Home Blog Left SidebarPage 641

ಬೆಳ್ತಂಗಡಿಯ ಆನಾರು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ

ನಮ್ಮಲ್ಲಿರುವ ಒಳ್ಳೆ ಗುಣಗಳನ್ನು ಬೆಳೆಸಬೇಕು.ನಮ್ಮನ್ನು ನಾವು ಗುರುತಿಸಿ ಕೊಳ್ಳಬೇಕು ಎಂದು ಮೂಡಬಿದ್ರೆಯ ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಅನಾರು ದೇವಸ್ಥಾನದಲ್ಲಿ ಧಾರ್ಮಿಕ ಭಾಷಣದಲ್ಲಿ ಮಾತನಾಡಿ ದೇವರನ್ನು ನಾವು ನಮ್ಮ ಹೃದಯದಲ್ಲಿ ಕಾಣಬೇಕು. ಜೀವನದಲ್ಲಿ ದೇವರು ಮೆಚ್ಚುವಂತಹ ಒಳ್ಳೆಯ ಕೆಲಸ ಮಾಡಬೇಕು

ಲೇಖಕಿ ಸಾರಾ ಅಬೂಬಕ್ಕರ್ ಅವರಿಗೆ ನಾಗರಿಕ ನುಡಿನಮನ

ಹೆಸರಾಂತ ಕನ್ನಡ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನಾಗರಿಕ ನುಡಿನಮನ ಮತ್ತು ಸಂತಾಪ ಸಭೆಯು ಬಲ್ಮಠದ ಸಹೋದಯ ಸಭಾಂಗಣದಲ್ಲಿ ಜರುಗಿತು. ಹಿರಿಯ ಸಾಹಿತಿ ಬಿ.ಎಂ. ರೋಹಿಣಿ ಮಾತನಾಡಿ, ಪ್ರಭುತ್ವ ಪೊಲೀಸ್, ಪುರೋಹಿತಶಾಹಿ ವಿರುದ್ಧ ಸಾರಾ ಅಬೂಬಕ್ಕರ್ ಧ್ವನಿ ಎತ್ತಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂಬುವುದು ಅವರ ನಿಲುವಾಗಿತ್ತು. ತನ್ನ ಕೃತಿಯ ಅನುವಾದ ಮತ್ತು ಕಾದಂಬರಿ ಆಧರಿಸಿ ನಿರ್ಮಿಸಿದ ಚಲನಚಿತ್ರವನ್ನು

ಪತನವಾದ ನೇಪಾಳ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯರು

ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್‌ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ ಟ್ವೀಟ್‌ನಲ್ಲಿ ಖಚಿತಪಡಿಸಿದೆ. 15 ವಿದೇಶಿಯರು ಸೇರಿದಂತೆ 72 ಜನರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ಪ್ರಯಾಣಿಕ ವಿಮಾನವು ಪ್ರಮುಖ ಪ್ರವಾಸಿ ತಾಣವಾದ ಪೋಖರಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನದಿಯ ಕಮರಿಗೆ ಬಿದ್ದು ಪತನಗೊಂಡಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು

ಎಮ್.ಜಿ. ಹೆಗ್ಡೆ ಅವರು ಬರೆದಿರುವ ಮಿನುಗು ನೋಟ ಪುಸ್ತಕ ಬಿಡುಗಡೆ

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಿತು. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ ಕುಲಕರ್ಣಿ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮಾನವತೆಗೆ ಬೇಕಾದ ವಿಚಾರ ಎಂದೂ ಸಾಯುವುದಿಲ್ಲ. ಮಹಾತ್ಮಾ ಗಾಂಧೀಜಿಯವರು ವಿಶ್ವಶಾಂತಿಗಾಗಿ ಇಡೀ ಜಗತ್ತಿನಲ್ಲಿ ಸಹಬಂಧುತ್ವಕ್ಕಾಗಿ,

ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ: ಪೊಳಲಿ ಕ್ಷೇತ್ರದಲ್ಲಿ ಚಾಲನೆ

ಬಂಟ್ವಾಳ: ಜ.14 ರಿಂದ ಜ. 26ರವರೆಗೆ ಬಂಟ್ವಾಳ  ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಕ್  ಉಳಿಪ್ಪಾಡಿಗುತ್ತು  ಅವರ ನೇತ್ರತ್ವದಲ್ಲಿ ನಡೆಯಲಿರುವ  ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಶನಿವಾರ ಸಂಜೆ  ಚಾಲನೆ ನೀಡಲಾಯಿತು.   ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು

ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ

ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ದಿನ ನಾಕೌಟ್ ಪಂದ್ಯಗಳಲ್ಲಿ ಬೆಂಗಳೂರು ವಿವಿ 35-07, 35-14ರಲ್ಲಿ ಮೌಲಾನಾ ಆಜಾದ್ ವಿವಿಯನ್ನು

ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಉಪ್ಪಿನಂಗಡಿ : ಪುರುಷರ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮಂಗಳೂರು ವಿವಿಯು ಐದು ದಿನಗಳ ಕಾಲ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅದ್ದೂರಿಯ ಚಾಲನೆ ದೊರಕಿದೆ. ರಾಷ್ಟ್ರ ಧ್ವಜದ ಬಣ್ಣವನ್ನು ಸಂಕೇತಿಸುವ ಬಲೂನುಗಳನ್ನು ಗಗನದೆತ್ತರಕ್ಕೆ ಹಾರಿಬಿಡುವ ಮೂಲಕ ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಮಠಂದೂರು ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಅದರೊಂದಿಗೆ ನೂರಾರು ಬಣ್ಣಬಣ್ಣದ ಬಲೂನುಗಳನ್ನು

ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ :ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಂಗಳೂರು ನಗರದಲ್ಲಿರುವ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆ ಕಾರ್ಯಾಲಯದ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಮಂಗಳೂರು ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಡ್ರಗ್ಸ್ ನಿಯಂತ್ರಣಕ್ಕೆ ಆಗ್ರಹಿಸಿದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನಾಯಕರು ಗಡಿ ಭಾಗದಿಂದ ಮಂಗಳೂರಿಗೆ ಸರಬರಾಜು ಆಗುತ್ತಿರುವ ಮಾದಕದ್ರವ್ಯಕ್ಕೆ ತಡೆ ಹಾಕಬೇಕು ಎಂದು ಆಗ್ರಹಿಸಿದರು.ಡ್ರಗ್ಸ್ ಜಾಲಕ್ಕೆ