ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು ಈ ಪೈಕಿ ಅಪ್ಪೆ ಮಂತ್ರದೇವತೆ ಟ್ಯಾಬ್ಲೋ ಜನರ ಗಮನ ಸೆಳೆಯಿತು. ನಗರದ ಪದವು ಫ್ರೆಂಡ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 9ನೇ ವರ್ಷದ ಕಾಣಿಕೆಯಾಗಿ ಮಂತ್ರದೇವತೆ ದೈವದ ಸ್ತಬ್ಧಚಿತ್ರ ಮಾಡಲಾಗಿತ್ತು. ಅಪ್ಪೆ ಮಂತ್ರದೇವತೆ ಹೆಸರಿನ ಟ್ಯಾಬ್ಲೋದಲ್ಲಿ ದೈವದ ಅಪಚಾರ ಆಗದಂತೆ, ದೈವಾರಾಧನೆ ಮಹತ್ವ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಕ್ಟೋಬರ್ 28ರಂದು ಬೃಹತ್ ಮೆರವಣಿಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು
ಮೂಡುಬಿದಿರೆ: ಭಗವದ್ಗೀತೆ, ಸಂಗೀತ, ನೃತ್ಯ, ನಾಟಕ, ಸಂಸ್ಕೃತಿ, ಶಿಕ್ಷಣ ಗಳ ವಿಶಿಷ್ಟ ಸಮ್ಮೇಳನದ ನಾಟ್ಯಾಯನ ಕಾರ್ಯಕ್ರಮ ನೀಡುತ್ತಿರುವ ಮೂಡುಬಿದಿರೆಯಅಯನಾ. ವಿ. ರಮಣ್ ಅನನ್ಯ- ಅದ್ಭುತ ಕಲಾವಿದೆ. ಅಸಾಧಾರಣ ಸ್ಮರಣ ಶಕ್ತಿ, ಪರಿಣಾಮಕಾರಿ ಅಭಿನಯದ ಅದ್ಭುತ ಸಾಧನೆ ಮಾಡಿದ ಕಲಾವಿದೆ. ಈಕೆಗೆ ರಾಷ್ಟçಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಮುಂಬೈ ಶ್ರೀಗಾಂದೇವಿ ಅಂಬಿಕಾ ಶ್ರೀ ಆದಿನಾಥೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಪೆರಣ0ಕಿಲ ಹರಿದಾಸ್ ಭಟ್
ಮೂಡುಬಿದಿರೆ:ವಿಜಯದಶಮಿ ಪ್ರಯುಕ್ತ ಮೂಡುಬಿದಿರೆ ಶ್ರೀ ಜೈನಮಠಹಾಗೂ ಬಸದಿಗಳಲ್ಲಿ ತೆನೆಹಬ್ಬ, ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಅವರ ಮಾರ್ಗದರ್ಶನದಲ್ಲಿ ನಡೆಯಿತು. ದೇಶದ ಸಮಸ್ತರಿಗೆ ಒಳಿತಾಗಲಿ. ಕಾಲ ಕಾಲಕ್ಕೆ ಮಳೆ ಬಂದು ಪ್ರಕೃತಿ ವಿಕೋಪ ವಾಗದೆ, ಲೋಕದಲ್ಲಿ ಶಾಂತಿ, ಸುಭಿಕ್ಷೆ ಉಂಟಾಗಲಿ ಎಂದು ಭಟ್ಟಾರಕ ಸ್ವಾಮೀಜಿ ನುಡಿದರು. ಸಾವಿರಕಂಬ ಬಸದಿ ಹಾಗೂ ಗುರು ಬಸದಿಯಿಂದ ಜೈನಪೇಟೆಯ ಮೂಲಕ ಅಮ್ಮನವರ ಬಸದಿ
ಕಡಬ: ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಆನೆ ಹಾಗೂ ಇತರ ಪ್ರಾಣಿಗಳ ಉಪಟಳ ಮಿತಿ ಮೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಗ್ರಹಿಸಿ ಅ.26ರಂದು ಕಡಬದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಐತ್ತೂರು ಮರ್ಧಾಳ ಜಾಗೃತ ರೈತ ಕುಟುಂಬಗಳ ಒಕ್ಕೂಟದ ಅಧ್ಯಕ್ಷ ಅತ್ಯಡ್ಕ ನಾರಾಯಣ ಶೆಟ್ಟಿ ತಿಳಿಸಿದ್ದಾರೆ. ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆನೆ ಉಪಟಳದಿಂದ ಬೇಸತ್ತ ರೈತರು ಒಗ್ಗೂಡಿ
ಸುರತ್ಕಲ್ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಸರಣಿ ಅಪಘಾತಗಳು ನಡೆದಿದ್ದು, ಓರ್ವ ಬೈಕ್ ಸವಾರ ಮೃತಪಟ್ಟರೆ ಉಳಿದ ಅಪಘಾತಗಳಲ್ಲಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಕುಳಾಯಿಯ ಹೊನ್ನಕಟ್ಟೆ ಬಳಿ ಪಿಕಪ್ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಿತ್ರಾಪುರದ ಬಸ್ ನಿಲ್ದಾಣದ ಸಮೀಪದಲ್ಲಿ ಸ್ಕೂಟರೊಂದು ಸ್ಕಿಡ್ ಆಗಿದ್ದು, ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕಂಪಾಡಿ
ಇತಿಹಾಸ ಪ್ರಸಿದ್ಧ ಬೈಂದೂರು ಬಂಕೇಶ್ವರಾ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಐತಿಹಾಸಿಕ ಹುಲಿ ಕೊಲ್ಲುವ ಕಾರ್ಯಕ್ರಮ ನಡೆಯಿತು. ಬೈಂದೂರಿನ ಸುತ್ತಮುತ್ತಲಿನ ಜನರು ಮಹಾಕಾಳಿ ಅಮ್ಮನವರಿಗೆ ನವರಾತ್ರಿಯ ಸಂದರ್ಭದಲ್ಲಿ ಸೇವೆ ಹಾಗೂ ಹರಕೆಯ ರೂಪದಲ್ಲಿ ಹುಲಿ ವೇಷ ತೊಟ್ಟು ಕುಣಿಯುವ ಪರಿ ಹಿಂದಿನಿಂದ ನಡೆದುಕೊಂದು ಬಂದಿದೆ. ಮಕ್ಕಳು ದೊಡ್ಡವರು ಭೇದವಿಲ್ಲದೇ ದೇವರ ಹರಕ್ಕೆಯನ್ನು ಸಲ್ಲಿಸಿದರು. ಬಳಿಕ ನವರಾತ್ರಿಯ ಕೊನೆಯ ದಿನವಾದ ವಿಜಯ ದಶಮಿಯಂದು ದೇವಿಯನ್ನು ಹುಲಿಯ
ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ
ಮೂಡುಬಿದಿರೆ : ತಾಲೂಕಿನ ಮಾರೂರು ಗ್ರಾಮದ ಅರಮನೆ ಬಳಿಯ ರಾಜು ಶೆಟ್ಟಿ -ರತಿ ದಂಪತಿಯ ಪುತ್ರ ಸಂದೀಪ್ ಎಂ ಶೆಟ್ಟಿ ಮಾರೂರು ಇವರು ಭಾರತೀಯ ಗಡಿ ಭದ್ರತಾ ಸೇನೆಗೆ ಆಯ್ಕೆಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಮಾರೂರು ಹೊಸಂಗಡಿ ಇಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಎಸ್ ಡಿ ಎಂ ಪೆರಿಂಜೆಯಲ್ಲಿ ಮುಗಿಸಿ, ಪದವಿಪೂರ್ವ ಶಿಕ್ಷಣವನ್ನು ಸರಕಾರಿ ಪಿಯು ಕಾಲೇಜು ವೇಣೂರಲ್ಲಿ ಹಾಗೂ ಪದವಿ ಶಿಕ್ಷಣವನ್ನು ಮೂಡುಬಿದಿರೆ ಧವಲಾ ಕಾಲೇಜಿನಲ್ಲಿ
ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.




























