Home Blog Left SidebarPage 434

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷದ ಹಿನ್ನಲೆ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ, ಬೂಡಿಯಾರು,

ಪುತ್ತೂರು ಗ್ರಾ.ಪಂ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರ ಜಯಭೇರಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‍ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ. ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ

ಚಾರ್ಮಾಡಿ ಘಾಟಿ : ಜಲಪಾತ ವೀಕ್ಷಿಸುತ್ತಿರುವ ಮಂದಿ, ವಾಹನ ಸಂಚಾರಕ್ಕೆ ತೊಡಕು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಹಗಲಲ್ಲೂ ದಟ್ಟ ಮಂಜಿನ ವಾತಾವರಣ ಕಂಡುಬರುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಾ ಚಾಲನೆ ಮಾಡಬೇಕಾದ ಪರಿಸ್ಥಿತಿ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿದಿದ್ದು, ಪ್ರಸ್ತುತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಸಮಯ ಘಾಟಿಯಲ್ಲಿ ದಟ್ಟವಾದ ಮಂಜಿನ ವಾತಾವರಣ ಏರ್ಪಟ್ಟು ವಾಹನಗಳ ಹೆಡ್ಲೈಟ್ ಹಾಕಿದರೂ ದಾರಿ ಕಾಣದ ಸ್ಥಿತಿ ಉಂಟಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಇನ್ನಷ್ಟು ದಟ್ಟ ಮಂಜಿನಿಂದ ದಾರಿ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿಹೂವಪ್ಪರು ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು

ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು – ಸಂತೋಷ್ ಕುಮಾರ್

ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ ಸರಕಾರದ ಬೊಕ್ಕಸಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಆಟೋರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ ವಾಪಾಸ್ ಅವರಿಗೆ ಯಾವುದೇ ಸವಲತ್ತುಗಳಿಲ್ಲ.ಇಂತಹ ಸಂದರ್ಭದಲ್ಲಿ ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ

ತನಿಖೆ ತಿರುಚಲು ಶೌಚಾಲಯದಲ್ಲಿ ಇಟ್ಟ ಮೊಬೈಲ್ ಗಳ ಅದಲು ಬದಲು: ಜನರ ಸಂಶಯ ನಿವಾರಿಸಿ , ಎಸ್ ಐ ಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ವೈ ಆಗ್ರಹ

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಟೀಕಾ ಪ್ರಹಾರ ನಡೆಸಿದ್ದಾರೆ. ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ

ಹಿರಿಯ ಫೋಟೋಗ್ರಾಫರ್ ಸುಬ್ಬು ನಿಧನ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ಮೂಡುಬಿದಿರೆಯಲ್ಲಿ ಫೊಟೊಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ಬು (55) ಅವರು ಇಂದು ಮುಂಜಾನೆ ನಿಧನರಾದರು.ಮೂಡುಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲ ಪತ್ರಿಕೆಗಳ ಛಾಯಾಗ್ರಾಹಕ ರಾಗಿಯೂ ಗಮನಸೆಳೆದಿದ್ದರು. ಕೆಲ ಧಾರಾವಾಹಿ, ಚಿತ್ರಗಳಲ್ಲಿ ಸಹ ಕಲಾವಿದನಾಗಿಯೂ ಬಣ್ಣ ಹಚ್ಚಿದ್ದು ಓರ್ವ ಕಲಾವಿದನಾಗಿಯೂ ಗುರುತಿಸಿಕೊಂಡಿದ್ದರು. ಸರ್ವರೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದ ಸುಬ್ರಹ್ಮಣ್ಯ ಹೆಸರಿನ ಅವರು

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜು.14ರಂದು ಕಚೇರಿ ಅಧೀಕ್ಷಕರಾಗಿ

ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಉಜಿರೆ: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ ‘ಇಂಪ್ರೆಶನ್ – 2023’ ರಾಜ್ಯ ಮಟ್ಟದ ಮಾಧ್ಯಮ ಸ್ಪರ್ಧೆಯ ಕಿರುಚಿತ್ರ ವಿಭಾಗದಲ್ಲಿ ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ‘ನಾದ’ ಎಂಬ ಶೀರ್ಷಿಕೆಯಡಿ ಈ ಕಿರುಚಿತ್ರವು ಮೂಡಿಬಂದಿದೆ. ಈ ಕಿರುಚಿತ್ರವು ಕಿರಣ್