ಸುರತ್ಕಲ್ ತಡಂಬೈಲ್ನಲ್ಲಿ ರವಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸಮೀಪದ ವೆಂಕಟರಮಣ ರಾವ್ ಅವರ ಮಾಲಕತ್ವದ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಕಟ್ಟಡದ ಶೆಟರ್,ಮೇಲ್ಛಾವಣಿ ಹಾನಿಗೊಂಡಿದ್ದು
ಶಿಕ್ಷಣಕ್ಕೆ ಹೇಳಿ ಮಾಡಿದ ಪ್ರದೇಶ ಗ್ರಾಮೀಣ ಭಾಗ, ಉತ್ತಮ ಪರಿಸರ ಸಹಿತ ಗುಣಮಟ್ಟದ ಶಿಕ್ಷಣಕ್ಕಾಗಿ ಕಿನಾರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ನಾಡೋಜ ಜಿ. ಶಂಕರ್ ಮನವಿ ಮಾಡಿದ್ದಾರೆ. ಅವರು ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಈ ಹಿಂದೆ ಹೋಟೆಲ್ ನಲ್ಲಿ ಪಾತ್ರೆ ತೊಳೆಯುತ್ತಿದ್ದವರು ಸ್ವಂತ ಹೊಟೇಲ್ ಮಾಡಿದ
ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ ಹಾಗೂ ಹೊರ
ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ
ಕರ್ನಾಟಕ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ನ ನಿರ್ವಹಣೆಯಲ್ಲಿರುವ ಎಸ್ಸಿಎಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳ ಅಧೀನದಲ್ಲಿ ಎಸ್ಸಿಎಸ್ ರಿವರ್ಸೈಡ್ ಇಂಟರ್ನ್ಯಾಶನಲ್ ಅಕಾಡೆಮಿ ಎಂಬ ಹೆಸರಿನ ಹೊಸ ಪ್ರಾಥಮಿಕ ಶಾಲೆ ಮತ್ತು ಎಸ್ಸಿಎಸ್ ಪ್ರಿಸ್ಕೂಲ್ ಎಂಬ ಹೊಸ ಪ್ರಿಸ್ಕೂಲ್ ಮಂಗಳೂರಿನ ಲಾಂಗ್ ಲೇನ್, ಉರ್ವಾದ ರಿವರ್ಸೈಡ್ ಕ್ಯಾಂಪಸ್ನಲ್ಲಿ ಉದ್ಘಾಟನೆಗೊಳ್ಳಲು ಸಜ್ಜುಗೊಂಡಿವೆ. ಉದ್ಘಾಟನಾ ಸಮಾರಂಭವು ರಿವರ್ಸೈಡ್ ಕ್ಯಾಂಪಸ್ನಲ್ಲಿ ಸೋಮವಾರ, 5 ನೇ ಜೂನ್
ಬೇಲೂರು : ಕಾಂಗ್ರೆಸ್ ಮುಖಂಡ ಮತ್ತು ಸಮಾಜಸೇವಕ ಹಾಗೂ ಪುಷ್ಪಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ರಾಜಶೇಖರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು ಬ್ರೆಡ್ ಹಣ್ಣು ವಿತರಿಸಲಾಯಿತು. ಸಮಾಜ ಸೇವಕ ಗ್ರಾನೈಟ್ ರಾಜಶೇಖರ್ 59 ನೇ ಜನ್ಮ ದಿನದ ಅಂಗವಾಗಿ ಜಿಲ್ಲಾ ಸೇವಾದಳ ಯುವ ಬ್ರಿಗೇಡ್ ಹಾಗೂ ಅಭಿಮಾನಿಗಳಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಬ್ರಡ್ ಹಾಲೂ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸೇವಾದಳ ಯುವ ಬ್ರಿಗ್ರೇಡ್
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಘೋಷಣೆ ಮಾಡಿದ್ದು, ನಾನು ಸ್ವಾಗತಿಸುತ್ತೇನೆ. ಆದರೆ ಇದಕ್ಕೆ ಹಣದ ಮೂಲ, ಹಣದ ಕ್ರೋಢೀಕರಣ, ಎಷ್ಟು ವರ್ಷ ಇರುತ್ತದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಫಲಿತಾಂಶದ 24 ಗಂಟೆ ಅಂತ ಹೇಳಿ ಜನಾಕ್ರೋಶದ ಬಳಿಕ ತಡವಾಗಿ ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ. ನಿರುದ್ಯೋಗ ಭತ್ಯೆಗೆ ಮಾನದಂಡ ಹಾಕಿದ್ದಾರೆ, ಮೊದಲು ಮಾನದಂಡದ ಬಗ್ಗೆ
ದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತಸಂಭವಿಸಿದೆ. ಘಟನೆಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರುತ್ತಲೇ ಇದೆ. ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕರ್ನಾಟಕದಿಂದ ಹೋಗಿರುವ ರೈಲಿಗೂ ಸಹ ಹಾನಿಯಾಗಿದೆ. 23 ರೈಲ್ವೆ ಬೋಗಿಗಳ ಪೈಕಿ 3 ಬೋಗಿಗೆ ಮಾತ್ರ ಹಾನಿಯಾಗಿದೆ. ಹಾನಿಯಾದ ಬೋಗಿಯಲ್ಲಿ ಕರ್ನಾಟಕದವರು ಇದ್ದ ಮಾಹಿತಿ ಇಲ್ಲ. ನಿನ್ನೆಯಿಂದಲೂ ರೈಲ್ವೆ ಇಲಾಖೆ ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.
ಒಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.




























