Home Blog Left SidebarPage 731

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಧರ್ಮಸ್ಥಳದ ಖಾವಂದರು

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ

ಧರ್ಮಸ್ಥಳ : ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ

ನಗರ ಮತ್ತು ಪಟ್ಟಣ ಪಂಚಾಯಿತಿ ನೌಕರರ ಮಾದರಿಯಲ್ಲಿ ಸೇವಾ ನಿಯಮಾವಳಿ ಹಾಗೂ ವೇತನ ಶ್ರೇಣಿ ನಿಗದಿಪಡಿಸಬೇಕು. ಜಿಲ್ಲಾ ಪಂಚಾಯತ್ ಅನುಮೋದನೆ ಬಾಕಿ ಇರುವ ಎಲ್ಲಾ ಪಂಚಾಯತ್ ನೌಕರರನ್ನು ವಯಸ್ಸಿನ ವಯೋಮಿತಿ ಹಾಗೂ ವಿದ್ಯಾರ್ಹತೆಯನ್ನು ಪರಿಗಣಿಸದೆ ಅವರ ಸೇವೆಯನ್ನು ಪರಿಗಣಿಸಿ ಒಂದು ಬಾರಿ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪಂಚಾಯತ್ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ

ನಾನೇ ನಾಗವಲ್ಲಿ, ಮೊನ್ನೆ ನೋಡಿದ್ದು ಕಾಂತಾರ ಪಾರ್ಟ್ 2 ಅಲ್ಲ 3″

ಸುರತ್ಕಲ್: “ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ” ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ ಹೇಳಿದರು. ಸುರತ್ಕಲ್ ಟೋಲ್ ವಿರೋಧಿ ಪ್ರತಿಭಟನೆ ಸಂದರ್ಭದ ತಮ್ಮ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾಗಳ ಟೈಟಲ್ ಕೊಟ್ಟು ಟ್ರೋಲ್ ಮಾಡಲಾಗುತ್ತಿದ್ದು ಈ ಕುರಿತು ಮಾತಾಡಿದ ಪ್ರತಿಭಾ ಅವರು, “ಟ್ರೋಲ್ ಒಳ್ಳೆಯದು,

ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ

ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ

ಉಪ್ಪಳ : ಶಾಲಾ ಚಪ್ಪರ ಕುಸಿತ : ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಮೂರು ದಿನಗಳ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ. ತಗಡು ಶೀಟ್‍ನ ಚಪ್ಪರ ದಿಢೀರನೆ ಕುಸಿದು ಬಿದ್ದಿದೆ. ಈ ಸಂದರ್ಭ 200 ಕ್ಕೂ ಅಧಿಕ ವಿದ್ಯಾರ್ಥಿಗಳು

ಪುತ್ತೂರು: ಅ.23ರಂದು ದೀಪಾವಳಿ ಸಂಭ್ರಮಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ ಕೊಟೇಚಾ ಸಭಾಭವನದಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ತಿಳಿಸಿದರು. ಶುಕ್ರವಾರ ಪುತ್ತೂರಿನ ಬಿಜೆಪಿ

ಶ್ರೀ ಅನಘ ಸುಝುಕಿ : ದೀಪಾವಳಿ ಪ್ರಯುಕ್ತ ವಿಶೇಷ ಆಫರ್

ಮಂಗಳೂರಿನ ಶರ್ಬತ್‍ಕಟ್ಟೆಯಲ್ಲಿರುವ ಶ್ರೀ ಅನಘ ಸುಝುಕಿಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಅನಘ ಸುಝುಕಿ ಶೋರೂಂನಲ್ಲಿ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಕಡಿಮೆ ಡೌನ್‍ಪೆಮೆಂಟ್, ಎಕ್ಸೇಂಜ್ ಬೋನಸ್, 5 ವರ್ಷಗಳ ಉಚಿತ ವಿಸ್ತರಿತ ವ್ಯಾರಂಟಿ, ಏಸಸರೀಸ್ ಆಫರ್, ಹೆಲ್ಮೆಟ್

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆ : ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್‍ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ

ಮಂಗಳೂರಿನ ಈಜುಪಟುವಿನಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ ಕೌಶಲ್ಯ ತೋರಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುಂಭಾಗಕ್ಕೆ ಒಂದೇ ಉಸಿರಿನಲ್ಲಿ 29 ಮುಂಭಾಗದ ತಿರುವು ಮಾಡಿದ್ದೇನೆ. ಇದನ್ನು ಇಂಡಿಯನ್ ಬುಕ್ ಆಫ್

ಬಂಟ್ವಾಳ ಮಣಿಹಳ್ಳದಲ್ಲಿ ಸರಣಿ ಅಪಘಾತ: ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಮೃತ್ಯು

ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಎರಡು ಕಾರು ಹಾಗೂ ಬಸ್‍ಗಳ ನಡುವೆ ಅಪಘಾತ ನಡೆದಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ವಗ್ಗದ ಮದ್ವ ಮನೆಯಿಂದ