ಬಲೆಗೆ ಬಿದ್ದ ಕೆಜಿಗಟ್ಟಲೆ ತೂಕವಿರುವ ಮೀನು . ಬಲೆಯಿಂದ ಇಳಿಸುತ್ತಿದ್ದಂತೆ ಮೀನುಗಳ ಮಾರಾಟ. ಖರೀದಿಸಿದ ಮೀನು ಮಧ್ಯಾಹ್ನಕ್ಕೆ ಔತಣ. ಹೌದು.. ಈ ದೃಶ್ಯ ಕಂಡುಬಂದದ್ದು ಮಂಗಳೂರಿನ ಪಿಲಿಕುಳ ಮತ್ಸ್ಯೋತ್ಸವದಲ್ಲಿ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆದು ಅಲ್ಲಿಯೇ
ಬಂಟ್ವಾಳದ ಖ್ಯಾತ ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರ ಕೈ ಚಳಕದಲ್ಲಿ ಕುರುಕ್ಷೇತ್ರ ಯುದ್ಧದಲ್ಲಿ ಶಸ್ತ್ರ ತ್ಯಾಗ ಮಾಡಿದ ಅರ್ಜುನನಿಗೆ ಗೀತೆಯನ್ನು ಭೋಧಿಸುವ ಶ್ರೀ ಕೃಷ್ಣನ ಬೃಹತ್ ಕಲಾಕೃತಿಯೊಂದು ರಚನೆಗೊಂಡಿದೆ. ಈ ಕಲಾಕೃತಿಯನ್ನು ಮಂಗಳೂರು ಹೊರ ವಲಯದ ಕಿನ್ನಿಗೋಳಿಯ ಎಳತ್ತೂರಿನಲ್ಲಿರುವ ಶ್ರೀ ಶಕ್ತಿ ದರ್ಶನ ಯೋಗಾಶ್ರಮದ ನೂತನ ಮುರಳೀವನದಲ್ಲಿ ಸ್ಥಾಪಿಸಲಾಗಿದೆ. 10 ಅಡಿ ಎತ್ತರದ ನಿಂತ ಭಂಗಿಯಲ್ಲಿರುವ ಶ್ರೀ ಕೃಷ್ಣನ ವಿಗ್ರಹ, 6 ಅಡಿ ಎತ್ತರದ
ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು. ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದರು. ಸುಮಾರು 40 ಎಕ್ರೆ ಸರಕಾರಿ
ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಸಂಭವಿಸಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಮಿತ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಢಿಕ್ಕಿ
ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತ ರಾಜೇಂದ್ರ ಅಮಿನ್ ಅವರು, ದೇಶ ಸೇವೆಗೆ ತಮ್ಮ ಸಮಯವನ್ನು ಮೀಸಲಿಡುವ ಮೂಲಕ ತಮ್ಮ ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿಸಿಕೊಳ್ಳಬೇಕೆಂದು ಹೇಳಿದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಸಹ
ಎಸ್.ಡಿ.ಎಮ್ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ನಿವೃತ್ತ ಸಿಬ್ಬಂದಿ ಸಾಧಕ ಭೋಧಕರು ಮತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಧರ್ಮಸ್ಥಳದ ಧರ್ಮಧಿಕಾರಿಗಳೂ ಆದ ಡಾ. ಡಿ. ವೀರೆಂದ್ರ ಹೆಗಡೆ ಸನ್ಮಾನಿಸಿದರು. ಇತ್ತೀಚೆಗೆ ನಿವೃತ್ತರಾದ ವಿಶ್ರಾಂತ ಪ್ರಾಂಶುಪಾಲರಾಧ ಡಾ. ಸತೀಶ್ಚಂದ್ರ ಎಸ್, ಡಾ. ಉದಯ ಚಂದ್ರ ಪಿ, ಡಾ. ಜಯಕುಮಾರ್ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ವಿ. ನಾಗರಾಜಪ್ಪ, ಪ್ರೊ. ಅಜಯ್ ಕೊಂಬ್ರಬೈಲು, ಡಾ. ಶಂಕರ್ ನಾರಾಯಣ, ಡಾ. ಬಿ.ಪಿ
ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94
ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ ಪೆರಿಯತ್ತೋಡಿ, ನಿತೀಶ್ ಶಾಂತಿವನ, ಉಪ್ಪಿನಂಗಡಿ ಸಿ.ಎ.ಬ್ಯಾಂಕ್
ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಾಗೂ ಶಾಂತಿ ಮರು ಸ್ಥಾಪಿಸಿ ನೊಂದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮಣಿಪುರ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು, ಪ್ರಧಾನಿಯವರು ಮಣಿಪುರಕ್ಕೆ ಭೇಟಿ
ಪೆರ್ನಾಳ್ ಹಬ್ಬ ಆಚರಿಸಲೆಂದು ಸಂಬಂಧಿಕರ ಮನೆಗೆ ಬಂದಿದ್ದ ಯುವಕರಿಬ್ಬರು ಮಸೀದಿಯ ಸಮೀಪದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಕೊಪ್ಪಳದಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಮಜಿಬೈಲ್ ನಿವಾಸಿ ಖಾದರ್ – ನಸೀಮಾ ದಂಪತಿಗಳ ಮಕ್ಕಳಾದ ಅಬ್ದುಲ್ ನಾಝಿಂ (22) ಹಾಗೂ ಮೊಹಮ್ಮದ್ ನವಾ (17) ಮೃತ ದುರ್ದೈವಿಗಳು. ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ಆಸ್ಪತ್ರೆಗೆ



























