ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ಹಿಂದೂ ಮಹಾಸಭಾ ಕಿಡಿಕಾರಿದೆ. ನಳಿನ್ ಕುಮಾರ್ ಕಟೀಲ್ ಅವರು ತಾಕತ್ತಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲಿ, ಅರುಣ್ ಕುಮಾರ್ ಪುತ್ತಿಲ ಅವರು ಪಡೆದ ಮತಗಳ 10 ಶೇಖಡಾ ಮತಗಳನ್ನು ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ಚಾಲಕ್ ಧರ್ಮೇಂದ್ರ ಅಮೀನ್ ಸವಾಲೆಸೆದಿದ್ದಾರೆ. ಪುತ್ತೂರಿನಲ್ಲಿ
ಧಾರ್ಮಿಕ ಕ್ಷೇತ್ರಗಳ ಮೂಲಕ ಧರ್ಮದ ಜಾಗೃತಿ ನಡೆಯಬೇಕು, ಭಕ್ತಿಯ ಆಲಯಗಳಲ್ಲಿ ಭಕ್ತರ ನಿಸ್ವಾರ್ಥ ಸೇವಾ ಸಂಪನ್ನತೆ ಹೆಚ್ಚಾದಾಗ ಕ್ಷೇತ್ರ ಬೆಳಗುತ್ತದೆ. ನಮ್ಮ ಹಿಂದೂ ಸಂಸ್ಕೃತಿ ಪ್ರತೀ ಮನೆಯಿಂದ ಬೆಳಗಿದಲ್ಲಿ ಅದು ಜಗತ್ತಿಗೆ ಬೆಳಕಾಗುತ್ತದೆ ಎಂದು ಉಡುಪಿ ಅಧೋಕ್ಷಜ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನಃಪ್ರತಿಷ್ಠೆ ಬ್ರಹ್ಮಕುಂಭಾಷೇಕ ಮತ್ತು ನಾಗಮಂಡಲೋತ್ಸವದ ಪ್ರಯುಕ್ತ
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ವಿಧಾನಪರಿಷತ್ ಸದಸ್ಯರನ್ನು ಒಳಗೊಂಡು ಐದು ಜನ ಶಾಸಕರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಎರಡು ಮಂತ್ರಿಸ್ಥಾನವನ್ನು ನೀಡಬೇಕು. ಅದೇ ರೀತಿ ನೂತನ
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜೇಶ್ ಪುದುಶೇರಿ ಅವರು ಬೆಂಗಳೂರು ರೈಲ್ವೆಯ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಆಲೋಕ್ ಮೋಹನ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್ ಸೂದ್ ಅವರು ಆಲೋಕ್ ಮೋಹನ್ ಅವರಿಗೆ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.
ಉಡುಪಿಯ ಅದಿತಿ ಗ್ಯಾಲರಿ ವತಿಯಿಂದ “ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಪ್ರತೀದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆ ತನಕ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದ ಉದ್ಘಾಟನಾ ಸಮಾರಂಭವು ಮೇ 25, 2023 ರಂದು ಸಂಜೆ 5:15 ಕ್ಕೆ ಅದಿತಿ ಗ್ಯಾಲರಿನಲ್ಲಿ ಜರುಗಲಿದೆ. ಈ ಸಮಾರಂಭದಲ್ಲಿ ಮೂಡುಬಿದರೆಯ ಆಳ್ವಾಸ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಉಜ್ವಲ್ ಗ್ರೂಪ್ನ
ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ನಾಯ್ಕ್ ದೈಪಲ ಮತ್ತು ಟ್ರಸ್ಟ್ ಅಧ್ಯಕ್ಷ ರವೀಂದ್ರನಾಥ ಕೆ.ಮುಳ್ಳೇರಿಯ ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು 400 ವರ್ಷಗಳ
ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಇಂದಿನಿಂದಲೇ ಸಿದ್ಧತೆ ನಡೆಸಬೇಕಾಗಿದೆ ಗೆಲುವಿಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಂಡವಾಗಿ ಕಾರ್ಯನಿರ್ವಹಿಸಬೇಕಾಗಿದೆ.
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ




























