ಬಂಟ್ವಾಳ: ಕಿಡ್ನಿ ಸಮಸ್ಯೆಯಲ್ಲಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20 ಸಾವಿರ ರೂ.ಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ಸರಪಾಡಿಯ ದೇವದಾಸ್ ನಾಯ್ಕ್ ಅವರಿಗೆ ಸಂಗ್ರಹಗೊಂಡದ್ದು ಬರೋಬ್ಬರಿ 57 ಸಾವಿರ ರೂ.ಅ.12ರಂದು ಅವರು ಮೊತ್ತವನ್ನು ಸರಪಾಡಿ
ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು Name jihad ಬರಹ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ನಲ್ಲಿ ನಡೆದಿದೆ. ಅ.11 ರಂದು ರಾತ್ರಿ ವೇಳೆ ಘಟನೆ ನಡೆದಿದ್ದು, ಅ12 ರಂದು ಮುಂಜಾನೆ ಅಂಗಡಿ ಮಾಲೀಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಈ ಬಗ್ಗೆ ಅಂಗಡಿ ಮಾಲೀಕ ಅಬ್ದುಲ್ ವಿಟ್ಲ ಠಾಣೆಗೆ ದೂರು ನೀಡಿದ್ದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಇಬ್ಬರು ಬರುತ್ತಿರುವುದು
ಉಳ್ಳಾಲ: ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿಯ ವಿವಿಧ ಇಲಾಖೆಗಳಿಗೆ ಸರಕಾರಿ ಕಟ್ಟಡಗಳನ್ನು ಒದಗಿಸುವ ಕುರಿತಾಗಿ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ನವೆಂಬರ್ ಮೊದಲ ವಾರದಲ್ಲಿ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ತಾಲೂಕಿನಾದ್ಯಂತ ಇರುವ ಸಮಸ್ಯೆಗಳ ಚರ್ಚೆ ಹಾಗೂ ಅದರ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ. ಅವರು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿಗಳ ಯೋಜನೆಯಲ್ಲಿ ಒಂದಾದ ಜಿಲ್ಲಾಧಿಕಾರಿಗಳ
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ ವ್ಯಕ್ತಿ.ಸ್ವೀಡನ್ ದೇಶದ ಪ್ರವಾಸಿಗ ಆಡಮ್ ರಕ್ಷಿಸಿದವರು. ಇಂದು ಮಧ್ಯಾಹ್ನದ ವೇಳೆ ಪ್ರವೀಣ್ ಅವರು ಸೋಮೇಶ್ವರ ಕಡಲ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಆಯಯತಪ್ಪಿ ಸಮುದ್ರಕ್ಕೆ
ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ
ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಈಶಾನ್ಯ ಭಾಗದಲ್ಲಿ ಗೋಚರಿಸುತ್ತದೆ. ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 25ರ ಪಾರ್ಶ್ವ ಸೂರ್ಯ ಗ್ರಹಣವು ಸಂಜೆ ಗಂಟೆ 5.08ಕ್ಕೆ ಪ್ರಾರಂಭವಾಗಿ 6.29ಕ್ಕೆ ಅಂತ್ಯವಾಗಲಿದ್ದು, ಸೂರ್ಯ ಗ್ರಹಣವನ್ನು
ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ತಿಳಿಸಿದರು. ಅವರು ಸುಳ್ಯದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕನಕಮಜಲು ಪ್ರಾ.ಕೃ. ಪ.ಸ.ಸಂಘವು
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜ್ಯೋತಿ (33) ಅವರು ಆತ್ಮಹತ್ಯೆ ಯತ್ನವೊಂದರಲ್ಲಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ. ಕೌಟುಂಬಿಕ ವಿವಾದದ ನಂತರದ ತೀವ್ರ ಹತಾಶೆಯಲ್ಲಿ ಅವರು ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತದೆ. ಪತಿ ಪತ್ನಿ ಇಬ್ಬರೂ ರಾಜಸ್ಥಾನದ ಭರತ್ ಪುರ ಜಿಲ್ಲೆಯವರು. “ಗಾಯಾಳುವನ್ನು ನಗರದ ಎ.ಜೆ ಆಸ್ಪತ್ರೆಗೆ ಸೇರಿಲಾಗಿದೆ. ಶಾಸ್ತ್ರಚಿಕಿತ್ಸೆ ನಡೆಯುತ್ತಿದೆ” ಎಂದು ಮಂಗಳೂರು ನಗರ
ಯಕ್ಷಗಾನವೆಂದರೆ ಕರಾವಳಿ ಬಾಗದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದ ಕಲೆ, ಇದೀಗ ಸಚಿವರೊಬ್ಬರು ಈ ಕರಾವಳಿಯ ಕಲೆಗೆ ಮನಸೋತು ತಾನೆ ವೇಷ ಧರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆರೋಗ್ಯ ಸಚಿವರಾದ ಡಾ.ಸುಧಾಕರ್ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಪರಿಶೀಲನೆಗೆ ಆಗಮಿಸಿದ್ದ ಅವರು ಬಳಿಕ ಅಧಿಕಾರಿಗಳ ಸಭೆ ನಡೆಸಿ ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ
ಮುಂಬೈ: ಮಲಾಡ್ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ




























