Home Blog Left SidebarPage 429

ವಾರದ ಬಳಿಕ ಶರತ್ ಕುಮಾರ್ ಮೃತದೇಹ ಪತ್ತೆ

ಬೈಂದೂರು: ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಶರತ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು.ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ

ಮಾಣಿ ಪೆರಾಜೆಯ ವಿದ್ಯಾನಗರಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ : ಆಟಿಡೊಂಜಿ ಕೂಟ ಕಾರ್ಯಕ್ರಮ

ವಿಟ್ಲ : ಆಟಿಯ ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ. ಆಟಿ ಒಂದು ದಿನದ ಆಚರಣೆಯೂ ಅಲ್ಲ ಅದು ಒಂದು ತಿಂಗಳ ಆಚರಣೆ. ತುಳುನಾಡಿನ ಔಷಧಿಗಳ ಮಹತ್ವವನ್ನು ತಿಳಿಯೋಣ ಎಂದು‌ ಜನಪದ ಚಿಂತಕರು ಹಾಗೂ ಉದ್ಯಾವರ ಎಸ್ ಡಿ ಎಮ್ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ|| ವೈ.ಯನ್.ಶೆಟ್ಟಿಯವರು ಹೇಳಿದರು. ಅವರು ಮಾಣಿ ಪೆರಾಜೆಯ ವಿದ್ಯಾನಗರಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.30ರಂದು ನಡೆದ ಆಟಿಡೊಂಜಿ

ಪರಿಸರ ಉಳಿವಿಗಾಗಿ ಬಂಡವಾಳ ಶಾಹಿ ಪದ್ಧತಿ ನಾಶವಾಗುವುದು ತುರ್ತಿನ ಅವಶ್ಯಕತೆ : ಡಾ.ರಾಜೇಂದ್ರ ಉಡುಪ

ಜಾಗತಿಕ ಮಟ್ಟದಲ್ಲಿ ಪರಿಸರ ಸಮಸ್ಯೆ ತೀರಾ ಉಲ್ಬಣಗೊಂಡಿದೆ.ಪರಿಸರ ನಾಶಕ್ಕೆ ಬಂಡವಾಳಶಾಹಿ ವ್ಯವಸ್ಥೆ ದೊಡ್ಡ ಕೊಡುಗೆ ನೀಡಿದೆ.ಜಗತ್ತಿಗೆ ದೊಡ್ಡಣ್ಣನೆಂದು ಕರೆಸಿಕೊಳ್ಳುವ ಅಮೆರಿಕ ಯುದ್ದ ಇಲ್ಲದೆ ಒಂದು ಕ್ಷಣವೂ ಬದುಕುವುದಿಲ್ಲ. ಅಮೆರಿಕದ ಮಿಲಿಟರಿ ವರ್ಷಕ್ಕೆ 2.5 ಬಿಲಿಯನ್ ಟನ್ ತೈಲ ಉಪಯೋಗಿಸುತ್ತಿದೆ.ಒಂದು ಯುದ್ದ ನೌಕೆ ಗಂಟೆಗೆ ಒಂದೂವರೆ ಲಕ್ಷ ಲೀಟರ್ ತೈಲ ಉಪಯೋಗಿಸಿದರೆ, ಯುದ್ದ ವಿಮಾನ ಗಂಟೆಗೆ ಅರ್ಧ ಲಕ್ಷ ಲೀಟರ್ ತೈಲ ಉಪಯೋಗಿಸುತ್ತದೆ. ಇವೆಲ್ಲಾವೂ ಅಸಂಖ್ಯಾತ

ಮೇಘರಾಜ್ ರವರ ಚಿಕಿತ್ಸೆಗೆ ಬಿಜೆಪಿ ಯುವಮೋರ್ಚ ಮಂಗಳೂರು ಉತ್ತರ ಮಂಡಲದಿಂದ ಸಹಾಯಹಸ್ತ

ಬಜರಂಗದಳ ಸುರತ್ಕಲ್ ಪ್ರಖಂಡದ ಕಾರ್ಯಕರ್ತ ಕಳವಾರು ನಿವಾಸಿ ಮೇಘರಾಜ್ ಅವರು ಅಪಘಾತದಿಂದ ತ್ರೀವ ಗಾಯಗೊಂಡು ಎ.ಜೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಮೇಘರಾಜ್ ರವರ ಚಿಕಿತ್ಸೆಗೆ ಬಿಜೆಪಿ ಯುವಮೋರ್ಚ ಮಂಗಳೂರು ಉತ್ತರ ಮಂಡಲದಿಂದ ಕಾರ್ಯರ್ತರು ಹಾಗೂ ದಾನಿಗಳಿಂದ ಸಂಗ್ರಹಿಸಿದ 1,60,000 ರೂಪಾಯಿಗಳ ಚೆಕ್ ಅನ್ನು ಮಾನ್ಯ ಶಾಸಕರಾದ ಡಾ ಭರತ್ ಶೆಟ್ಟಿಯವರು, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್

ಮೂಡುಬಿದಿರೆ : ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಭತ್ತದ ನಾಟಿ

ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು.   ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ತುಳು ಸಂಘದ ಸದಸ್ಯರು ಬಹಳ

ಮೂಡುಬಿದರೆ: ಮಣಿಪುರ ಘಟನೆಯನ್ನು ಖಂಡಿಸಿ ಪ್ರತಿಭಟನೆ

  ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು  ಖಂಡಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ಹಾಗೂ ಸೌಹಾರ್ದ ಫ್ರೆಂಡ್ಸ್ ಶಿರ್ತಾಡಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಶಿರ್ತಾಡಿ ಬಸ್ ಸ್ಟ್ಯಾಂಡ್ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಯಿತು.  ಮೂಡುಬಿದಿರೆ ವಲಯ ಕಥೋಲಿಕ್ ಸಭಾದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ ದಿಕ್ಸೂಚಿ ಭಾಷಣ ಮಾಡಿ ನಾವು ಬೇರೆ ಬೇರೆ ತಂಡಗಳಾಗುವ ಹೊತ್ತಲ್ಲ ಇದು ಎಲ್ಲರೂ ಒಂದಾಗುವ ಹೊತ್ತು. ಯಾಕೆಂದರೆ

ಉಳ್ಳಾಲ : ನೇತ್ರಾವತಿ ನದಿತಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ನದಿತಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಹಾಸನ ಬೇಳೂರು ನಿವಾಸಿ ಮೊಹಮ್ಮದ್ ಝಾಕಿರ್ (50) ಎಂದು ಉಳ್ಳಾಲ ಠಾಣೆಗೆ ಆಗಮಿಸಿದ ಮನೆಮಂದಿ ತಿಳಿಸಿದ್ದಾರೆ. ಕೆಲ ತಿಂಗಳುಗಳಿಂದ ಅಸೌಖ್ಯಕ್ಕೀಡಾಗಿದ್ದ ಝಾಕೀರ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದರು. ಎರಡು ದಿನಗಳ ಹಿಂದೆಯೂ ಊರುಬಿಟ್ಟು ಔಷಧಿಗೆಂದು ಬಂದಿದ್ದವರು ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಮನೆಮಂದಿ ಎಲ್ಲೆಡೆ ಎರಡು ದಿನಗಳ ಕಾಲ

ಜಲಪಾತದಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ

ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.   ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ವೀಕ್ಷಿಸಲು ೨೩ ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.   ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ

  ಸಿಎಂ ಸಿದ್ದರಾಮಯ್ಯ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.   ಆಗಸ್ಟ್ 1ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳುವರು. 12.30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4.15ಕ್ಕೆ ದ.ಕ. ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸಲಿದ್ದಾರೆ. ರಾತ್ರಿ 9.50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ

ವಿಟ್ಲ: ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಕಾರು: ರಿಕ್ಷಾ ಚಾಲಕನಿಗೆ ಗಾಯ

ಆಟೋ ರಿಕ್ಷಾವೊಂದಕ್ಕೆ ಹಿಂದಿನಿಂದ ಬಂದ ಕಾರು ಢಿಕ್ಕಿಯಾದ ಘಟನೆ ವಿಟ್ಲದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಆಟೋಲ ಚಾಲಕ ಸೂರಿಕುಮೇರ್ ನಿವಾಸಿ ಹನೀಪ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಸೂರಿಕುಮೇರ್‌ನಿಂದ ಮಾಣಿ ಕಡೆಗೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಕಾರು ನಜ್ಜುಗುಜ್ಜಾಗಿದೆ.