Home Blog Left SidebarPage 363

ಮಂಗಳೂರು: ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯಿಂದ ಶ್ರೀ ಶಾರದಾ ಪೂಜಾ ಮಹೋತ್ಸವ

ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ನಗರದ ಶ್ರೀ ವಿಠೋಭ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದ ಸಭಾಗೃಹದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.23 ರ ವರೆಗೆ ನಡೆಯಲಿದೆ.ಅ.18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಅ.19ರಂದು ದೇವಿಯ ಪ್ರತಿಷ್ಠೆ, ಅ.20ರಂದು ಚಂಡಿಕಾ ಹವನ, ಸಾರ್ವಜನಿಕ ಮಹಾ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿoಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ, ಅರಣ್ಯಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕ ಹರೀಶ್ ಪೂಂಜಾ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ ದೂರು ನೀಡಿದ್ದಾರೆ. ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ

ಮೂಡುಬಿದಿರೆ:ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ ಪದಕ ಪಡೆದರೆ, ಮಹಿಳಾ ವಿಭಾಗದಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ ಎಸ್.ಆರ್ 87 ಕೆ.ಜಿ ದೇಹತೂಕ ವಿಭಾಗದಲ್ಲಿ ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದರು. ಕ್ರೀಡಾಪಟುಗಳ

ಮಂಗಳೂರು: ಚಿತ್ರಾಪುರ ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ

ಅಕ್ಟೋಬರ್ 20 : ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ

ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು ಮುಂತಾದವುಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಲಾಗುತ್ತದೆ. ಇದರ ಜೊತೆಗೆ ರೋಗದ ಚಿಕಿತ್ಸೆಯ

ಮಂಗಳೂರು: ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆ

ಯಕ್ಷಗಾನ ಪರಂಪರೆಯ ವಾಲಿ-ಸುಗ್ರೀವರ ಒಡ್ಡೋಲಗ ದಾಖಲೀಕರಣದ ವಿಡಿಯೋ ಮಧುಸೂಧನ ಅಲೆವೂರಾಯ ಅವರ ಪ್ರಸಿದ್ಧ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾಭವನದಲ್ಲಿ ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆಗೊಂಡಿತು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರು ಮಾತನಾಡಿ, ರಾಷ್ಟ್ರಪ್ರಶಸ್ತಿ ಪುರಸ್ಕøತ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರಿಯವರ

ಮಂಗಳೂರು: ಪಣಂಬೂರು ಕಡಲ ತೀರದಲ್ಲಿ ಇಬ್ಬರ ಶವ ಪತ್ತೆ

ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ಇವರಿಬ್ಬರು ಮನೆಯಲ್ಲಿ ಹೇಳದೇ ಬೆಂಗಳೂರಿನಿಂದ ತೆರಳಿರುವುದಾಗಿ ಪೆÇಲೀಸರಿಗೆ ಪ್ರಾಥಮಿಕ ಮಾಹಿತಿ ದೊರಕಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೆÇಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು

ಬಹರೈನ್: ಅ.27ರಂದು “ಎಲ್ಲಾದರೂ ಇರು ಎಂತಾದರೂ ಇರು” ಕನ್ನಡ ಕಿರು ಚಲನಚಿತ್ರ ಪ್ರೀಮಿಯರ್ ಪ್ರದರ್ಶನ

ಬಹರೈನ್ ದ್ವೀಪರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿರುವ ಕಿರುಚಲನ ಚಿತ್ರ “ಎಲ್ಲಾದರೂ ಇರು ಎಂತಾದರೂ ಇರು” ಇದೀಗ ತೆರೆಗೆ ಬರಲು ಸಿದ್ಧವಾಗಿ ನಿಂತಿದೆ. ಕನ್ನಡಿಗ ಚರಣ್ ಅಕ್ಷಯ್ ರವರು ಇಂತಹ ಒಂದು ಸಾಹಸಕ್ಕೆ ಕೈ ಹಾಕಿದ್ದು, ಈ ಚಿತ್ರವು ಅಕ್ಟೋಬರ್ 27ರಂದು ಮನಾಮದಲ್ಲಿರುವ ಅಲ್ ಹಮ್ರಾ ಚಿತ್ರ ಮಂದಿರದಲ್ಲಿ ಪ್ರೀಮಿಯರ್ ಪ್ರದರ್ಶನ ಕಾಣಲಿದೆ. ಸ್ನೇಹಿತರ ಗಾಢ ಸ್ನೇಹದ ಜೊತೆಗೆ ಕನ್ನಡ ನಾಡು, ನುಡಿಯ ಬಗ್ಗೆ ಅವರಿಗಿರುವ ಕಾಳಜಿಯ ಎಳೆಯೊಂದನ್ನು ಇಟ್ಟುಕೊಂಡು

ಮಂಜೇಶ್ವರ: ನೆತ್ತಿಲ ಪದವು ಗೋವಿಂದ ಪೈ ರಸ್ತೆ ಕಳಪೆ ಕಾಮಗಾರಿ ಆರೋಪ

ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ