Home Blog Left SidebarPage 649

ಪಚ್ಚನಾಡಿ ಯಲ್ಲಿ ಬೆಂಕಿ ಅನಾಹುತ : ಇಂದು ಸಹ ಮುಂದುವರಿದ ಬೆಂಕಿ ನಂದಿಸುವ ಕಾರ್ಯ

ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್‍ಪಿಎಲ್, ಎನ್‍ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು

ಮಣ್ಣ್ ದ ರುಣೊ ತುಲು ಕವನಸಂಕಲನ ಲೋಕಾರ್ಪಣೆ

ಶ್ರೀ ಧಾಮ ಮಾಣಿಲದಲ್ಲಿ ಶ್ರೀಮತಿ ನಿರ್ಮಲಾ ಶೇಷಪ್ಪ ಕುಲಾಲರ ಮಣ್ಣ್ ದ ರುಣೊ ಎಂಬ ತುಲು ಕವನ ಸಂಕಲನವನ್ನು ಮಾಣಿಲ ಕ್ಷೇತ್ರದ ಶ್ರೀ ಶ್ರೀ,ಯೋಗಿಕೌಸ್ತುಭ, ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯಹಸ್ತದಿಂದ ಲೋಕಾರ್ಪಣೆ ಗೊಂಡಿತು.ಪ್ರಸಿದ್ಧ ಸಾಹಿತಿ ಮಹೇಂದ್ರನಾಥ ಸಾಲೆತ್ತೂರು ಕೃತಿ ಪರಿಚಯ ಮಾಡಿದರು,ಆಕಾಶವಾಣಿ ನಿರೂಪಕರಾದ ಪ್ರವೀಣ್ ಅಮ್ಮೆಂಬಳ ಹಾಗೂ ಶ್ರೀಯುತ ಸೀತರಾಮ ಒಳಮೊಗರು,ಅಧ್ಯಕ್ಷರು ಕುಲಾಲ ಸಮಾಜ ಎಣ್ಮಕಜೆ ಪಂಚಾಯತ್ ಸಮಿತಿ,ಹಿರಿಯ ಸಾಹಿತಿ ಬಿ.ವಿ ಕುಲಮರ್ವ

ಮಂಗಳೂರಿನಿಂದ ಬೆಂಗಳೂರಿಗೆ ಭಾವೈಕ್ಯತಾ ಜಾಥ

ಮೂಡುಬಿದಿರೆ: ಬಿ.ಜೆ.ಪಿ ಶಾಸಕರು, ಸಚಿವರುಗಳಿಗೆ ಈ ದೇಶದ, ರಾಜ್ಯದ, ಜಿಲ್ಲೆಯ ಮೂಲಭೂತ ಸಮಸ್ಯೆಗಳಾದ ಬೆಲೆ ಏರಿಕೆಯನ್ನು ತಡೆಯಲಾಗುತ್ತಿಲ್ಲ, ಕೋಟ್ಯಾಂತರ ರೂಪಾಯಿ ಕಾಮಗಾರಿ, ಭ್ರಷ್ಟಚಾರಗಳನ್ನು ಮಾಡುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸಲಾಗದೇ ಜನರ ನಡುವೆ ಭಾವನಾತ್ಮಕ ವಿಷಯಗಳಾದ ಲವ್ ಜಿಹಾದ್, ಗೋಹತ್ಯೆಯಂತಹ ವಿಷ ಬೀಜವನ್ನು ಬಿತ್ತುವ ಕೆಲಸ ಸ ಮಾಡುತ್ತಿದ್ದಾರೆಂದು ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಕಿಡಿಕಾರಿದರು. ಅವರು ಜನಾಂದೋಲನಾಗಳ

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕøತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023”

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಮಹಾವಿದ್ಯಾಲಯ ಹಾಗೂ ಲಲಿತಸಂಘ ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಸ್ಕ್ರತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023” ನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮಲ್ಲಿರುವ ಸಾಮರ್ಥ್ಯವನ್ನು ಇನ್ನೂ ಉತ್ತಮ ಪಡಿಸಲು ಇರುವಂತಹ ಅವಕಾಶವೇ ಸ್ಪರ್ಧೆ. ಕೇವಲ ಸ್ಪರ್ಧಿಸಿ ಬಹುಮಾನ ಪಡೆಯುವುದೊಂದೇ ಸ್ಪರ್ಧೆಗಳ ಉದ್ದೇಶವಾಗಿರಬಾರದು ಎಂದ ಅವರು

ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನ : ಜ.25ರಂದು ಕಾಲಮಿತಿ ಯಕ್ಷಗಾನ ಬಯಲಾಟ ಪ್ರದರ್ಶನ

ಬೈಂದೂರಿನ ಬಾಳಿಕೆರಿ ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನದಲ್ಲಿ ಹಾಲುಹಬ್ಬದ ಪ್ರಯುಕ್ತ ದಿ.ಅಕ್ಕಯ್ಯ ಶೆಡ್ತಿ ಮಕ್ಕಳು ಸೊಸೆ, ಮೊಮ್ಮಕ್ಕಳು ಜನ್ನಾಲ್ ಗೋಳಿಮನೆ ಕಬೈಲ್ಮನೆ ಇವರ ವತಿಯಿಂದ ಜನವರಿ 25ರಂದು ಕಾಲಮಿತಿ ಯಕ್ಷಗಾನ ಬೈಲಾಟ ನಡೆಯಲಿದೆ. ರಾತ್ರಿ 7.30ರಿಂದ ಬೆಂಕಿನಾಥೇಶ್ವರ ದಶಾವತರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಬಾಳ ಕಳವಾರು ಮಂಗಳೂರು ಇವರಿಂದ ಯಕ್ಷಗಾನ ಬಯಲಾಟ ದೈವ ಭಕ್ತಿ ಸಾರುವ ಸೂಪರ್ ಹಿಟ್ ಕಥಾನಕ ಸತ್ಯದ ಸ್ವಾಮಿ ಕೊರಗಜ್ಜ

ಬೈಂದೂರಿನ ವತ್ತಿನಣಿ ಅರಣ್ಯ ಪ್ರದೇಶದಲ್ಲಿ ಪ್ಲಾಂಟೇಶನ್‍ಗೆ ಬೆಂಕಿ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನಣಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಅರಣ್ಯ ಇಲಾಖೆ ಗೆ ಸಂಬಂಧಿಸಿದ ಪ್ಲಾಂಟೇಶನಿಗೆ ಬೆಂಕಿ ತಗುಲಿದ್ದು, ಧಗ ಧಗನೆ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.

ಏಷ್ಯಾದ ಅತಿದೊಡ್ಡ ಕಲಾ ಸಂಭ್ರಮ, ಬಾಂಗ್ಲಾದೇಶದ 19ನೇ ಏಷ್ಯಾನ್ ಆರ್ಟ್ ಬಿಯೆನ್ನಲ್

ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್‍ಗೆ ಮಂಗಳೂರಿನ ಕಲಾವಿದ ಸಂತೋಷ್ ಅಂದ್ರಾದೆ ಆಯ್ಕೆಯಾಗಿದ್ದಾರೆ.ಈ ಏμÁ್ಯದ ಅತಿದೊಡ್ಡ ಕಲಾ ಸಂಭ್ರಮದ 19ನೇ ಆವೃತ್ತಿಯನ್ನು ಮೂಲತಃ 2020ಕ್ಕೆ ನಿಗದಿಪಡಿಸಲಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದನ್ನು ಬಾಂಗ್ಲಾದೇಶ ಸಾಂಸ್ಕøತಿಕ ವ್ಯವಹಾರಗಳ

ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ನಿಧನ

ಕನ್ನಡ ರಂಗಭೂಮಿಯ ಖ್ಯಾತ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಹಾವೇರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಗೋಪಾಲಕೃಷ್ಣ ನಾಯರಿಯವರು ಸನ್ಮಾನಗೊಳ್ಳಬೇಕಾಗಿತ್ತು. ಆದರೆ ವಿಧಿವಶರಾಗಿದ್ದಾರೆ. ಉಡುಪಿಯ ಸಾಲಿಗ್ರಾಮದ ಕಾರ್ಕಡ ನಿವಾಸಿಯಾಗಿರುವ ಗೋಪಾಲಕೃಷ್ಣ ನಾಯರಿಯವರು ಅನಾರೋಗ್ಯದಿಂದ ಮಂಗಳೂರಿನ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ

ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧೆ

ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಾತ್ಯಾತೀತ ಜನತಾ ದಳದ ದಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎಲ್ಲ

ಕಡಬದ ಹಳೆನೇರಂಕಿ ಗ್ರಾಮದ ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಜಾತ್ರೋತ್ಸವ

ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಪ್ರಯುಕ್ತ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆ ಹಳೆನೇರಂಕಿ ಪೇಟೆಯಿಂದ ಚೆಂಡೆ, ವಾದ್ಯದೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ದೈವಸ್ಥಾನದ ಸನ್ನಿಧಿಗೆ ಆಗಮಿಸಿತು. ಗ್ರಾಮಸ್ಥರು ಅಡಿಕೆ, ತೆಂಗು, ಸಿಯಾಳ, ಹಿಂಗಾರ, ಬಾಳೆಗೊನೆ ಸೇರಿದಂತೆ ವಿವಿಧ ತರಕಾರಿ