ಕಡಬ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ಬಾಗಲಕೋಟೆ ಮೂಲದ ದ್ಯಾವಣ್ಣ ದೊಡ್ಡಮನಿ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿದ್ದರು. ಮೃತ
ಕಡಬ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರೆಂಜಿಲಾಡಿಯ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ (18) ಮೃತ ವಿದ್ಯಾರ್ಥಿನಿ. ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ
ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ
ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಕೌಶಲ್ಯಗಳ ಕಲಿಕೆಗೆ ಪೂರಕ ವ್ಯವಸ್ಥೆ ಮಾಡಬೇಕು, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯವಿರುವ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಸಮಾಜಕ್ಕೆ ಉತ್ತಮ ವ್ಯಕ್ತಿತ್ವದ ವ್ಯಕ್ತಿ ರೂಪಿಸುವ, ಪರಿಚಯಿಸುವ
ಅರುಣ್ ಕುಮಾರ್ ಪುತ್ತಿಲ ಅವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಿದ್ದಗಂಗಾ ಮಠದಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ಹಾಗು ಕಿರಿಯ ಶ್ರೀ ಗಳಾದ ಪೂಜ್ಯ ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳವರ ಆಶೀರ್ವಾದ ಪಡೆದರು. ಮಠದಾಧ್ಯಕ್ಷರು ಅರುಣ್ ಕುಮಾರ್ ಪುತ್ತಿಲರವರ ಜೊತೆ ರಾಜಕೀಯ ಹಾಗೂ
ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಜೂನ್ 1 ರ ಗುರುವಾರದಂದು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ,
ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಅನ್ಯಧರ್ಮಕ್ಕೆ ಸೇರಿದ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಾರೆಂಬ ಕಾರಣಕ್ಕೆ ತಂಡವೊಂದು ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಕೇರಳ ಚೆರ್ಕಳದ ಜಾಫರ್ ಶರೀಫ್
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ
ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ 31ರಂದು ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ‘ಎಸ್.ಡಿ.ಎಂ. ನೆನಪಿನಂಗಳ’ದ ನಾಲ್ಕನೆಯ ಕಂತಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಡಬ : ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ ಬದಿ ಕಾಡಾನೆ ನಿಂತಿತ್ತು. ಆನೆಯನ್ನು ನೋಡಿದ ಬಸ್ ಚಾಲಕ ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ.




























