Home Blog Left SidebarPage 424

ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ – ಶರಣ್ ಪಂಪ್‍ವೆಲ್, ದಿನೇಶ್ ಮೆಂಡನ್ ಮೇಲೆ ಕೇಸ್ ದಾಖಲು

ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿರುವುದು ಖಂಡನೀಯ ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಖಂಡಿಸಿದ್ದಾರೆ. ಅವರು

ಪುತ್ತೂರು : ತುಳು ಲಿಪಿಯಲ್ಲಿ ಭಗವದ್ಗೀತೆ ಬರೆದ ಪುತ್ತೂರಿನ ಮಹಿಳೆ

ಪುತ್ತೂರು : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ಒತ್ತಾಯಗಳು ಊರ್ಜಿತದಲ್ಲಿರುವ ಸಮಯದಲ್ಲಿ ತುಳು ಭಾಷೆ, ಲಿಪಿಯಲ್ಲಿ ಹಲವಾರು ಕೃತಿಗಳು ಬರಲಾರಂಭಿಸಿದೆ. ನೇಪತ್ಯಕ್ಕೆ ಸರಿದಿದ್ದ ತುಳು ಲಿಪಿಯನ್ನು ಮತ್ತೆ ಪರಿಚಯಿಸುವ ಕಾರ್ಯ ಈಗಾಗಲೇ ನಡೆದಿದ್ದು, ಈ ಸಾಲಿಗೆ ಇನ್ನೊಂದು ಹೊಸ ಪ್ರಯತ್ನ ಸೇರ್ಪಡೆಗೊಂಡಿದೆ. ಭಗವದ್ಧೀತೆಯ 18 ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆಯಲಾಗಿದ್ದು,

ಒಡ್ಡೂರು ಫಾರ್ಮ್‍ನಲ್ಲಿ ತ್ಯಾಜ್ಯದಿಂದ ಸಿಎನ್‍ಜಿ ಉತ್ಪಾದನೆ

ಬಂಟ್ವಾಳ: ನಾವು ಎಲ್ಲೆಂದರಲ್ಲಿ ಎಸೆದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರಿದರೆ ಪರಿಸರಕ್ಕೂ ಹಾನಿ, ಆರೋಗ್ಯಕ್ಕೂ ತೊಂದರೆ. ಒಣ ಕಸಗಳನ್ನು ಹೇಗಾದರೂ ವಿಲೇವಾರಿ ಮಾಡಬಹುದು ಆದರೆ ನಿತ್ಯ ಸಂಗ್ರಹವಾಗುವ ಹಸಿ ಕಸವನ್ನು ವಿಲೇವಾರಿ ಮಾಡುವುದೇ ಪ್ರತೀ ಆಡಳಿತ ವ್ಯವಸ್ಥೆಯ ಮುಂದಿರುವ ಸವಾಲು. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ಮಗ ಉನ್ನತ್ ನಾಕ್ ಕೊಳೆಯುವ ಹಸಿ ಕಸಗಳು ಹಾಗೂ ದ್ರವ ತ್ಯಾಜ್ಯವನ್ನು ಬಳಸಿ ಅನಿಲ

ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ

ಉಡುಪಿ ವಿಡಿಯೋ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ವಿಹಿಂಪ, ಬಜರಂಗ ದಳದಿಂದ ಪ್ರತಿಭಟನೆ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ

ಪಡುಬಿದ್ರೆ : ಟಿಪ್ಪರ್ ನೊಳಗೆ ಹೋಗಿ ಆವಾಂತರ ಸೃಷ್ಟಿಸಿದ ಹಾವು

ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ನೊಳಗೆ ಹೋಗಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ನಡೆದಿದೆ. ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದನ್ನು ವಾಹನದ ಅಡಿಗೆ ಬೀಳದಂತೆ ರಕ್ಷಿಸುವ ನಿಟ್ಟಿನಲ್ಲಿ ದಾಮೋದರ್ ಪಾಂಗಳ ಮತ್ತು ಸ್ಥಳೀಯರು ಅವರು ಹಾವನ್ನು ರಕ್ಷಣೆ ಮಾಡಿ, ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಟ್ಟಿದ್ದರು. ಈ ವೇಳೆ

ಮೂಡುಬಿದಿರೆ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಕುಲಾಲ ಸಂಘ ಮುಂಬಯಿ ವತಿಯಿಂದ ‘ಆಟಿದ ಅಟೀಲ್’

ಮುಂಬಯಿ : ಕುಲಾಲ ಸಂಘ ಮುಂಬಯಿ, ನವಿಮುಂಬಯಿ ಸಮಿತಿಯ ಮಹಿಳಾ ವಿಭಾಗವು ”ಆಟಿದ ಅಟೀಲ್” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಆಟಿ ಕೇವಲ ಆಚರಣೆಯಾಗಿರದೆ ಆಟಿ ನಮ್ಮ ಸಂಪ್ರದಾಯವಾಗಿದೆ ಎಂದು ಕುಲಾಲ ಸಂಘ ಮುಂಬಯಿ ಹ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ತಿಳಿಸಿದರು. ಕನ್ನಡ ಸಂಘ ಸಭಾಗೃಹ, ಶಿವ ವಿಷ್ಣು ಮಂದಿರ ಮಾರ್ಗ, ಜುಹು ನಗರ, ಸೆಕ್ಟರ್ 9ಎ, ವಾಶಿ, ನವಿ ಮುಂಬಯಿ ಇಲ್ಲಿ ಜರಗಿದ ಕುಲಾಲ ಸಂಘದ ನವಿಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ

ತೊಕ್ಕೊಟ್ಟಿನಲ್ಲಿ ಸರಣಿ ಕಳವು ಪ್ರಕರಣ

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್ , ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‍ಪ್ರೈಸ್ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್ ಎಸ್ ಕಮ್ಯುನಿಕೇಷನ್ಸ್ ಮೊಬೈಲ್

ವಸಂತ ಬಂಗೇರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ : ಅಭಿಮಾನಿ ಬಳಗದಿಂದ ದೂರು

ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ವಸಂತ ಬಂಗೇರ ಅವರ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನವಾಗಿದೆ. ಈ ಸಂದೇಶವನ್ನು ತಾಲೂಕಿನ ಹಲವರು ಹಂಚಿಕೊಂಡು ಗೊಂದಲ ಮೂಡಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಹಾಸ ಚಾರ್ಮಾಡಿ, ಅಶೋಕ್ ಪೂಜಾರಿ, ಧನಂಜ ಜೈನ್ ಉಪಸ್ಥಿತರಿದ್ದರು.