ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮಾಹೆಯ ಉಪ ಕುಲಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ
ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್
ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ ಸ್ವಾಗತಿಸಿದ್ದಾರೆ. ಮಂಗಳೂರು ರಾಜ್ಯದ ಎರಡನೇ ದೊಡ್ಡ ನಗರವಾಗಿದ್ದು ಹೀಗಾಗಿ ಬೆಂಗಳೂರು ಬಳಿಕ ಮಂಗಳೂರಿನಲ್ಲಿ
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು
ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ ಕಾರ್ಯಾಚರಣೆ ನಡೆಸಿ ಭಾರೀಯ ಮೀನುಗಾರರನ್ನು ಬಂಧಿಸಿದೆ. ಬಂಧಿತರನ್ನು ಕಂಕಸಂತುರೈ ಬಂದರಿಗೆ ಕರೆ
ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ ವಿಜ್ಞಾನ
ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು ಎಂದು ಖ್ಯಾತ ಜಾನಪದ ವಿದ್ವಾಂಸಕರೂ, ಪಗತಿಪರ ಚಿಂತಕರೂ ಆದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ ಪಟ್ಟರು.ಅವರು ಮಂಗಳೂರಿನ ವಾಮಂಜೂರು ಜಂಕ್ಷನ್ನಲ್ಲಿ ಆದಿವಾಸಿ ಕೊರಗ ಕುಟುಂಬಗಳಿಗೆ 2018ರಲ್ಲಿ ಮಂಜೂರಾತಿ ಆದ 33
ಮೂಡುಬಿದಿರೆ: ಭಯೋತ್ಪಾದನೆ ಹಾಗೂ ಲವ್ ಜಿಹಾದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ – ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದೇಶಾದ್ಯಂತ ಬಾಂಬನ್ನು ಸ್ಫೋಟಿಸಿ ಸಮಾಜದಲ್ಲಿ ಭಯವನ್ನು ನಿರ್ಮಿಸುವ ಕೆಲಸವನ್ನು ಉಗ್ರಗಾಮಿಗಳು ಮಾಡುತ್ತಿದ್ದಾರೆ. ಇಂದು ಭಯೋತ್ಪಾದನೆ ಎಂಬುದು ಕರಾವಳಿಗೆ
ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವವು ಸಂಭ್ರಮದಲ್ಲಿ ನಡೆಯಲಿರುವುದು. ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ . ಹಲವಾರು ವರ್ಷಗಳಿಂದ ಕಂಬಳವನ್ನು ಉಳಿಸಿ ಬೆಳೆಸಿಕೊಂಡು ಬಂದಿರುವ ವೆಂಕಟರಮಣ ಗಾಣಿಗ ನಾವುಂದ ಅವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ಸಿಕ್ಕಂತಾಗುತ್ತದೆ.ಈ ಬಾರಿ ಸೆನ್ಸಾರ್ ಮೂಲಕ ಕೋಣದ




























