Home Blog Left SidebarPage 530

ಕಾರ್ಕಳ : ಕಾಂಗ್ರೆಸ್‍ ಮುಖಂಡರು ಬಿಜೆಪಿಗೆ ಸೇರ್ಪಡೆ

ಕಾರ್ಕಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಅವರು ಸುನಿಲ್ ಕುಮಾರ್ ರವರ ವಿಕಾಸ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಅವರ ಜೊತೆ ಹಲವರು ಕಾಂಗ್ರೆಸಿನ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡಿಕೊಂಡರು. ಸುನಿಲ್ ಕುಮಾರ್ ಅವರು ಬಿಜೆಪಿ ಪಕ್ಷದ

ಕಾರ್ಕಳ : ಉದಯಕುಮಾರ್ ಶೆಟ್ಟಿ ಮುನಿಯಾಲ್ : ಪಾದಯಾತ್ರೆ ಮೂಲಕ ಮತಯಾಚನೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಬೆಳ್ಮಣ್ ನಲ್ಲಿ ಪಾದಯಾತ್ರೆಯ ಮೂಲಕ ಮತಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಪಾಲ್ಗೊಂಡಿದ್ದರು.

ಪುತ್ತೂರಿನ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ವಿವಿಧೆಡೆ ಮತಯಾಚನೆ

ಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ.ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪಲ್ಲತ್ತೂರು, ಪಡುವನ್ನೂರು, ಮುಂಡೂರುನಲ್ಲಿ ತನ್ನ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕಾರ್ಯ ಹಾಗೂ ಮತಯಾಚನೆ ನಡೆಸಿದರು.

ಪುತ್ತೂರಿನ ನವನಿರ್ಮಾಣಕ್ಕೆ ಅರುಣ್ ಕುಮಾರ್‌ನ್ನು ಗೆಲ್ಲಿಸಬೇಕು : ಪುತ್ತೂರಿನಲ್ಲಿ ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿಕೆ

ಪುತ್ತೂರು; ಹಿಂದುತ್ವದ ಆಧಾರದಲ್ಲಿ ಪುತ್ತೂರಿನ `ನವನಿರ್ಮಾಣ’ ಆಗಬೇಕಾದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ದೇಶಕ್ಕೆ ಮಾದರಿಯಾದ ತಾಲೂಕು ನಿರ್ಮಾಣ ಮಾಡಬಲ್ಲ ಏಕೈಕ ನಾಯಕ ಬೇಕಾಗಿದೆ. ಮೋದಿ ಮಾದರಿ-ಯೋಗಿ ಮಾದರಿ ಗುಜರಾತ್ ಯುಪಿ ಮಾದರಿ ಆಡಳಿತ ಬಯಸುವ ನಾವು ನಮ್ಮೂರಿನಲ್ಲಿ ಈ ಮಾದರಿ ನೋಡಲು ಅರುಣ್ ಕುಮಾರ್ ಪುತ್ತಿಲರನ್ನು ವಿಧಾನಸಭೆಗೆ ಕಳುಹಿಸಬೇಕಾಗಿದೆ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು. ಪುತ್ತುರಿನ ಮುಕ್ರಂಪಾಡಿಯ ಸುಭದ್ರಾ

ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತಯಾಚನೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ.

ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ಉಮಾನಾಥ್ ಕೋಟ್ಯಾನ್ ಭೇಟಿ

ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

ಆರ್ಯಾಪು ಮಾಜಿ ಗ್ರಾ.ಪಂ. ಸದಸ್ಯ ಜಬ್ಬಾರ್ ಕಾಂಗ್ರೆಸ್‍ಗೆ ಸೇರ್ಪಡೆ

ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ” ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು

ಸುಪ್ರೀಂ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟ ವಿಚಾರ : ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ನಿಂದ ಖಂಡನೆ

ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದರು. ಭಾರತದಲ್ಲಿ ವಿವಾಹಕ್ಕೆ ಶ್ರೇಷ್ಠ ಪ್ರಾಮುಖ್ಯತೆಯನ್ನು ಹೊಂದಿದ್ದು, ಕೌಟುಂಬಿಕ ಸಮಾಜವನ್ನು ನಿರ್ಮಿಸುವುದರದಲ್ಲಿ

ರಾಜ್ಯದಲ್ಲಿ ಸೌಹಾರ್ದತೆಯ ವಾತಾವರಣ ಮತ್ತೆ ಸೃಷ್ಟಿಯಾಗಲಿದೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ