ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಭೇಟಿ ನೀಡಿದರು. ಶ್ರೀ ಮಂಜುನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಶ್ರಾವಣ ಮಾಸದ ಶುಭ ಸೋಮವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಶ್ರೀ ಮಂಜುನಾಥ ದೇವರು ರಾಜ್ಯದ ಜನರಿಗೆ
ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ನಗರಭಾಗ ಸೇರಿದಂತೆ ಹೇರೂರಿನಿಂದ ಉಪ್ಪಿನಕೋಟೆ ತನಕ ಕೇಂದ್ರ ಭಾಗದಲ್ಲಿ ಚತುಷ್ಪಥ ರಸ್ತೆಗೆ ಹೆದ್ದಾರಿ ಇಲಾಖೆಯಿಂದ ಬೆಳಕಿನ ವ್ಯವಸ್ಥೆಯಿಲ್ಲ. ರಸ್ತೆ ಬದಿ ವಿದ್ಯುತ್ ಕಂಬಗಳು ಮಾತ್ರ ಕಂಡುಬರುತ್ತಿದ್ದು, ವಿದ್ಯುತ್ ದೀಪಗಳು ಮಾತ್ರ ಉರಿಯುತ್ತಿಲ್ಲ. ಬ್ರಹ್ಮಾವರ ಸರ್ವಿಸ್ ರಸ್ತೆ ಆರಂಭವಾಗುವ ಮಹೇಶ್ ಆಸ್ಪತ್ರೆಯಿಂದ ಧರ್ಮಾವರ ವೃತ್ತ ತನಕ ವಾಹನ ಸಂಚಾರಿ ಮತ್ತು ಪಾದಚಾರಿಗಳಿಗೆ ಸರಿಯಾದ ಬೆಳಕಿನ ವ್ಯವಸ್ಥೆ
ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾ ಸಭಾದ 77ನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾ ವರ್ಧಕ ಸಂಘದ 33ನೇ ವಾರ್ಷಿಕ ಮಹಾಸಭೆ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಿತು. ರಾಮದಾಸ್ ಶೆಟ್ಟಿಗಾರ್ ಮತ್ತು ಲಕ್ಷ್ಮಣ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪದ್ಮಶಾಲಿ ಸಾಮಾಜಿಕ ನಾಯಕತ್ವ ಪ್ರಶಸ್ತಿಯನ್ನು ವಿ.ನಾರಾಯಣ ಶೆಟ್ಟಿಗಾರ್ ವಕ್ವಾಡಿ ಯವರಿಗೆ ನೀಡಲಾಯಿತು. ಸಮಾಜದ ವಿವಿಧ ಕ್ಷೇತ್ರದ ಸಾಧಕರು,ಪ್ರತಿಭಾವಂತರನ್ನು ಮತ್ತು
ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಆತ್ಲೆಟಿಕ್ಸ್ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದರು. ಪಾಕಿಸ್ಥಾನದ ಅರ್ಷದ್ ನದೀಮ್ 87.82 ಮೀ. ದೂರಕ್ಕೆ ಎಸೆದು ದ್ವಿತೀಯ
ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೆÇೀನು, ನಗದು 1,800 ರೂ.,
ಪ್ರತೀ ವರ್ಷದಂತೆ ಈ ವರ್ಷವೂ ಓಣಂ ಸಂದರ್ಭ ಅಯ್ಯಪ್ಪ ಸ್ವಾಮಿ ಮಾಲೆಧರಿಸಿ ಯಾತ್ರೆಗೆ ಹೊರಟ ಸ್ಬಾಮಿಗಳ ಮೂಲಕ ಅಯ್ಯಪ್ಪನಿಗೆ ಬಹಳ ಪ್ರಿಯವಾದ ಪಡಿಪೂಜೆಯು ಮುಲ್ಕಿ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಪೂಜೆಯ ಬಳಿಕ ಮಾತನಾಡಿದ ಗುರುಸ್ವಾಮಿ ಗಿರೀಶ್ ಪಲಿಮಾರು, ಜ್ಯೋತಿ ಸ್ವರೂಪನಾದ ಅಯ್ಯಪ್ಪನನ್ನು ಸಾಕ್ಷಾತ್ಕಾರಗೊಳಿಸುವ ನಿಟ್ಟಿನಲ್ಲಿ ಈ ದೀಪಾರಾಧನೆ ಅಂದರೆ ಪಡಿಪೂಜೆ ನಡೆಸಲಾಗಿದ್ದು, ಮಾಲೆಧಾರಿಗಳು ವೃತ ನೇಮ ನಿಷ್ಠೆಯಿಂದ ಓಣಂ ಪರ್ವಕಾಲದಲ್ಲಿ ಶಬರಿ ಸನ್ನಿಧಾನಕ್ಕೆ
ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ. ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ ರಸ್ತೆಯಿಂದ ಕನ್ನಂಗಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುತ್ತಿದಂತೆ, ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ನ ಹಿಂಬದಿ
ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್ಗೇಟ್ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು ಗೇಟನ್ನು ಕೈಯಿಂದ ತೆರೆದು ಮುಂದೆ ಹೋದಾಗ ಟೋಲ್ ಸಿಬ್ಬಂದಿಗಳು ತಡೆದಿದ್ದು ಆಗ ಯುವಕನೊರ್ವ ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ಟೋಲ್ ಸಿಬ್ಬಂದಿಗಳು ಯುವಕರಿಗೆ ಚೆನ್ನಾಗಿ ಬಾರಿಸಿದ್ದಾರೆ.
ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ
ಎಸ್ಕೆಎಸ್ಎಸ್ಎಫ್ ಅಬುಧಾಬಿ ಕರ್ನಾಟಕ ವತಿಯಿಂದ ಬೃಹತ್ ಕರ್ನಾಟಕ ಮೀಲಾದ್ ಕಾನ್ಪ್ರೆನ್ಸ್ ಇದರ ಪ್ರಚಾರದ ಭಾಗವಾಗಿ, ಸೆಪ್ಟಂಬರ್ 1 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿ ಖಾಲಿದಿಯ್ಯ ಬ್ಲಡ್ ಬ್ಯಾಂಕ್ನಲ್ಲಿ ನಡೆಯಲಿರುವ ರಕ್ತದಾನ ಶಿಬಿರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ಕಾರ್ಯಕ್ರಮವು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ವ್ಯವಸ್ಥಾಪಕರೂ, ಎಸ್ಕೆಎಸ್ಎಸ್ಎಫ್




























