ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು
ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ಇಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಮುಂತಾದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿ
ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ ಬಂದ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಅಶ್ವತ್ಥನಾರಾಯಣ, ಶಾಸಕ ವೇದವ್ಯಾಸ ಕಾಮತ್, ರಾಜೇಶ್
‘ಕಾಂತಾರ’ ಕನ್ನಡದಲ್ಲಿ ಬಿಡುಗಡೆಯಾಗಿ 50 ದಿನ ಪೂರ್ಣಗೊಂಡಿದೆ. ‘ಕಾಂತಾರ’ ಚಿತ್ರದ ಒಟ್ಟಾರೆ ಮೇಕಿಂಗ್, ದಕ್ಷಿಣ ಕನ್ನಡ ಸೊಗಡು, ಕಂಬಳ ಮತ್ತು ಪ್ರಮುಖವಾಗಿ ಭೂತ ಕೋಲ ವಿಷಯ ಜನರಿಗೆ ಇಷ್ಟವಾಗಿದೆ. ಜೊತೆಗೆ ನಿರ್ದೇಶಕ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ ಅಭಿನಯವನ್ನು ಅಭಿಮಾನಿಗಳು ಮೆಚ್ಚಿಕೊಂಡರು. ‘ಕಾಂತಾರ’ ಚಿತ್ರ ಕನ್ನಡದಲ್ಲಿ ರಿಲೀಸ್ ಆದ ಬಳಿಕ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗತೊಡಗಿತು. ಬಳಿಕ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೂ ಡಬ್ ಆಗಿ
ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ. ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್ನಲ್ಲಿ ಜನಿಸಿದರು. ಇಂದಿರಾ ಗಾಂಧಿ (Indira Gandhi) ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ನಾಯಕಿಯಾಗಿದ್ದರು. ಇಂದಿರಾ ಗಾಂಧಿಯವರು ತಮ್ಮ ತಂದೆ ಜವಾಹರಲಾಲ್ ನೆಹರು
ಮಂಗಳೂರು : ಬಹುಜನ ಸಮಾಜ ಪಕ್ಷ( ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದಾಸಪ್ಪ ಎಡಪದವು (63)ಅವರು ಇಂದು ನಿಧನರಾದರು.ಇಂದು ಮುಂಜಾನೆ ಗುರುಪುರದ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ದಾಸಪ್ಪ ಅವರು ನಿಧನರಾದರು.ಗುರುಪುರ ದಲಿತ ಅಭಿವೃದ್ಧಿ ಸಮಿತಿಯ ಸ್ಥಾಪಕರಾಗಿದ್ದ ದಾಸಪ್ಪ ಅವರು , ಭೌದ್ಧ ಧರ್ಮದ ಅನುಯಾಯಿಯಾಗಿದ್ದರು. ಬಹುಜನ ಸಮಾಜ ಸಂಘಟನೆಯ ಸಲುವಾಗಿ ರಾಜ್ಯವ್ಯಾಪಿಯಾಗಿ ದಾಸಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಹಾಗೂ ನಾಲ್ವರು
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲೆಗೆ ಪ್ರವಾಸವನ್ನು ಕೈಗೊಂಡು ಇಂದು ಶುಕ್ರವಾರದಂದು ಉಡುಪಿಗೆ ಆಗಮಿಸಿದ್ದು, ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಣಿಪಾಲದ ಮಾಹೆ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸುತ್ತಾ, ತಮ್ಮ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡರು. ಮಾಹೆ ಸಂಸ್ಥೆ ಶೈಕ್ಷಣಿಕ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ
ಮಂಗಳೂರಿನ ಭಾವುಟ ಗುಡ್ಡೆಯಲ್ಲಿ ನಿರ್ಮಾಣವಾಗಿರುವ ಸ್ವಾತಂತ್ಯಯ ಹೋರಾಟಗಾರ ಸಮರ ವಿರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬ ತಾಲೂಕಿನಿಂದ 15,000 ಮಿಕ್ಕಿಜನ ಸುಮಾರು ನೂರಕ್ಕಿಂತ ಹೆಚ್ಚು ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಹೇಳಿದರು. ಅವರು ಕಡಬ ಗೌಡ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಪಡುಬಿದ್ರಿ: ಸುರತ್ಕಲ್ ಟೋಲ್ ಪ್ಲಾಜಾದಲ್ಲಿ ಪಡೆಯುತ್ತಿದ್ದ ಟೋಲನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲಿನ ಗೊಳಿಸಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂಬುದಾಗಿ ಟೋಲ್ ಹೋರಾಟ ಸಮಿತಿಯ ಪ್ರಮುಖರೂ, ದಲಿತ ಮುಖಂಡರು ಆದ ಶೇಖರ್ ಹೆಜಮಾಡಿ ಎಚ್ಚರಿಸಿದ್ದಾರೆ. ಹೆಜಮಾಡಿ ಟೋಲ್ ಪ್ಲಾಜಾ ನಿರ್ಮಾಣದವರಗೆ ಮಾತ್ರ ಸುರತ್ಕಲ್ ಟೋಲ್ ಎಂಬುದಾಗಿ ತಾತ್ಕಾಲಿಕ ನೆಲೆಯಲ್ಲಿ ನಿರ್ಮಾಣಗೊಂಡಿದ್ದ ಸುರತ್ಕಲ್ ಟೋಲನ್ನು ಇದೀಗ ಸಂಸದರು ಸಹಿತ ಕೆಲ
ಸುರತ್ಕಲ್ ಟೋಲ್ ತೆರವಿಗೆ ಕೇಂದ್ರದಿಂದ ತಾಂತ್ರಿಕ ಅಂಶಗಳು ಪೂರ್ಣಗೊಂಡಿದ್ದು, 15 ದಿನದೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಅಧಿಕೃತ ನೋಟಿಫೀಕೇಶನ್ ಆಗಲಿದೆ. ಈ ಮೂಲಕ ಶೀಘ್ರದಲ್ಲೇ ಟೋಲ್ ಸಂಗ್ರಹ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಡಾ| ವೈ.ಭರತ್ ಶೆಟ್ಟಿ ಹೇಳಿದ್ದಾರೆ.ವಾಓ01: ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 60ಕಿ.ಮೀ ವ್ಯಾಪ್ತಿಯೊಳಗೆ ಎರಡು ಟೋಲ್ಗಳು ಅಳವಡಿಕೆಗೆ



























