ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.ಸಾಮಾನ್ಯರಲ್ಲಿ ಸಾಮಾನ್ಯರಂತೆ ಬಂದು ಮತ ಚಲಾಯಿಸಿ, ಅನಂತರ ಕೈ ಬೆರಳಿನ
ವಿನಯ್ ಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಸರಕಾರಿ ಕಾಲೇಜಿಗೆ ತಮ್ಮ ಕುಟುಂಬದದೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.
ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಪದವಿ ಪೂರ್ವ
ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.
ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ. ಮತ ಚಲಾಯಿಸಿ ಮಾತನಾಡಿದ ಯಶ್ಪಾಲ್ ಸುವರ್ಣ, ಗೆಲ್ಲುವ ವಿಶ್ವಾಸ ಇದೆ ಮುಂದಿನ 5 ವರ್ಷಗಳಲ್ಲಿ ಜನರ ಸೇವೆ ಮಾಡುವ ಅವಕಾಶ ಲಭಿಸಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯೇ ಮತದಾರರು ಸಾಲುಗಟ್ಟಿರುವುದು ಕಂಡು ಬಂದಿದ್ದು, ಈ ಬಾರಿಯ ಮಾದರಿ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಸೆಳೆಯುವಂತಿದೆ. ಇನ್ನು ರಾಜ್ಯದ ಒಟ್ಟು
ಬಹರೈನ್ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘದ ಯಕ್ಷೋಪಾಸನ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಂದ “ಗಿರಿಜಾ ಕಲ್ಯಾಣ ” ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ ಕನ್ನಡ ಭವನದ ಶ್ರೀಮತಿ ಆಶಾ ಶೆಟ್ಟಿ ಸಭಾಂಗಣದಲ್ಲಿ ಇದೇ ಮೇ ತಿಂಗಳ 19ನೇ ತಾರೀಖಿನ ಶುಕ್ರವಾರದಂದು ಸಂಜೆ 5:30 ಗೆ ಸರಿಯಾಗಿ ಆಯೋಜಿಸಲಾಗಿದೆ ಬಹರೈನ್ ಕನ್ನಡ ಸಂಘಕ್ಕೂ ಯಕ್ಷಗಾನಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದ್ದು



























