅಗತ್ಯ ಕಾನೂನು ಕ್ರಮಗಳಿಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆ. ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರು.