Home Blog Left SidebarPage 905

ದಲಿತ ಯುವತಿಯ ನಕಲಿ ಸಹಿ ಬಳಸಿ ಸುಳ್ಳು ದೂರು : ತನಿಖೆಗೆ ಜಿಲ್ಲಾ ದಲಿತ ಸೇವಾ ಸಮಿತಿ ಆಗ್ರಹ

ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯೂರಿನ ಚೆನ್ನಪ್ಪ ಅಜಿಲಾಯ ಎಂಬವರ ಮೇಲೆ ಸ್ಥಳೀಯ ದಲಿತ ಸಮುದಾಯಕ್ಕೆ ಸೇರಿದ ಯುವತಿಯ ಹೆಸರಿನಲ್ಲಿ ಅವರ ನಕಲಿ ಸಹಿ ಬಳಸಿ ಸುಳ್ಳು ದೂರು ನೀಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು

ಶ್ರೀನಿವಾಸ್‌ ವಿಶ್ವವಿದ್ಯಾಲಯ: ಲಸಿಕೆ ಶಿಬಿರ

ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರವು ಸೆ. 17 ರ ಶುಕ್ರವಾರದಂದು ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌ ಕೋವಿಡ್‌ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ

ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ : ಡಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19

ಯುವ ಕಾಂಗ್ರೆಸ್ ನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಣೆ

ಬೆಂಗಳೂರು ; ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟದೂಡಿರುವ, ನಿರುದ್ಯೋಗ ಸಮಸ್ಯೆ ನಿವಾರಿಸಲು ವಿಫಲವಾಗಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಪೊಲೀಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಖಂಡಿಸಿ : ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು. ಹೋರಾಟಗಾರ ಅಚ್ಯುತ ಸಂಪಿಗೆ

ಮುನ್ನೂರು ಗ್ರಾಮದ ಮದನಿ ನಗರದಲ್ಲಿ ತ್ಯಾಜ್ಯ ಸಮಸ್ಯೆ : ರಾತ್ರೋ ರಾತ್ರಿ ಮುಕ್ತಿ ಕಾಣಿಸಿದ ಗ್ರಾಪಂ ಸದಸ್ಯೆ

ಶೈಕ್ಷಣಿಕ ಮತ್ತು ಮೆಡಿಕಲ್ ಹಬ್ ಎಂದೇ ಗುರುತಿಸಲ್ಪಟ್ಟಿರುವ ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದೊಂದು ವಾರದಿಂದ ತ್ಯಾಜ್ಯ ವಸ್ತುಗಳು ರಾಶಿ ಬೀಳುತ್ತಿತ್ತು. ಇದರಿಂದ ಪರಿಸರ ಗಬ್ಬೆದ್ದು ನಾರುತ್ತಿತ್ತಲ್ಲದೆ

ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿ: ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ, ಭಜನೆ, ಸ್ಥಳೀಯ ಬಂಟ ಮಹಿಳಾ ಸಾಧಕಿಯರಿಗೆ ಸನ್ಮಾನ

ಮೀರಾರೋಡ್ : ಬಂಟರ ಸಂಘ ಮುಂಬಯಿ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸೆ. 14ರಂದು ಮೀರಾ ರೋಡ್ ಪೂರ್ವದ ಸಿನೆಮೆಕ್ಸ್ ಥಿಯೇಟರ್ ಎದುರಗಡೆ ಹೋಟೆಲ್ ಕೃಷ್ಣಾ ಪ್ಯಾಲೇಸನ ಸಭಾಂಗಣದಲ್ಲಿ ಹಳದಿ – ಕುಂಕುಮ , ಭಜನೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸ್ಥಳೀಯ ಬಂಟ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ್ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಸೆ.17ರಂದು  ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ

ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ದಿನಾಂಕ 17.09.2021 ರಂದು ಪೂರ್ವಾಹ್ನ9.೦೦ ಗಂಟೆಯಿಂದ ಮೂರನೇ ಸಾಲಿನ ಕೋವಿಡ್ ಲಸಿಕೆ ವಿತರಣಾಕಾರ್ಯಕ್ರಮ (ಪ್ರಥಮ ಹಾಗೂ ದ್ವಿತೀಯಡೋಸ್) ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಆಸಕ್ತ ಅಭ್ಯರ್ಥಿಗಳು ಆಧಾರ್‌ಕಾರ್ಡ್ ಹಾಗೂ ಪ್ರಥಮ ಲಸಿಕೆ ಪಡೆದಿದ್ದಲ್ಲಿ ಅದರ ಮಾಹಿತಿ ಪತ್ರವನ್ನು ಜೊತೆಗೆ ತಂದು

ಶೈಕ್ಷಣಿಕ ಸಂಸ್ಥೆಯ ಬೆಳವಣಿಗೆಯಲ್ಲಿ ವೃತ್ತಿಪರತೆ, ತಂಡಸ್ಫೂರ್ತಿ ಅಗತ್ಯ: ಡಾ. ಡಿ.ವೀರೇಂದ್ರ ಹೆಗ್ಗಡೆ

ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ

ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ

ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ