Home Blog Left SidebarPage 790

ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ನಿರ್ಮಿಸಿದ್ದ ಆಧಾರ ಕಂಬಗಳಿಗೆ ತುಕ್ಕು

ಕಾರ್ಕಳದಲ್ಲಿ 2015ರಲ್ಲಿ ಜರುಗಿದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಪುರಸಭೆಯ ವತಿಯಿಂದ ಸ್ವಾಗತ ಕಮಾನು ಅಂಚೆ ಇಲಾಖೆಗೆ ಸೇರಿದ ನಿವೇಶನ ಇರಿಸಲಾಗಿದೆ. ಸುಮಾರು ಏಳು ವರ್ಷಗಳು ಕಳೆದರೂ ಕಬ್ಬಿಣದ ಆಧಾರ ಸ್ತಂಭಗಳು ತುಕ್ಕು ಹಿಡಿದು ಹೋಗಿದ್ದು, ತೆರಿಗೆ ಹಣ ಪೋಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಅಶ್ಪಕ್ ಅಹಮ್ಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ

ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ ಕೆಲಸವಾಗಬೇಕು : ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ

ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ

ಛಾಯಾಗ್ರಾಹಕರಲ್ಲಿ ಉತ್ತಮ ಕಲಾವಿದ ಅಡಕವಾಗಿದ್ದಾನೆ : ಪತ್ರಕರ್ತ ರಾಮಚಂದ್ರ ಆಚಾರ್ಯ

ಛಾಯಾಚಿತ್ರಗಾರರಿಗೆ ಕಪ್ಪು ಬಿಳುಪು ಯುಗದಲ್ಲಿದ್ದ ಕಷ್ಟ ಕಾರ್ಪಣ್ಯಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಲ್ಲ. ದಾಖಲೆಗಳನ್ನು ಚಿರಾಯ್ಯುವಾಗಿಸುವಲ್ಲಿ ಛಾಯಾಚಿತ್ರಗಾರರ ಪಾತ್ರ ಪ್ರಮುಖವಾಗಿದೆ ಛಾಯಾಚಿತ್ರಗಾರರಲ್ಲಿ ಉತ್ತಮ ಕಲಾವಿಧ ಅಡಕವಾಗಿದ್ದಾನೆ ಎಂಬುದುದಾಗಿ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯ ಹೇಳಿದ್ದಾರೆ. ಪಡುಬಿದ್ರಿಯ ಎಸ್ ಎಸ್ ಖಾಸಗಿ ಸಭಾಂಗಣದಲ್ಲಿ ವಿಶ್ವ ಛಾಯಾಚಿತ್ರಗಾರರ ದಿನಾಚರಣೆಯ ಅಂಗವಾಗಿ ಹಿರಿಯ ಛಾಯಾಚಿತ್ರಗಾರರಾದ ಬೆಳ್ಮಣ್ ವೆಂಕಟರಾಯ ಕಾಮತ್

ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿ ಈ ಘಟನೆ ಸಂಭವಿಸಿದೆ. ನಗರದ ಗುಂಡೇಟು ಬಿದ್ದ ವ್ಯಕ್ತಿ ಮುಸ್ತಾಕ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ

ಮಾಲಿನ್ಯಕಾರಕ ಕೈಗಾರಿಕೆಗಳ ಮೇಲೆ ಕ್ರಮ ಜರುಗಿಸದಿದ್ದಲ್ಲಿ‌ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬೀಗ ಜಡಿಯುತ್ತೇವೆ : ಮುನೀರ್ ಕಾಟಿಪಳ್ಳ

  ಪರಿಸರ ನಿಯಮಗಳನ್ನು ಎಗ್ಗಿಲ್ಲದೆ ಉಲ್ಲಂಘಿಸುತ್ತಿರುವ, ಸುತ್ತಲ ಗ್ರಾಮಗಳ ಜನರ ಬದುಕನ್ನು ನರಕ ಸದೃಶಗೊಳಿಸಿರುವ ಎಸ್ಇಝಡ್, ಅದಾ‌‌ನಿ ವಿಲ್ಮಾ, ರುಚಿಗೋಲ್ಡ್, ಯು  ಬಿ ಬಿಯರ್ ಸಹಿತ ಕೈಗಾರಿಕೆ ಘಟಕಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬೀಗ ಜಡಿಯಲಾಗುವುದು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಎಚ್ಚರಿಸಿದರು.  ಅವರು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ

ಪಡುಬಿದ್ರಿ: ತಡೆರಹಿತ ಬಸ್ಸುಗಳ ಪೈಪೋಟಿ, ಹೆದ್ದಾರಿ ಬ್ಲಾಕ್

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರೇಷ್ಮಾ ಹಾಗೂ ದುರ್ಗಾಂಬ ಹೆಸರಿನ ಖಾಸಗಿ ಬಸ್ ಗಳೆರಡು ರಸ್ತೆ ತಡೆಗೆ ಕಾರಣವಾದವುಗಳು. ಬಹಳಷ್ಟು ಹೊತ್ತು ರಸ್ತೆ ತಡೆಯಾಗುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಚಾಲಕ ನಿರ್ವಾಹಕರನ್ನು

ಬಂಟ್ವಾಳ : ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ , ಚಾಲಕರು ಎಚ್ಚರ ವಹಿಸುವಂತೆ ಮನವಿ

ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.ದ.ಕ. ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್‍ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ

ಉಡುಪಿ : ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ದೇಶದ ಗಡಿ

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಸೊರಬ ನಿವಾಸಿ

ನಟ ಅರ್ಜುನ್ ಕಾಪಿಕಾಡ್ ಹುಲಿ ಕುಣಿತಕ್ಕೆ ಮನಸೋತ ಪ್ರೇಕ್ಷಕರು

ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ