Home Blog Left SidebarPage 662

ಮಾನವೀಯತೆ ಮಾನವನ ಮೊದಲ ಧರ್ಮವಾಗಬೇಕು – ಯಡಪಡಿತ್ತಾಯ

ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ

ಎಸ್.ಡಿ.ಎಂ ಕಾಲೇಜಿನಲ್ಲಿ ‘ಜಲ್ಲಿ ಕಲ್ಲುಗಳು’ ಕವನ ಸಂಕಲನ ಬಿಡುಗಡೆ

ಪ್ರತಿಭಾನ್ವಿತ ಬರಹಗಾರರು ತಮ್ಮ ವಿಶಿಷ್ಟ ದೃಷ್ಟಿಕೋನಗಳಿಂದ ಸಮಾಜವನ್ನು ಭಿನ್ನವಾಗಿ ಗ್ರಹಿಸುವ ಮಾದರಿಗಳನ್ನು ಕೊಡುಗೆಗಳನ್ನಾಗಿ ನೀಡುತ್ತಾರೆ ಎಂದು ಸೋನಿಯಾ ವರ್ಮಾ ಅಭಿಪ್ರಾಯಪಟ್ಟರು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಆಯೋಜಿಸಲಾಗಿದ್ದ ಸದಾನಂದ.ಬಿ ಮುಂಡಾಜೆಯವರÀ ‘ಜಲ್ಲಿ ಕಲ್ಲುಗಳು’ ಕವನ ಸಂಕಲನ ಬಿಡುಗಡೆ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜಲೀಲ್ ಹತ್ಯೆ ಖಂಡಿಸಿ ಕರ್ನಾಟಕ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮನವಿ : ನಾಳೆ ಧರಣಿ

ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳನ್ನ ಮಟ್ಟ ಹಾಕಬೇಕು. ಜೊತೆಗೆ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು

ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ :3 ಪ್ರಮುಖ ಆರೋಪಿಗಳ ಬಂಧನ

ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ರವಿವಾರ ರಾತ್ರಿ

ಕಾಟಿಪಳ್ಳ ಜಲೀಲ್ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ, ಪೊಲೀಸರ ಕೈಗಳನ್ನು ಸರಕಾರ ಕಟ್ಟಿಹಾಕಿದೆ : ಡಿವೈಎಫ್ಐ

ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ದುಂಡಾವರ್ತನೆಯ ಭಾಗವಾಗಿಯೆ ಕಾಟಿಪಳ್ಳ ದಲ್ಲಿ ಜಲೀಲ್ ಎಂಬ ಅಮಾಯಕ ಅಂಗಡಿ ವ್ಯಾಪಾರಿಯ ಕೊಲೆಯಾಗಿದೆ. ಈ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ ಎಂದು ಡಿವೈಎಫ್ಐ ರಾಜ್ಯ ಸಮಿತಿ ಆರೋಪಿಸಿದೆ. ಕಳೆದ ಒಂದು ವರ್ಷದ

ಮೂಡಬಿದರೆ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಸಿಎಂ ಬೊಮ್ಮಯಿ ಭೇಟಿ

ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಐದನೇ ದಿನ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಬಾಗವಹಿಸಿದರು ಬಳಿಕ ಮಾತನಾಡಿದ ಅವರು ಮೂಡುಬಿದಿರೆ: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ. ಇದು ಮಗುವು ಉತ್ತಮ ಸಾಧಕನಾಗಲು ಎಡೆಮಾಡಿಕೊಡುತ್ತದೆ.ಭಾರತದ ಭವಿಷ್ಯ ಸಂಸ್ಕ್ರತಿಯ ಉಳಿವಿಕೆಯ ಮೇಲೆ ನಿರ್ಧರಿತವಾಗಿದೆ. ಸೌಟ್ಸ್- ಗೈಡ್ಸ್ ಸಂಸ್ಥೆ ಸದಾ ಸಂಸ್ಕೃತಿಯ ಉಳಿವಿಗೆ

ವಿದೇಶಗಳಲ್ಲಿಯೂ ಕಂಬಳ ನಡೆಯುವ ದಿನಗಳು ಬರಲಿದೆ – ಬೊಮ್ಮಯಿ

ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ 20 ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಬ್ಬಯಿ ಯವರು ಭಾಗವಹಿಸಿ ಸುಶಾಸನ ದಿನಾಚರಣೆಯ ಅಂಗವಾಗಿ ವಾಜಿಪೇಯಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಬಿಂಬಿಸುವ ಕಂಬಳವು ಕ್ರೀಡೆ ಮಾತ್ರ ಅಲ್ಲ ಅದು

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್. ಮಿಜಾರು, ದ. ಕ. : ಆರ್ಥಿಕ ನೆರವು – ಚೆಕ್ ಹಸ್ತಾಂತರ

ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಯಾಗಿರುವ ವೇದಾವತಿ ಇವರಿಗೆ ತಾರೇಮಾರ್ ಎಂಬಲ್ಲಿ ರಿಕ್ಷಾ ಅಪಘಾತವಾಗಿದ್ದು ಸೊಂಟಕ್ಕೆ ತ್ರೀವವಾದ ಪೆಟ್ಟಾಗಿದ್ದು ನಡೆದಾಡಲು ಆಗದೆ ಮಲಗಿದ್ದಲ್ಲಿದ್ದಾರೆ. ಬಡಕುಟುಂಬವಾಗಿರುವುದರಿಂದ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ 5 ಲಕ್ಷದ ಅವಶ್ಯಕತೆಯಿದ್ದು ಅವರ ಮನವಿ ನಮಗೆ ಬಂದಿದ್ದು, ಅವರ ಮನವಿಗೆ ಸ್ಪಂದಿಸಿದ ನಮ್ಮ ತಂಡ 20,000/- ಚೆಕ್ ನ್ನು ಹಾಗೂಮಂಗಳೂರು ತಾಲೂಕಿನ ಗುರುಪುರ ಕಿನ್ನಿಮಜಲು

ಜೈನರಪವಿತ್ರ ಸ್ಥಳ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣ ಮಾಡದಂತೆ ಪ್ರಧಾನ ಮಂತ್ರಿಯವರಿಗೆ ಅಂತರ್ದೇಶೀಯ ಪತ್ರ ಬರೆಯುವ ಕಾರ್ಯಕ್ರಮ

ಜೈನರಿಗೆ ಅತ್ಯಂತ ಪವಿತ್ರ ಸ್ಥಳವಾದ ಸಮ್ಮೇದ ಶಿಖರ್ಜಿಯನ್ನು ಜಾರ್ಖಂಡ್ ರಾಜ್ಯ ಸರಕಾರ ಪವಾಸಿ ತಾಣ ಮಾಡಲು ಆದೇಶಿಸಿದ್ದು,ಇದು ಜೈನ ಪಾವಿತ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಿರುವುದನ್ನ ಖಂಡಿಸಿ, ಡಿಸೆಂಬರ್ 28ರಂದು ಮೂಡಬಿದ್ರೆಯಲ್ಲಿ ಹಕ್ಕೋತ್ತಾಯ ಚಳುವಳಿಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಜೈನ ಸಮುದಾಯದ ಮುಖಂಡರಾದ ಕೆ.ಅಭಯಚಂದ್ರ ಜೈನ್ ಹೇಳಿದ್ದಾರೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು: ಕುಂಬಾರ ಸಂಘದ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹೋರಾಟ ಮಾಡುತ್ತಿರುವ ಬಿ.ಎಸ್. ಬದ್ರಿ ಪ್ರಸಾದ್ ಎಂಬುವರ ಮೇಲೆ ಕುಂಬಾರ ಸಂಘದ ಕೆಲವು ಆಡಳಿತ ಮಂಡಳಿಯ ಪಟ್ಟಭದ್ರರು ಎರಡು ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. 48 ಗಂಟೆಗಳಲ್ಲಿ ಹಲ್ಲೆಕೋರರನ್ನು ಬಂಧನವಾಗದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಉಗ್ರ ಪ್ರತಿಭನೆ ನಡೆಸುವುದಾಗಿ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.