Home Blog Left SidebarPage 474

ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3 ಕೋಟಿ 75 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪಟ್ಟ ಬಳಿಯ ನಡಿದಂಡೆ ಸಂರಕ್ಷಣೆ – 2 ಕೋಟಿ, ಪರಪಟ್ಟ

ಬಾರಕೂರಿನಲ್ಲಿ ಸರಣಿ ಕಳ್ಳತನ : ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ನಗದು ಕಳವು

ಬಾರಕೂರು ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಶ್ರೀ ಗಣೇಶ್ ಇಂಡಿಯನ್ ಆಯಿಲ್‍ನಲ್ಲಿ 8 ಸಿಸಿ ಕ್ಯಾಮರಾ ಇದ್ದು ಕಛೇರಿ ಹಿಂಭಾಗದಲ್ಲಿರುವ ಕ್ಯಾಮರಾಕ್ಕೆ ಸೊಪ್ಪು ಮತ್ತು ಬಟ್ಟೆ ಮುಚ್ಚಿ ಬಳಿಕ ಬೀಗವನ್ನು ಒಡೆದು ಕಪಾಟಿನಲ್ಲಿದ್ದ 20 ಸಾವಿರದಷ್ಟು ನಗದು, ಅಲ್ಲೇ ಪಕ್ಕದಲ್ಲಿದ್ದ ಟಯರ್ ಅಂಗಡಿಯ 3 ರಾಡ್, ನಂದಿನಿ ಹಾಲು ಅಂಗಡಿಯ ಬಾಗಿಲು ಮುರಿದು ನಗದು

ದ.ಕ : ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್

ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‍ಎನ್‍ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್

ಸುರತ್ಕಲ್‍ : ಕ್ಷುಲ್ಲಕ ಕಾರಣಕ್ಕೆ ಯುವಕನಿಂದ ಚೂರಿ ಇರಿತ

ಸುರತ್ಕಲ್‍ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಜಗಳವಾಗಿದ್ದು, ತಾಹಿರ್ ಚೂರಿಯಲ್ಲಿ ಇರಿದು ಪರಾರಿಯಾಗಿದ್ದಾನೆ. ಮಸೀದಿಯಲ್ಲಿನ

ಉಳ್ಳಾಲದ ಮನೆಯೊಂದಕ್ಕೆ 7 ಲಕ್ಷ ರೂ. ವಿದ್ಯುತ್ ಬಿಲ್ : ಬಿಲ್ ರೀಡರ್ ನ ಎಡವಟ್ಟು

ಕೆಇಆರ್‍ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್‍ನ ಮನೆಯೊಂದಕ್ಕೆ ಬರೋಬರಿ 7 ಲಕ್ಷ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್‍ನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ಬಿಲ್ಲನ್ನ ನೀಡಿ ತೆರಳಿದ್ದಾನೆ. ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ

ಮತಾಂತರ ನಿಷೇಧ ಕಾಯ್ದೆವಾಪಾಸ್ ಪಡೆದಲ್ಲಿ ಬೀದಿಗಿಳಿದು ಹೋರಾಟ : ಭಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ

ರಾಜ್ಯದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯಲು ನಿರ್ಧರಿಸಿರುವ ವಿಚಾರಕ್ಕೆ ಪುತ್ತೂರಿನ ಭಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ ಕಿಡಿ ಕಾರಿದ್ದಾರೆ. ಭಜರಂಗದಳ ಯಾವುದೇ ಧರ್ಮದ ವಿರೋಧಿಯಲ್ಲ. ಬಲವಂತದ, ಆಮಿಷದ ಮತಾಂತರಕ್ಕೆ ವಿರೋಧವಿದೆ. ಯಾವುದೇ ಕಾರಣಕ್ಕೂ ಕಾಯ್ದೆ ವಾಪಾಸ್ ಪಡೆಯಬಾರದು. ಒಂದು ವೇಳೆ ವಾಪಾಸ್ ಪಡೆದಲ್ಲಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಾಗುವುದು. ಹಿಂದೂ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಕಾಪು : ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ

ಮತಾಂತರ ನಿಷೇಧ ಕಾಯ್ದೆ ವಾಪಸ್ ವಿಚಾರ : ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ : ಶಾಸಕ ಡಾ. ವೈ ಭರತ್ ಶೆಟ್ಟಿ

ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ ಹೇಳಿದ್ದಾರೆ. ಬಿಜೆಪಿ ಸರ್ಕಾರ ಮತಾಂತರ ಹಾವಳಿಯನ್ನು ತಡೆಗಟ್ಟಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಬಹಳಷ್ಟು

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ರಹಸ್ಯ ಹವನ

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ ನಿರಂತರ 9 ದಿನಗಳ ಕಾಲ ನಡೆಯುವ ಈ ಹೋಮದ ನೇತೃತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು

ಕಾಪು: ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಶೀಘ್ರ ಪರಿಹಾರದ ಭರವಸೆ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.  ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ