ಮಂಗಳೂರು: ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಗರದ ಜೈಲ್ ರಸ್ತೆ-ಕದ್ರಿ ಕಂಬಳದ ವಸತಿ ಸಮುಚ್ಚಯದ 2ನೆ ಅಂತಸ್ತಿನ ಫ್ಲ್ಯಾಟ್ನಲ್ಲಿ ನಡೆದಿದೆ. ಏಕಾಏಕಿ ಬೆಡ್ರೂಮ್ನಲ್ಲಿ ಹೊಗೆ ಕಾಣಿಸಿತು. ಮಾಹಿತಿ ಪಡೆದ ಪಾಂಡೇಶ್ವರ ಮತ್ತು ಕದ್ರಿಯ ಅಗ್ನಿಶಾಮ ದಳದ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ
ಸರ್ಕಾರ ಸ್ಥಾಪಿಸಿದ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಕಳೆದ ಜ.5ರಂದು ಸಚಿವ ಸುನೀಲ್ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿತ್ತು. ಈ ಸಂದರ್ಭ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ವಿರೋಧ ಇರುವುದು ಸರ್ಕಾರಕ್ಕೆ
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ
ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾಣಿಸಿಕೊಂಡಿರುವ ಬೆಂಕಿಯಿಂದ ಉಂಟಾದ ಹೊಗೆ ಮಂಗಳೂರು ನಗರದವರೆಗೂ ವ್ಯಾಪಿಸಿದೆ. ಮಂಗಳವಾರ ರಾತ್ರಿ ನಗರದ ವಿವಿಧೆಡೆ ಮಂಜು ಕವಿದಂತೆ ಹೊಗೆ ಆವರಿಸಿದ್ದು, ಘಾಟು ವಾಸನೆಯೂ ಇತ್ತು. ಕುಂಟಿಕಾನ, ದೇರೆಬೈಲ್, ಕೊಂಚಾಡಿ, ಕೆಪಿಟಿ ಮೊದಲಾದ ಕಡೆ ಹೊಗೆ ವಾತಾವರಣ, ವಾಸನೆ ಹೆಚ್ಚಿದ್ದು ಸಾರ್ವಜನಿಕರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಅಗ್ನಿ ಶಾಮಕ ಠಾಣೆಗೂ ಕರೆ ಮಾಡಿ ವಿಚಾರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ
ಬೆಂಗಳೂರು: ಪರಿಶಿಷ್ಟರ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿದ್ದು, ಈ ವರದಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ. ನಗರದ ಮೆಜೆಸ್ಟಿಕ್ ನ ಕೆ.ಆರ್.ಎಸ್ ನಿಲ್ದಾಣದಿಂದ ಬೃಹತ್ ಜಾತಾ ಮೂಲಕ ಫ್ರೀಡಂ ಪಾರ್ಕ್ ನಲ್ಲಿ ಸೇರಿದ ಒಕ್ಕೂಟದ ಸದಸ್ಯರು, ಆಯೋಗದ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದರು. ಈ ಬೃಹತ್ ಜಾಥಾದಲ್ಲಿ ಭೋವಿ ಮಠಾಧೀಶರಾದ
ದಕ್ಷಿಣ ಕನ್ನಡ ಜಿಲ್ಲೆಯ 4 ಶಾಲೆಗಳ 30 ಪರಿಣಿತ ವಿಷಯ ಶಿಕ್ಷಕರಿಂದ ಸಿದ್ಧಪಡಿಸಲಾದ ವಿದ್ಯಾರ್ಥಿ ಸ್ನೇಹಿ ಎಸ್ಎಸ್ಎಸ್ಎಲ್ ಉತ್ತೀರ್ಣ ಪ್ಯಾಕೇಜ್ನ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಗರದ ಪ್ರೆಸ್ಕ್ಲಬ್ನಲ್ಲಿ ಡಿಡಿಪಿಐ ಸುಧಾಕರ್ ಅವರು ಎಸ್ಎಸ್ಎಸ್ಎಲ್ ಉತ್ತೀರ್ಣ ಪ್ಯಾಕೇಜ್ನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು,
ಪುತ್ತೂರು: ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿಯೊಬ್ಬರು ಕಚೇರಿ ಸಿಬ್ಬಂದಿಗೆ ಆರೋಪಿಸಿ, ದೂರು ನೀಡಿದ್ದಾರೆ. ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ನೀಡಿದ ದೂರಿನಲ್ಲಿ ತಿಳಿಸಿರುವಂತೆ, ಸಿಬ್ಬಂದಿ ಶಿವಾನಂದ ತನ್ನ ವೈಯುಕ್ತಿಕ ಮತ್ತು ಸ್ವಹಿತಾಸಕ್ತಿಗಾಗಿ ಸರಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದನು ಎಂದು
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯಾವಹಾರವನ್ನು ಮಾಡುತ್ತಿದ್ದರು ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ ಸಂಬಂದ ಸಮಸ್ಯೆಯಿಂದ ಬಳಳುತ್ತಿದ್ದು ಕಳೆದ ನವೆಂಬರ್ 18 ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭವಾಗುತ್ತು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿತ್ತು ಈ ಚಿಕಿತ್ಸೆ ನಡೆದ ನಂತರ ವಾಸು ಅವರಿಗೆ ಮಾತನಾಡಲು
ಬೈಂದೂರು ತಾಲೂಕಿನಲ್ಲಿ ಸರ್ಕಾರಿ ಆಸ್ಪತ್ರೆ ಮಂಜೂರಿಗಾಗಿ ಆಗ್ರಹಿಸಿ ಕಾರ್ಡ್ ಚಲೋ ಚಳುವಳಿಯನ್ನು ಆರಂಭಿಸಿದ್ದಾರೆ. ವಕೀಲರಾದ ಧನಂಜಯ ಶೆಟ್ಟಿ ಶಿರೂರು ಮತ್ತು ಬೈಂದೂರು ನಾಗರಿಕ ಸೇವಾ ವೇದಿಕೆಯ ಅಧ್ಯಕ್ಷರಾದ ಅಶ್ವಥ್ ನಾರಾಯಣ ಅವರು ಶೀಘ್ರದಲ್ಲೇ ಆಸ್ಪತ್ರೆ ಮಂಜೂರುಗೊಳಿಸುವಂತೆ ಒತ್ತಾಯಿಸಿದ್ದಾರೆ. ಬೈಂದೂರು ತಾಲೂಕು ಕೇಂದ್ರದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆಯಲ್ಲಿ ಚುನಾವಣೆ ಮೊದಲೇ ಮಂಜೂರು ಮಾಡಬೇಕು ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ ರಾ.ಹೆ66 ರ ಕೋಟೆಕಾರು ಬೀರಿ ಸಮೀಪ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಸ್ಥಳೀಯ ಯುವಕರ ತಂಡ ತಕ್ಷಣ ಕಾರು ಚಾಲಕನನ್ನು ಹೊರಗೆಳೆದು ರಕ್ಷಿಸಿ ಮಾನವೀಯತೆ ಮೆರೆದಿರುವ ವೀಡಿಯೋ ವೈರಲ್ ಆಗಿದೆ. ಹಳೆಯಂಗಡಿ ನಿವಾಸಿ ನೌಫಾಲ್ ಗಾಯಗೊಂಡವರು. ತಲಪಾಡಿ ಕಡೆಯಿಂದ ಹಳೆಯಂಗಡಿಯತ್ತ ತೆರಳುವ ವೇಳೆ ಕಾರು ನಿಯಂತ್ರಣ ಕಳೆದು ರಾ.ಹೆ. ಬಳಿಯ ವಿಭಜಕ




























