Home Blog Left SidebarPage 627

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ

ಶೋಷಿತ ಸಮುದಾಯವನ್ನು ಮತ್ತಷ್ಟು ಶೋಷಿಸುವ ಕಾರ್ಯಕ್ಕೆ ಶಾಸಕರು ಮುಂದಾಗಿದ್ದಾರೆ: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಎಸ್.ವೈ ಗುರುಶಾಂತ್

ಬೆಳ್ತಂಗಡಿ; ಆದಿವಾಸಿವಸಮುದಾಯದ ಮುಖಂಡ ಜಯಾನಂದ ಪಿಲಿಕಳ ಅವರ ಮೇಲೆ ಶಾಸಕರು ದಬ್ಬಾಳಿಕೆ ನಡೆಸಿ ಅವಮಾನ ಮಾಡಿ ಹಲ್ಲೆ ಮಾಡುವುದಾಗಿ ಸಾರ್ವಜನಿಕವಾಗಿ ಬೆದರಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿ ಮೂಲನಿವಾಸಿ ಮಲೆಕುಡಿಯರ ಸಂಘ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ

ಪುತ್ತೂರು: ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಅದಕ್ಕೆ ಪ್ರತೀ ಬೂತ್‍ನಿಂದ ಇಬ್ಬರು ಭಾಗವಹಿಸಬೇಕು, ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಪುತ್ತೂರು ಅಮರ್ ಕಾಂಪ್ಲೆಕ್ಸ್‍ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ರಾಜ್ಯ

ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.ಕಾರ್

ಕಾರ್ಕಳದಲ್ಲಿ ನಡೆದ ಪಂಜಿನ ಪೊಲೀಸ್ ಕವಾಯತು

ಕಾರ್ಕಳ: ರಾಜ್ಯದ ಪ್ರಮುಖ ನಗರವಾದ ಮೈಸೂರು ಹಾಗೂ ಬೆಂಗಳೂರಿಗೆ ಸೀಮಿತವಾಗಿದ್ದ ಪೊಲೀಸ್ ಕವಾಯತು ಕಾರ್ಕಳದಲ್ಲಿ ನಡೆಯುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು . ಅವರು ಸ್ವರಾಜ್ ಮೈದಾನದಲ್ಲಿ ನಡೆದ ವಿಶ್ವವಿಖ್ಯಾತ ಬೈಲೂರಿನ ಪರಶುರಾಮ ಧಿಂ ಪಾರ್ಕ್ ಲೋಕಾರ್ಪಣೆಗೆ ಪ್ರಯುಕ್ತ ಪೊಲೀಸ್ ಇಲಾಖೆ ಶ್ರೀ ಭುವನೇಂದ್ರ ಕಾಲೇಜು ಇವರ ಸಹಯೋಗದಲ್ಲಿ ನಡೆದ ಆಕರ್ಷಕ ಪಂಜಿನ ಕವಾಯತು ಉದ್ಘಾಟಿಸಿ ಮಾತನಾಡಿದರು. ಅಭಿವೃದ್ಧಿ ಸಾಂಸ್ಕೃತಿಕತೆ ಜನತೆಗೆ ಎಲ್ಲ ಆಯಾಮಗಳಲ್ಲಿನ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಸಮಿತಿ ಸಭೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಕಾರ್ಯ ಯೋಜನೆಯ ಅಂಗವಾಗಿ ಶತಮಾನೋತ್ಸವ ಸಮಿತಿ ಸಭೆ ನಡೆಸಲಾಯಿತು.           ಮುಖ್ಯ ಅತಿಥಿಯಾಗಿ ಆಗಮಿಸಿದ ಹೇರಂಬ ಇಂಡಸ್ಟ್ರೀಸ್ ನ ಮುಖ್ಯಸ್ಥ, ಕೊಡುಗೈ ದಾನಿ, ಕುಳೂರು ಶಾಲಾ ಹಳೆ ವಿದ್ಯಾರ್ಥಿಯೂ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರ ಮುಂದಾಳತ್ವದಲ್ಲಿ ಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ

ಮಂಜೇಶ್ವರ: ಕಾರು ಡಿವೈಡರ್‌ಗೆ ಡಿಕ್ಕಿ : ಸಾವಿನ ಸಂಖ್ಯೆ ಎರಡಕ್ಕೆ

ಮಂಜೇಶ್ವರ: ಕಾರು ಡಿವೈಡರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಮತ್ತೊಬ್ಬ ಯುವಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕರ ಸಂಖ್ಯೆ ಎರಡಕ್ಕೇರಿದೆ. ಉಪ್ಪಳ ಹಿದಾಯತ್ ನಗರ ಬುರಾಕ್ ರಸ್ತೆಯ ಸಲೀಂ ಅವರ ಪುತ್ರ ಮಹಮ್ಮದ್ ಬಷರ್ (23) ಸೋಮವಾರ ಮಧ್ಯಾಹ್ನ ಸಾವಿಗೆ ಶರಣಾಗಿದ್ದಾನೆ. ತಲಪಾಡಿ ಸಮೀಪದ ಕೊಲ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿತ್ತು.

ಅಪಘಾತ- ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಕಾಲಿಗೆ ಗಾಯ

ಮಂಗಳೂರು:  ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಗರದ ಪಂಪ್‌ವೆಲ್ ಬಳಿ ಸ್ಕಿಡ್ಡಾಗಿ ಉರುಳಿ ಬಿದ್ದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗವಾಗಿ ಬರುತ್ತಿದ್ದ ಬಸ್‌  ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ  ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಬ್ರೇಕ್ ಹಾಕಿದ್ದು, ಈ ಸಂದರ್ಭ ಸ್ಕಿಡ್ಡಾಗಿ ಬಿದ್ದು  ಬೋಳಾರ್‌ ಕಾಲಿಗೆ ಗಾಯವಾಗಿದ್ದು, ನಗರದ ಖಾಸಗಿ

ಶರಣ್ ಪಂಪ್ ವೆಲ್ ಭಾಷಣ ಜನಾಂಗ ಹತ್ಯೆಗೆ ಪ್ರಚೋದನೆ. ಕಠಿಣ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿ : ಡಿವೈಎಫ್ಐ ಆಗ್ರಹ

ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು “ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ” ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್ದಾರೆ. ಗುಜರಾತ್ ಗಲಭೆಯ ಎರಡು ಸಾವಿರ ಜನರ ಕೊಲೆಯನ್ನೂ ಸಮರ್ಥಿಸಿಕೊಂಡಿದ್ದಾರೆ. ಇದು ತೀರಾ ಆತಂಕಕಾರಿ

ಕುರುಡು ಮಲೈನಲ್ಲಿ ಜ.3 ರಿಂದ ಡಿ.ಕೆ. ಶಿವಕುಮಾರ್ ಅವರ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆ : ಪೂರ್ವ ಸಿದ್ಧತಾ ಸಭೆ ನಡೆಸಿದ ಮಾಜಿ ಸಚಿವ ಎಂ.ಆರ್. ಸೀತಾರಾಂ

ಬೆಂಗಳೂರು, ಜ, 30; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದ ಕುರುಡು ಮಲೈನಲ್ಲಿ ಫೆ. 3 ರಿಂದ ಆರಂಭಿಸಲಿರುವ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆಯ ಯಶಸ್ಸಿಗಾಗಿ ಮಾಜಿ ಸಚಿವ ಎಂ.ಆರ್. ಸೀತಾರಾಂ ಇಂದು ಪೂರ್ವಭಾವಿ ಸಭೆ ನಡೆಸಿದರು. ಎಂ.ಅರ್. ಸೀತಾರಾಂ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ಡಿ.ಕೆ. ಶಿವಕುಮಾರ್ ಅವರು ನೇಮಿಸಿದ್ದು, ಈ ಹಿನ್ನೆಲೆಯಲ್ಲಿ ಅವರು “ಪ್ರಜಾಧ್ವನಿ”