Home Blog Left SidebarPage 765

ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ನಡೆದ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ ಕಾರ್ಯಕ್ರಮ

ನವರಾತ್ರಿಯ ಅಂಗವಾಗಿ ವಿ4 ನ್ಯೂಸ್ ಉಡುಪಿ ವತಿಯಿಂದ ನಿಕ್ಸ್ ಪ್ಯೂರ್ ಸ್ಪೈಸಸ್ & ಮಸಾಲಾಸ್ ಅರ್ಪಿಸುವ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ, ಖ್ಯಾತ ಹಾಗೂ ಉದಯೋನ್ಮುಖ ಗಾಯಕರಿಂದ ಸಂಗೀತ ಗೋಷ್ಠಿ ಕಾರ್ಯಕ್ರಮವು ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತ್ತು.ಇದರ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ

ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗ್ರತಿ ಶಿಬಿರ

ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ(ರಿ)ದ ಆಶ್ರಯದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಮಂಗಳೂರು ನಗರ ಸಂಚಾರಿ ಪೋಲಿಸ್ ಇವರ ಸಹಯೋಗದೊಂದಿಗೆ ಶಾಲಾ ಮಕ್ಕಳ ವಾಹನ ಚಾಲಕರಿಗೆ ಜಾಗೃತಿ ಶಿಬಿರವು ಸಂಘದ ಅಧ್ಯಕ್ಷ ರಾದ ಮೋಹನ್ ಕುಮಾರ್ ಅತ್ತಾವರರವರ ಅಧ್ಯಕ್ಷತೆಯಲ್ಲಿ ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಶಿಬಿರದಲ್ಲಿ ಮಂಗಳೂರು ನಗರ ಸಹಾಯಕ ಪೋಲಿಸ್ ಅಯುಕ್ತರಾದ ಗೀತಾ.ಟಿ.ಕುಲಕರ್ಣಿಯವರು ಮಾತನಾಡುತ್ತಾ, ಸಮಾಜದಲ್ಲಿ ಚಾಲಕರ ಪಾತ್ರ

ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮುತಾಲಿಕ್

ದಿವಂಗತ ಪ್ರವೀಣ್ ನೆಟ್ಟಾರ್ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷರು ಪ್ರಮೋದ್ ಮುತಲಿಕ್ ಭೇಟಿ ನೀಡಿ, ಪ್ರವೀಣ್ ತಂದೆ ತಾಯಿ ಹಾಗೂ ಪ್ರವೀಣ್ ನೆಟ್ಟಾರ್ ಧರ್ಮಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರಕಾರವನ್ನು ಕಟುವಾಗಿ ಟೀಕಿಸಿ ಪ್ರವೀಣ್ ಕೊಂದ ಹಂತಕರಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.

ಮತಾಂತರ ನಿಷೇಧ ಕಾಯ್ದೆ ಜಾರಿ ಸ್ವಾಗತಾರ್ಹ : ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆ

ಈಗಾಗಲೇ ಸರಕಾರ ಎಲ್ಲಾ ಜಿಲ್ಲೆಗಳಲ್ಲಿ ಮತಾಂತರ ನಿಷೇಧ ಜ್ಯಾರಿಗೆ ತರುತ್ತಿರುವುದು ಸ್ವಾಗತಾರ್ಹವಾಗಿದ್ದು, ಸರಕಾರ ತಕ್ಷಣ ಮತಾಂತರ ಕಾಯ್ದೆ ಜ್ಯಾರಿಗೆ ತರಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು ಆರು ಸಾವಿರ ಅನಧೀಕೃತ ಚರ್ಚ್‍ಗಳಿದ್ದು, ಈ ಮೂಲಕ ಬುಡಕಟ್ಟು ಜನಾಂಗ, ದಲಿತರ ಮತಾಂತರ ಪ್ರಕ್ರಿಯೆಗಳು ನಡೆಯುತ್ತಿದೆ. ತಕ್ಷಣ ಈ

ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಬಂಧನ

ವಿಚಾರಕ್ಕೆ ಸಂಬಂಧಿಸಿ ನಾಲ್ಕು ತಿಂಗಳ ಹಿಂದೆ ಉಚ್ಚಿಲ ಸಮೀಪ ನಡೆದಿದ್ದ ಯುವಕನ ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಎಂಬಾನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಕಮೀಷನರ್ ಎನ್.ಶಶಿಕುಮಾರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈತನ ಮೇಲೆ ಮಂಗಳೂರು ಸೇರಿದಂತೆ ಹೊರರಾಜ್ಯದಲ್ಲೂ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ

ಬೈಂದೂರಿನ ನಾಗೂರಿನಲ್ಲಿ ತಾಳಮದ್ದಳೆ ಸಪ್ತಾಹ : ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಉದ್ಘಾಟನೆ

ಬೈಂದೂರು: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮವನ್ನು ಯಕ್ಷ ಪ್ರೇಮಿ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಕರಾವಳಿ ಭಾಗದ ಯಕ್ಷಗಾನ ತಾಳಮದ್ದಳೆ ಕಲಾವಿದರಿಗೆ ಸರಕಾರದಿಂದ ಇನ್ನು ಮುಂದೆ ಹೆಚ್ಚು ಹೆಚ್ಚು ಪೆÇ್ರೀತ್ಸಾಹ ಹಾಗೂ ಪ್ರಶಸ್ತಿ ನೀಡಬೇಕು

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ. : ಅಧ್ಯಕ್ಷರಾಗಿ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು – ಇದರ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ 2ನೇ ಬಾರಿಗೆ ಅವಿರೋಧವಾಗಿ ಆಯ್ಕೆ.

ನಗರದ ಉದ್ಯಾನವನಗಳ ಸುಸ್ಥಿತಿಗೆ ಮೊದಲ ಆದ್ಯತೆ : ಮನಪಾ ಮೇಯರ್ ಜಯಾನಂದ ಅಂಚನ್ ಹೇಳಿಕೆ

ಮಂಗಳೂರು: ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಇನ್ನರ್ ವೀಲ್ ಕ್ಲಬ್ ಮಂಗಳೂ ರು ನಾರ್ತ್ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಅವರು ಇಂದು ಮಂಗಳೂ ರು ಮಹಾನಗರ ಪಾಲಿಕೆ ಇಂದಿರಾ ಪ್ರಿಯ ದರ್ಶಿ ನಿ

ಕಸ ವಿಲೇವಾರಿ ಚಾಲಕರ ಸೇವೆಯನ್ನು ಟೆಂಡರ್‍ಗೆ ವಹಿಸದಂತೆ ಆಗ್ರಹ : ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಒತ್ತಾಯ

ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್‍ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣ ಗೌಡ, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ. ಅಶೋಕ್ ಹಾರನಹಳ್ಳಿ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಒಂದು ಕಾಲದಲ್ಲಿ ನಾನು