Home Blog Left SidebarPage 404

ಬೆಳ್ತಂಗಡಿ: ಮೇಲಂತಬೆಟ್ಟು ಬೈಕ್ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ..!

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‍ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಬೈಕ್‍ನಲ್ಲಿದ್ದ 2.5

ಮೂಡುಬಿದಿರೆ: ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿದಂತ್ತಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಅವರು ರಾಜ್ಯ ದೈಹಿಕ ಶಿಕ್ಷಣ

ಕಾರ್ಕಳ: ರಸ್ತೆ ಬದಿಯಿದ್ದ ಅಪಾಯಕಾರಿ ಮರ ತೆರವು

ಕಾರ್ಕಳ ಪುರಸಭೆ ವ್ಯಾಪ್ತಿಯ ಆನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಮರ ತೆರವು ಕಾರ್ಯ ನಡೆಯಿತು. ಬೃಹತ್ಕಾರದ ಮರದ ಕೊಂಬೆಗಳನ್ನು ತೆರವು ಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು. ಪ್ರತಿನಿತ್ಯ ನೂರಾರು ವಾಹನಗಳು ಮತ್ತು ಸಾವಿರಾರು ನಾಗರಿಕರು ಸಂಚರಿಸುವ ರಸ್ತೆಯ ಪಕ್ಕದಲ್ಲಿ ತುಂಬಾ ಹಳೆಯದಾದ ಬೃಹತ್ಕಾರದ ಮರ ತೀರ ಅಪಾಯಕಾರಿಯಾಗಿತ್ತು. ಸಾರ್ವಜನಿಕರು ಅನೇಕ ಬಾರಿ ಪುರಸಭೆಗೆ ಮತ್ತು ಅರಣ್ಯ ಇಲಾಖೆಗೆ ಮರ ತೆರವಿಗೆ ಮನವಿಗಳನ್ನು

ತೊಕ್ಕೊಟ್ಟು: ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಆಫರ್

ತೊಕೊಟ್ಟುವಿನಲ್ಲಿರುವ ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಡಿಸೆಂಬರ್ 31ರ ವರೆಗೆ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಝೀರೋ ಡೌನ್ ಪೇಮೆಂಟ್, ಬೈಕ್‍ಗಳ ಖರೀದಿಗೆ ಅವಕಾಶ ನೀಡುತ್ತಿದ್ದಾರೆ. ಎಫ್‍ಜಡ್‍ಎಕ್ಸ್ ಮತ್ತು ಎಫ್‍ಜಡ್‍ಎಸ್‍ವಿ3 ಬೈಕ್‍ಗಳಿಗೆ 5 ಸಾವಿರದವರೆಗೆ ರಿಯಾಯಿತಿ ಇದೆ. ಅತೀ ಹೆಚ್ಚು ಮೈಲೇಜ್, ಫುಲ್ ಹೆಲ್ಮೆಟ್, ಫುಲ್ ಟ್ಯಾಂಕ್ ಪೆಟ್ರೋಲ್, 1 ಸಾವಿರ

ಮಂಗಳೂರಿನ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಸಂಭ್ರಮ – ಗಮನ ಸೆಳೆದ ಪೂಕಳಂ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಏಕೈಕ ಹಬ್ಬವೇ ಓಣಂ. ಅಂತಹ ಓಣಂ ಹಬ್ಬವನ್ನು ಮಂಗಳೂರಿನಲ್ಲೂ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ ಸಾನಿಧ್ಯ ಸಂಸ್ಥೆಯಲ್ಲಿ ಓಣಂ ಹಬ್ಬದ ಸಂಕೇತವಾಗಿ ಪೂಕಳಂನ್ನು ರಚಿಸಿ ವಿಶೇಷವಾಗಿ ಆಚರಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ಪೊಲೀಸ್ ಉಪ ಆಯುಕ್ತರಾದ

ಉಳ್ಳಾಲ: ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ

ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ಉಡುಪಿ: ಮಣಿಪಾಲ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಒಂದು ವರ್ಷದ ಮಗುವಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸಿನ್ಸಿ ಹೆಸರಿನ ತೀವ್ರ ತರಹದ ರೋಗ ನಿರೋಧಕ ಶಕ್ತಿ ಕೊರತೆ ಕಾಯಿಲೆ ಪತ್ತೆಯಾಗಿತ್ತು. ಅಸ್ಥಿಮಜ್ಜೆ ಕಸಿ ಮಾತ್ರವೇ ಮಗುವಿನ ಕಾಯಿಲೆ ಗುಣಪಡಿಸಬಲ್ಲ ಇದ್ದ ಏಕೈಕ ಚಿಕಿತ್ಸೆಯಾಗಿದ್ದರಿಂದ

ಬೈಂದೂರು: ಸಹಾಯದ ನಿರೀಕ್ಷೆಯಲ್ಲಿ ಚಂದು ಕುಟುಂಬ

ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡು ಆರು ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಎರಡು ವರ್ಷಗಳ ಹಿಂದಿನ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದ ಕಾರಣ ಮನೆಯೂ ನಾಶವಾಗಿದೆ. ಇಂದು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರು ಭೇಟಿ ನೀಡಿ ಚಂದು ಅವರ ಮನೆಯ

ಬ್ರಹ್ಮಾವರ : ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ಹೊಸ ತಂತ್ರಜ್ಞಾನದ ಸಿಸಿ ಕ್ಯಾಮರಾ ಅಳವಡಿಕೆ

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ದಾನಿಗಳ ನೆರವಿನಿಂದ ಹೊಸ ತಂತ್ರಜಾÐನದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇತ್ತೀಚೆಗೆ ಬಾರಕೂರಿನಲ್ಲಿ 3 ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮಾರಾಕ್ಕೆ ಬಟ್ಟೆ ಮುಚ್ಚಿ ಅಲ್ಲಿರುವ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿತ್ತು. ಇದೀಗ ಅಳವಡಿಸಿದ್ದ ಸಿಸಿ ಕ್ಯಾಮರಾ ಹೊಸ ತಂತ್ರಜ್ಞಾನದ್ದಾಗಿದ್ದು ಮಂದ ಬೆಳಕಿನಲ್ಲಿ ಕೂಡಾ ವ್ಯಕ್ತಿ, ವಾಹನಗಳ

ಮೈಸೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.