Home Blog Left SidebarPage 516

ಮೇ 10ರ ಮತದಾನ, ಮತಗಟ್ಟೆಗಳಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,9061 ಮತದಾರರಿದ್ದು, ನಾಳೆ ಜರಗಲಿರುವ 29 ಮತಗಟ್ಟೆಗಳಿಗೆ ಚುನಾವಣೆ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಕಳಿಸಲು ಕಾರ್ಕಳ ಮಂಜುನಾಥ ಪೈ ಕಾಲೇಜಿನಿಂದ ವ್ಯವಸ್ಥೆ ಮಾಡಲಾಗಿದ್ದು ಬೆಳಗಿನಿಂದಲೇ ಪೆÇಲೀಸ್, ಅರೆ ಸೈನಿಕ ಪಡೆ, ಸ್ಥಳದಲ್ಲಿ

ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆ ; 2023-24 ನೇ ಸಾಲಿನ ದಾಖಲಾತಿ ಪ್ರಾರಂಭ

ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ. 2023-24 ನೇ ಸಾಲಿನ ನರ್ಸರಿ, ಶಿಶುವಿಹಾರ, ಪ್ರಾಥಮಿಕ ವಿಭಾಗ, ಪ್ರೌಢ ವಿಭಾಗದ ದಾಖಲು ಪ್ರಾರಂಭವಾಗಿದೆ. ಗುಣಾತ್ಮಕ ಶಿಕ್ಷಣ , ಸೃಜನಾತ್ಮಕ ಕ್ರೀಯಾಶೀಲ ಕಲಿಕೆ, ಆರೋಗ್ಯಕರ ವಾತಾವರಣ, ಸುಸಜ್ಜಿತ ಸಭಾಭವನ, ಹೊರ ಮತ್ತು ಒಳಾಂಗಣ ಕ್ರೀಡಾ ಚಟುವಟಿಕೆಗಳು, ಸುಸಜ್ಜಿತ ವಿಜ್ಞಾನ ಮತ್ತು ಗಣಕಶಾಸ್ತ್ರ ಪ್ರಯೋಗಾಲಯಗಳು, ಪೌಷ್ಟಿಕಾಂಶಯುಕ್ತ ಮಧ್ಯಾಹ್ನ ಊಟ

“ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ : ಮೇ 12. ಬಹರೈನ್‍ನಲ್ಲಿ ಪ್ರೀಮಿಯರ್ ಶೋ

ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ “ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ ಮಂದಿರದಲ್ಲಿ ಗ್ರ್ಯಾಂಡ್ ಪ್ರೀಮಿಯರ್ ಪ್ರದರ್ಶನ ಕಾಣಲಿದೆ.ತುಳು ಚಲನಚಿತ್ರ ರಂಗದ ಜನಪ್ರಿಯ ನಟರುಗಳು ಒಂದಾಗಿ ನಟಿಸಿರುವ ಈ ಚಲನಚಿತ್ರವನ್ನು ಖ್ಯಾತ ನಿರ್ದೇಶಕ ಸಾಯಿ ಕೃಷ್ಣ ಕುಡ್ಲಾ ರವರು ಬರೆದು

ಕಡಬ ; ಬೆಂಗಳೂರಿನಿಂದ ರಜೆಯಲ್ಲಿ ಬಂದಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣ ಸಾವು

ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಷಿತ (14 ವರ್ಷ) ಮತ್ತು ಅವಂತಿಕಾ (10 ವರ್ಷ) ಎಂದು ಗುರುತಿಸಲಾಗಿದೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ, ಸ್ಥಳೀಯರ ಸಹಕಾರದಿಂದ ಇಬ್ಬರ ಮೃತ ದೇಹ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ

ಬಂಟ್ವಾಳ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ : 100% ಫಲಿತಾಂಶ

ಬಂಟ್ವಾಳದ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಬರೆದ 96 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು 100% ಫಲಿತಾಂಶ ಪಡೆದುಕೊಂಡಿದೆಶಾಲಾ ವಿದ್ಯಾರ್ಥಿನಿ ಕೆ.ಶೃತಿ 625 ರಲ್ಲಿ 610 ಅಂಕ ಗಳಿಸಿ ಶಾಲೆಗೆ ಮೊದಲಿಗಳಾಗಿದ್ದಾಳೆ. 24 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ

ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ : SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ

ಸತತ ನೂರು ಶೇ. ಸಾಧನೆಯ ಪ್ರತಿಷ್ಠಿತ ಶಾಲೆ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಸವನ ಗುಡಿ ವಿಟ್ಲ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ. ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ. ಯನ್ 614 ಅಂಕ ಹಾಜರಾದ 91 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಗಳಿಕೆ 37 ವಿದ್ಯಾರ್ಥಿಗಳು A+, 29ವಿದ್ಯಾರ್ಥಿಗಳು – […]

ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮೂಡುಬಿದಿರೆಯಲ್ಲಿ ಮತಯಾಚನೆ

ಮೂಡುಬಿದಿರೆ: ಮುಲ್ಕಿ -ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಅವರು ಕಾರ್ಯಕರ್ತರೊಂದಿಗೆ ತನ್ನ ವಾಡ್ ೯64ರಲ್ಲಿ ಮತಯಾಚಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ರಾಜೇಶ್ ನಾಯ್ಕ್ ಮತ್ತಿತರರಿದ್ದರು.

ಇಂದು ಸಂಜೆಯಿಂದ ಮದ್ಯ ಮಾರಾಟ ಬಂದ್

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿ 12

ಮೂಲ್ಕಿ ,ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ : ಉಮಾನಾಥ ಕೋಟ್ಯಾನ್ ಗೆ ಗ್ರಾಮಸ್ಥರ ಬೆಂಬಲ

ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ 7 ಕೋಟಿಗೂ ಅಧಿಕ ವೆಚ್ಚದ ಅನುದಾನ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಗುತ್ತಿಗಾರು ಪೇಟೆಯಲ್ಲಿ ಚುನಾವಣಾ ಪ್ರಚಾರ

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗುತ್ತಿಗಾರು ಪೇಟೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರೊಂದಿಗೆ ತೆರಳಿ ಬಹಿರಂಗ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.