Home Blog Left SidebarPage 706

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನವೆಂಬರ್ ೧೪ ರಂದು ಆಚರಿಸಲಾಗುವ ವಿಶ್ವ ಮಧುಮೇಹ ದಿನದ ಅಂಗವಾಗಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸಿ

ಪುತ್ತೂರಿನ: ಬೈಕ್ ಸ್ಕೂಟರ್ ಮಧ್ಯೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಕ್ಲಬ್ ಪ್ರೀಮಿಯಮ್ ಬಟ್ಟೆ ಅಂಗಡಿಯ ಸಿಬ್ಬಂದಿ ನೌಷದ್ (20) ಮೃತಪಟ್ಟವರು. ಇವರು ಪುತ್ತೂರು ತಾಲೂಕು ಅರ್ಯಾಪು ಗ್ರಾಮದ ಸಂಪ್ಯದ ನಿವಾಸಿ ಅಬ್ದುಲ್ ಅಝೀಜ್ ಎಂಬವರ ಪುತ್ರ. ನೌಷದ್ ಅಕ್ಟಿವಾ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ವಿಷಯ ತಿಳಿದ ಮೃತನ ಸ್ನೇಹಿತರು,

ಕೆಎಂಸಿ ಆಸ್ಪತ್ರೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ

ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಮಂಗಳೂರಿನ ಕೆಎಂಸಿ ಆಸ್ಪತ್ರೆ ವತಿಯಿಂದ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವು ನಡೆಯಿತು. ನಗರದ ಟಾಗೋರ್ ಪಾರ್ಕ್‌ನಲ್ಲಿರುವ ಲೇಡಿಸ್ ಕ್ಲಬ್‌ನಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಯಿತು. ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಹಿರಿಯ ವೈದ್ಯ ತಜ್ಷರ ತಂಡದೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪರಿಣತರ ವೈದ್ಯರ ಸಮಿತಿಯಲ್ಲಿ ನಿರ್ನಾಳಗ್ರಂಥಿ ಶಾಸ್ತ್ರದ ಸಲಹಾ ತಜ್ಞರಾದ ಡಾ. ಶ್ರೀನಾಥ್ ಪ್ರತಾಪ್ ಶೆಟ್ಟಿ ಅವರು

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಅಡಚಣೆಯಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮ

ಬಂಡೀಪುರದ ಬಫರ್ ವಲಯದಲ್ಲಿ ಹುಲಿಗಳ ಉಪಟಳ: ಹುಲಿ ಪತ್ತೆಗೆ ಕ್ಯಾಮೆರಾ ಅಳವಡಿಕೆ

ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ತೆರಕಣಾಂಬಿ ಸೆಕ್ಷನ್ 4ರ ಕಾಡಂಚಿನ ಗ್ರಾಮಗಳ ಸರಹದ್ದಿನ ದೇಪಾಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಉಪಟಳ ನೀಡುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿದೆ ಎಂದು ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳ ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಧಿಕಾರಿ ಮತ್ತು ನಿರ್ದೇಶಕರಾದ ಪಿ.ರಮೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಮುಖ್ಯ

ನಿಟ್ಟೆ ಕ್ಷೇಮದಲ್ಲಿ ಅಂತಾರಾಷ್ಟ್ರೀಯ ಇಥೋಸ್ -5.0 ಸಮ್ಮೇಳನಕ್ಕೆ ಚಾಲನೆ

ಉಳ್ಳಾಲ:  ಮಾನವೀಕರಣದ ಸಂಕೇತದಲ್ಲಿ ಎಲ್ಲರೂ  ಬದುಕಬೇಕಿದೆ. ಸಹಿಷ್ಣುತೆ, ಗೌರವ ಮತ್ತು  ವಿನಾಯಿತಿ ನಾಗರೀಕತೆಯ ಲಕ್ಷಣಗಳಾಗಿರಬೇಕು. ವಿಶ್ವ ನೀತಿಶಾಸ್ತ್ರ, ನೈತಿಕತೆ ಹಾಗೂ ಮೌಲ್ಯಗಳನ್ನು ಒಳಗೊಂಡಿರುವುದರಿಂದ ಮನುಷ್ಯ ಎಲ್ಲಿಯೂ ಬದುಕಲು ಸಾಧ್ಯವುಳ್ಳ ವಾತಾವರಣವಿದೆ. ಇಲ್ಲವಾದಲ್ಲಿ ವಿಶ್ವವೇ ಭಯಾನಕವಾಗುತಿತ್ತು ಎಂದು  ಡಾ.ಬಿ.ಸಿ.ರಾಯ್ ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ.ವೇದಪ್ರಕಾಶ್ ಮಿಷ್ರಾ  ಅಭಿಪ್ರಾಯಪಟ್ಟರು. ಅವರು ನಿಟ್ಟೆ

ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕೀರಿಟ ವಿಜೇತೆ ಶ್ವೇತಾ ಮೌರ್ಯ

ಬೆಂಗಳೂರು ಮೂಲದ ಮೋಡೆಲ್ ಶ್ವೇತಾ ಮೌರ್ಯ ಅವರು ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ಮಿಸೆಸ್ ವರ್ಲ್ಡ್ ವೈಡ್ 2022 ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕಿರೀಟವನ್ನು ಗೆದ್ದುಕೊಂಡಿದ್ದಾರೆ. ಸುಮಾರು 37ದೇಶಗಳ ಸ್ಪರ್ಧಿಗಳು ಈ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಶ್ವೇತಾ ಅವರು ಕರ್ನಾಟಕದ ಹಾಗೂ ಭಾರತದ ಅನೇಕ ಜನಪರ ಕಾಳಜಿ ಹಾಗೂ ಪರಿಸರ ಕಾಳಜಿಯ ಮ್ಯಾರಥಾನ್‌ಗಳ ಬ್ರಾಂಡ್ ಅಂಬಾಸಿಡರ್ ಆಗಿ

ಮಂಗಳೂರು : ಬಲ್ಮಠ ಕೆ.ಟಿ.ಸಿ ಆವರಣದಲ್ಲಿ ಕಿಟ್ಟೆಲ್ ಪ್ರತಿಮೆ ಅನಾವರಣ

ಕಿಟ್ಟೆಲ್ ಅವರ ಕನ್ನಡ ಸಾಹಿತ್ಯದ ಸಮಗ್ರ ಗ್ರಂಥ ಪ್ರಕಟಿಸಲು ಒತ್ತಾಯಕನ್ನಡದ ಪ್ರಥಮ ಶಬ್ದಕೋಶವನ್ನು ರೂಪಿಸಿದ ರೆವರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ಪ್ರತಿಮೆಯನ್ನು ಮಂಗಳೂರಿನ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿ ಶನಿವಾರದಂದು ಕಿಟೆಲ್ ಅವರ ಮರಿಮಗಳು ಜರ್ಮನಿಯ ಅಲ್ಮುಥ್ ಬಾರ್ಬರಾ ಮೈಯರ್ ಹಾಗೂ ಕಿಟ್ಟೆಲ್ ಅವರ ಮರಿ ಮರಿ ಮಗ ಈವ್ ಪ್ಯಾಟ್ರಿಕ್ ಮೈಯರ್ ಅವರು ಅವರು ಅನಾವರಣಗೊಳಿಸಿದರು. ನೂರ ಐವತ್ತು ವರ್ಷಗಳ ಹಿಂದೆ ಅನೇಕ ಕನ್ನಡ ಕೃತಿಗಳ ರಚನೆ , ಗ್ರಂಥ

ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಸೂರು

ಪುತ್ತೂರು:- ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕುಟುಂಬದವರಿಗೆ ದ.ಕ ಹಾಗೂ ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದು ಇದೀಗ ಇದಕ್ಕೆ ಅವಕಾಶ ಇಲ್ಲದ ನಿಟ್ಟಿನಲ್ಲಿ ಇದೇ ಹಣದಿಂದ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ದ.ಕ ಉಡುಪಿ ವಿಧಾನಸಭಾ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು

ಪಡುಪೆರಾರದಲ್ಲಿ ಶ್ರೀ ಶಾರದ ಜ್ಯೋತಿಷ್ಯಾಲಯದ ಶುಭಾರಂಭ

ಮಂಗಳೂರು: ಮಂಗಳೂರು ಮತ್ತು ಮುಂಬಯಿ ಮಹಾನಗರದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಂದ ತಮ್ಮನ್ನು ಗುರುತಿಸಿಕೊಂಡಿರುವ ಸಹೋದರರಾದ ಗುರುಶಂಕರ್ ಭಟ್ ಮತ್ರು ಶಂಕರ್‍ಗುರು ಭಟ್ ಅವರ ‘ಶ್ರೀ ಶಾರದ ಜ್ಯೋತಿಷ್ಯಾಲಯ’ದ ಉದ್ಘಾಟನಾ ಸಮಾರಂಭವು ಜರುಗಿತು. ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಕಜೆಪದವು ,ಪಡುಪೆರಾರದಲ್ಲಿ ಜರಗಿತು. ಪರಮ ಪೂಜ್ಯ