ಮೂಡುಬಿದಿರೆ:ತಾಲ್ಲೂಕಿನ ವಿವಿದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೈಟ್ ಎಂಜಿನಿಯರಿಂಗ್ ಕಾಲೇಜಿನ ಆವರಣಗೋಡೆ ಕುಸಿದು ಬಿದ್ದು ಮೂರು ವಾಹನಗಳಿಗೆ ಹಾನಿಯಾಗಿದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶ ನಡೆಯುತ್ತಿದ್ದು ಆವರಣಗೋಡೆಯ ಬದಿಯಲ್ಲಿ ಪೋಷಕರ ವಾಹನಗಳನ್ನು ನಿಲ್ಲಿಸಲಾಗಿತ್ತು.
ಕುಂದಾಪುರ: ಕಾಲಿನ ಶಸ್ತೃಚಿಕಿತ್ಸೆಗೊಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರೂ ಊರುಗೋಲಿನ ಸಹಾಯದಿಂದ ಮರವಂತೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು.ಪಕ್ಷದ ಮುಖಂಡರೊಂದಿಗೆ ಕಡಲ್ಕೊರೆತ ಪ್ರದೇಶ ಮರವಂತೆಗೆ ಭೇಟಿ ನೀಡಿದ ಅವರು, ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆಯಲ್ಲಿ ಮಾತನಾಡಿದ ಸ್ಥಳೀಯರು ಕಳೆದ ಹನ್ನೆರಡು ದಿನಗಳಿಗೂ ಅಧಿಕ
ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳಿಗೆ ಆದೇಶಿಸಿದರು. 11 ಇ ಅರ್ಜಿಗಳ ವಿಲೇವಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದವರು ಆ
ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ
ಬಂಟ್ವಾಳ: ಮಳೆಗಾಲ ಆರಂಭವಾದಾಗ ಅನೇಕ ಜಲಪಾತಗಳು ಮೈದುಂಬಿಕೊಂಡು ಹರಿಯಲಾಂಭಿಸುತ್ತವೆ. ದಟ್ಟ ಅರಣ್ಯಗಳ ಮಧ್ಯೆ ಅದೆಷ್ಟೋ ಸುಂದರವಾದ ಜಲಪಾತಗಳು ಇದ್ದರೂ ಹೊರ ಜಗತ್ತಿಗೆ ತಿಳಿಯದೇ ಅಜ್ಞಾತವಾಗಿಯೇ ಉಳಿಯುತ್ತವೆ. ಈ ಪೈಕಿ ತಾಲೂಕಿನ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ದಟ್ಟ ಅರಣ್ಯದ ಮಧ್ಯೆ, ಪ್ರಕೃತಿ ರಮಣೀಯ ಸ್ಥಳದಲ್ಲಿ ಇರುವ ಜಲಪಾತವೊಂದು ಬಂಡೆಕಲ್ಲುಗಳ ನಡುವೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.
ಬೈಂದೂರು :ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು ಶೇಡ್ಡ್ ಗಳು ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ,ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ ಆಗಲಿಲ್ಲ, ಇವತ್ತು ಸಮುದ್ರದ ಅಬ್ಬರದ ಅಲೆಗಳು ಜಾಸ್ತಿ ಆಗಿರುದರಿಂದ ಕಡಲು ತೀರ ಪ್ರದೇಶದಲ್ಲಿ ಅಪಾಯದಪರಿಸ್ಥಿತಿ ಉಂಟಾಗಿದು ಜನರಗೋಳನ್ನು ಕೇಳುವರು ಯಾರು ಇಲ್ಲದಂತಾಗಿದೆಕಡಲು ಕೊರತೆ ಹೀಗೆ ಮುಂದುವರಿದರೇ ನೂರಾರು ಮೀನು ಗಾರರ
ಜೆಸಿಐನ ವಲಯ ಎಕ್ಸ್ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ ಫೌಂಡೇಶನ್ ಗೆ ನೀಡುವುದರ ಮೂಲಕ,ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ವಲಯದಲ್ಲೇ ಟಾಪ್ ಒನ್ ಘಟಕವಾಗಿ ಮೂಡಿಬಂದಿದೆ. ಈ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ
ಎಸ್ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಡಾ.ರವಿರಾವ್ ಎಸ್. ವೈದ್ಯರ ದಿನದ ಮಹತ್ವ ವಿವರಿಸಿದರು. ಎಸ್.ಸಿಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಿದ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ
ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ




























