Home Blog Left SidebarPage 410

ಸೌಜನ್ಯ ಪ್ರಕರಣ: ಮರು ತನಿಖೆಗಾಗಿ ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧ..!

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಪಡುಬೆಟ್ಟು ನೆಲ್ಯಾಡಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಯು.,ಯಾನೆ ಸಲಾಂ ಬಿಲಾಲ್ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ.ಕ್ರೀಡಾಂಗಣ ಉದ್ಘಾಟಿಸಿದರು.

ಬೆಳ್ತಂಗಡಿ: ಪಟ್ರಮೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆ- ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ಕೊಟ್ಯಪ್ಪ ಗೌಡ, ಪುನೀತ್ ಮಣಿಯೇರು, ಎಸ್.ಜೆ.ಸುದೇಶ ಸಂಕೇಶ ಬಂಧಿತ ಆರೋಪಿಗಳು. ಲೋಕೇಶ್ ಸಂಕೇಶ ಎಂಬಾತ ಕಾಡಿನಲ್ಲಿ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳಿಂದ ಕಡವೆಯ ಮೃತ ದೇಹ ಮತ್ತು

ಮೂಡುಬಿದಿರೆ: ಕರಿಂಜೆ ಘನತ್ಯಾಜ್ಯ ಘಟಕ ಅಸಮರ್ಪಕ ನಿರ್ವಹಣೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸಮರ್ಪಕವಾಗಿ ನಿರ್ವಹಣೆಯಾಗುತ್ತಿದ್ದು ಇದರಿಂದಾಗಿ ಪರಿಸರದ ನಿವಾಸಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆಂದು ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ದೂರು ನೀಡಿದ್ದಾರೆ. ತಾಲೂಕು ಆಡಳಿತ ಸೌಧದಲ್ಲಿ ಡಿಸಿಯವರಿಂದ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿ ಈ ಬಗ್ಗೆ ಚರ್ಚೆ

ಬ್ರಹ್ಮಾವರ: ಸುಜ್ಞಾನ ತೀರ್ಥರ 41ನೇ ಆರಾಧನಾ ಮಹೋತ್ಸವ

ಬ್ರಹ್ಮಾವರದ ಹಾನಸ ಅರೆಮಾದನಹಳ್ಳಿ ಸುಜ್ಞಾನ ತೀರ್ಥ ಮಹಾ ಸ್ವಾಮೀಜಿಯವರ 41 ನೇ ಆರಾಧನಾ ಮಹೋತ್ಸವ ನಡೆಯಿತು. ಉಡುಪಿ ಜಿಲ್ಲೆಯ ಕೊಕ್ಕರ್ಣೆಬಳಿಯ ಶಾಖಾ ಮಠ ಕಜ್ಕೆಯಲ್ಲಿ ಗುರುಪರಂಪರೆಯ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆಚರಣೆಯ ಸಂದರ್ಭ ಜರುಗಿತು. ಈ ಸಂದರ್ಭ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರು ಮಾತನಾಡಿ, ಇತಿಹಾಸ ಇರುವ ಗುರು ಪರಂಪರೆಯಲ್ಲಿ, ಮೂಲ ಗುರುಗಳು ದೇಶದಾದ್ಯಂತ ನಡೆದಾಡಿದ ಮತ್ತು ಪವಾಡಗಳ ಕುರಿತು ಮತ್ತು ಹಾಸನದ ಬಳಿಯ

ಉಪ್ಪುಂದ: ಚಂದ್ರಯಾನ-3 ಯಶಸ್ವಿ: ವಿದ್ಯಾರ್ಥಿಗಳಿಂದ ಗಮನಸೆಳೆದ ISRO ರಚನಾ ವಿನ್ಯಾಸ

ಭಾರತದ ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ISRO ಎಂಬ ರಚನಾ ವಿನ್ಯಾಸವನ್ನು ರಚಿಸಿ ಅಭಿನಂದನೆ ಸಲ್ಲಿಸಲಾಯಿತು. ಕಳೆದ ಬಾರಿ ಇದೇ ಸಂಸ್ಥೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ೭೫ ಎಂಬ ರಚನಾ ವಿನ್ಯಾಸವನ್ನು ರಚಿಸಿ ರಾಜ್ಯಾದ್ಯಂತ ಗಮನಸೆಳೆದಿದ್ದರು.

ಬಂಟ್ವಾಳ : ತುಂಬೆ ಗ್ರಾ.ಪಂ.ನ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಬಂಟ್ವಾಳ: ತುಂಬೆ ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು. ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್‍ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ.

ಮಳಲಿ : ಹೋಬಳಿ ಮಟ್ಟದ ಕಬ್ಬಡಿ ಪಂದ್ಯಾಟ – ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಗೆ ಪ್ರಶಸ್ತಿ

ಮಳಲಿ ಪ್ರೌಢಶಾಲೆಯಲ್ಲಿ ಜರುಗಿದ ಗುರುಪುರ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದ್ದಾರೆ. ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ

ಕಾಪು: ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‍ಗೆ ಪ್ರಾರ್ಥಿಸಿ ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ

ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ – 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು. ದಂಡತೀರ್ಥ ಮಠದ ಆಡಳಿತ ಮೊಕ್ತೇಸರ ಡಾ. ಸೀತಾರಾಮ್ ಭಟ್ ನೇತೃತ್ವದಲ್ಲಿ, ವೇದ ಮೂರ್ತಿ ನಾಗಭೂಷಣ್ ಭಟ್, ವಾಗೀಶ್ ಭಟ್, ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಭಟ್ ಪೌರೋಹಿತ್ವದಲ್ಲಿ

ಕೌಕ್ರಾಡಿ ಗ್ರಾಮದ ಮೂಲಕ ನೆಲ್ಯಾಡಿ ಪೇಟೆಯನ್ನು ಸಂಪರ್ಕಿಸುವ ಪುತ್ಯೆ ರಸ್ತೆಗಿಲ್ಲವೇ ದುರಸ್ತಿ ಭಾಗ್ಯ?

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಿಂದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಲಕ ನೆಲ್ಯಾಡಿ ಪೇಟೆಯನ್ನು ಸಂಪರ್ಕಿಸುವ ಪುತ್ಯೆ ಪ್ರದೇಶದ 800 ಮೀಟರ್ ರಸ್ತೆಗೆ ಡಾಂಬರು ಅಥವಾ ಕಾಂಕ್ರೀಟ್ ಕಾಣದೆ ದಶಕಗಳ ಕಾಲವೇ ಸಂದಿದ್ದು ಸಂಚಾರಕ್ಕೆ ಆಯೋಗ್ಯವಾಗಿದೆ. ದಿನಂಪ್ರತಿ ನೂರಾರು ನೌಕರರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಶ್ರೀ ಕ್ಷೇತ್ರ ಕೊಕ್ಕಡ, ಸೌತಡ್ಕ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುವ ಭಕ್ತರೂ ಕೂಡ ಈ ರಸ್ತೆ ಮೂಲಕವೇ ಪ್ರಯಾಣಿಸುತ್ತಿದ್ದಾರೆ. ಆದರೆ