Home Blog Left SidebarPage 784

ಮುಸ್ಲಿಮರ ವಿರುದ್ಧ ದ್ವೇಷ ಹರಡುವಿಕೆ ತಡೆಗೆ ಏಕತೆ ಮಂತ್ರ : ಚಿಂತಕ ಪ್ರೊ. ಅಪೂರ್ವಾನಂದ ಅಭಿಪ್ರಾಯ

ಹಿಂದೂಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಅಭಿಯಾನ ದೇಶದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ಮಣಿಸಬೇಕಾದ ಐಕ್ಯತೆ ರೂಪಿಸುವ ಕಲೆಗಾರಿಕೆಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಚಿಂತಕ ದೆಹಲಿ ವಿಶ್ವವಿದ್ಯಾಲಯದ ಪ್ರೊ. ಅಪೂರ್ವಾನಂದ ಅಭಿಪ್ರಾಯಪಟ್ಟರು. ನಗರದ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣದಲ್ಲಿಂದು ಅವರು

ಶ್ರೀ ವೆಂಕಟರಮಣ ದೇವಳದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು . ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಮಹಾಮಂಗಳಾರತಿ ನೆರವೇರಿತು . ಈ ಸಂದರ್ಭದಲ್ಲಿ ದೇವಳದ ಆಡಳಿತ

ಪದವಿನಂಗಡಿಯಲ್ಲಿ ಪುನರ್ವಸು ಆಯುರ್ವೇದ ಕ್ಲಿನಿಕ್ : ಶಸ್ತ್ರಚಿಕಿತ್ಸೆ ಇಲ್ಲದೆ ಚಿಕಿತ್ಸೆ ಮತ್ತು ವಿವಿಧ ಸೌಲಭ್ಯಗಳು ಲಭ್ಯ

ಮಂಗಳೂರಿನ ಪದವಿನಗಂಡಿಯಲ್ಲಿರುವ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯು ವೈದ್ಯ ಶಾಲಾ ಔಷಧ ಮಳಿಗೆಯಲ್ಲಿ ಚಿಕಿತ್ಸೆಗಳು ಮತ್ತು ವಿವಿಧ ಸೌಲಭ್ಯಗಳು ಲಭ್ಯವಿದೆ.ಎಲ್ಲಾ ತರಹದ ಸೋಂಕು ರೋಗಗಳು, ಎಲ್ಲಾ ತರಹದ ಜ್ವರಗಗಳಿಗೆ ಆಸ್ಪತ್ರೆಯ ವಾಸವಿಲ್ಲದೆ ಚಿಕಿತ್ಸೆ ನೀಡುತ್ತಾರೆ. ಬೊಜ್ಜು, ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ಲಿವರ್ ಹಾಗೂ ಪಿತ್ತಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಜಾಂಡೀಸ್, ಸಿರೋಸಿಸ್, ಹೆಪಟೈಸಿಸ್, ಪಿತ್ತಕೋಶದ ಕಲ್ಲು

ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ

ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ. ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ ಅದೆಷ್ಟೋ ರೋಗಿಗಳ ಆರೈಕೆ ಮಾಡುವ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಶಾಖೆಗಳನ್ನು ಹೊಂದಿರುವ ದಾಸ್ ಸೇವಾ ಸಂಸ್ಥೆಯನ್ನು ಗ್ಲೋಬಲ್ ಸ್ಕೋಲರ್ ಫೌಂಡೇಷನ್ -2022ನೇ ಸಾಲಿನ ಉದ್ಯೋಗ ರತ್ನ ಪ್ರಶಸ್ತಿಯನ್ನು

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು, ದ.ಕ. ಸಂಗ್ರಹಿಸಿದ ಧನ ಸಹಾಯ ಹಸ್ತಾಂತರ

ಲಂಗ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮೂಡುಬಿದ್ರೆಯ ತೋಡಾರಿನ ಬೇಬಿ ಹಾಗೂ‌ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿ ಹರೀಶ್ ಕುಲಾಲ್ ಇವರ ಚಿಕಿತ್ಸೆಗೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಸಂಗ್ರಹಿಸಿದ ಧನ ಸಹಾಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪ್ಲಬೆಟ್ಟು ಒಕ್ಕೂಟದ ಸೇವಾ ಪ್ರತಿನಿಧಿ ಮಲ್ಲಿಕಾ ಶೆಟ್ಟಿ, ಚಂದ್ರಹಾಸ ಪೂಜಾರಿ ಕುಲತ್ತಕೋಡಿ ಕೃಷಿಕರು, ಪಧಾದಿಕಾರಿಗಳು ಹಾಗೂ ಸೇವಾಮಾಣಿಕ್ಯರ ಸಮ್ಮುಖದಲ್ಲಿ

ಶತ ದಿನೋತ್ಸವದ ಸಂಭ್ರಮದಲ್ಲಿ ರಾಜ್ ಸೌಂಡ್ಸ್ ಮತ್ತು ಲೈಟ್ಸ್

ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಇದರ ವತಿಯಿಂದ “ರಾಜ್ ಸೌಂಡ್ಸ್ ಮತ್ತು ಲ್ಯೆಟ್ಸ್” ತುಳು ಚಲನಚಿತ್ರದ ಶತದಿನೋತ್ಸವದ ಸಂಭ್ರಮ ವನ್ನು ಪಡುಬಿದ್ರಿ ಭಾರತ್ ಮಾಲ್ ಮುಂಭಾಗದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಪಡುಬಿದ್ರಿ ಪೇಟೆಯಿಂದ ಭಾರತ್ ಮಾಲ್ ವರಗೆ ಕಾಲ್ನಡಿಗೆ ಜಾಥ ನಡೆಯಿತು..ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷರಾದ ಗೀತಾ ಅರುಣ್ ಅಧ್ಯಕ್ಷತೆ ವಹಿಸಿದರು.. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ ಸಾಲ್ಯಾನ್,

ಬೆಳಪು ಅಂಬೇಡ್ಕರ್ ಭವನದ ಬಳಿ ಹೆಬ್ಬಾವು ಪ್ರತ್ಯಕ್ಷ

ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನೂ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.

ಬಸ್ ಬ್ರೇಕ್ ಫೈಲ್ ಆಗಿ ಕಾರಿಗೆ ಢಿಕ್ಕಿ : ಪವಾಡ ಸದೃಶ ಪಾರಾದ ಪ್ರಯಾಣಿಕರು

ಉಳ್ಳಾಲ: ಬ್ರೇಕ್ ಫೇಲ್ ಗೊಳಗಾದ ಬಸ್ಸು ಝೈಲೋ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಬಸ್ಸು ಚಾಲಕನ ಸಮಯ ಸಾಧನೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಬದುಕುಳಿದಿದ್ದಾರೆ.ಝೈಲೋ ಕಾರಿನಲ್ಲಿದ್ದ ಮಾಲೀಕ ಮುಡಿಪು ನಿವಾಸಿ ಮೊಹಮ್ಮದ್ ಮತ್ತು ಸಂಬಂಧಿ ಪ್ರಯಾಣಿಕ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾರು ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು

ಹಬ್ಬಗಳ ವಾತಾವರಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚನೆ : ಪುತ್ತೂರಿನಲ್ಲಿ ಪೊಲೀಸ್ ಪಥ ಸಂಚಲನ

ಪುತ್ತೂರು: ಇನ್ನು ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸಿದರು. ಪುತ್ತೂರು ದರ್ಬೆಯಿಂದ ಆರಂಭವಾದ ಪೊಲೀಸ್ ಪಥ ಸಂಚಲನ ಬೊಳುವಾರಿನಲ್ಲಿ ಸಮಾಪನಗೊಂಡಿತ್ತು. ಪುತ್ತೂರು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್

ಆ.30ರಂದು ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಕಾನ್ಫರೆನ್ಸ್

ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದ್ದು