Home Blog Left SidebarPage 911

ಹೊಯ್ಗೆ ಬಜಾರ್‌ ಸಮುದ್ರ ದಡದಲ್ಲಿ ಯುವತಿಯ ಮೃತದೇಹ ಪತ್ತೆ

ಯುವತಿ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿಬಂದಿದ್ದು, ಉಳ್ಳಾಲದ ಮೀನುಗಾರರು ಮೃತದೇಹ ಸಮುದ್ರ ಸೇರುವುದನ್ನು ತಪ್ಪಿಸಿ ಹೊಯ್ಗೆಬಜಾರ್ ತೀರಕ್ಕೆ ತಲುಪಿಸಿದ್ದಾರೆ. ಸುಮಾರು 20-35 ರ ಒಳಗಿನ ಯುವತಿ ಮೃತದೇಹ ಇದಾಗಿದೆ. ಪ್ಯಾಂಟ್ ಹಾಗೂ ಟೀಶಟ್೯ ಧರಿಸಿದ್ದಳು. ಆತ್ಮಹತ್ಯೆಯೋ ಅಥವಾ ಬೇರೆ ಕಾರಣದಿಂದ ಮೃತಪಟ್ಟಿರುವುದೋ ಅನ್ನುವುದು ಪೊಲೀಸ್ ತನಿಖೆಯಿಂದ

ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು ತಾಯಿ, ಮಗು ಸಾವು

ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ನಾಡ ಗ್ರಾಮದ ಚುಂಗಿಗುಡ್ಡೆಯಲ್ಲಿ ಸಂಭವಿಸಿದೆ. ನಾಡ ಗ್ರಾಮದ ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು. ರೋಸಿರಿಯಾ ಅವರು ಹಿಂದೆ ಕುವೈಟ್‌ನಲ್ಲಿ ಜೆಟ್

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2020ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ

ಪಣಂಬೂರು ಬೀಚ್‍ನಲ್ಲಿ ಮೀನುಗಾರಿಕಾ ಬೋಟ್ ಅವಘಡ: ಓರ್ವ ಸಮುದ್ರಪಾಲು:ನಾಲ್ವರ ರಕ್ಷಣೆ

ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಇಂದು ಬೆಳಗ್ಗೆ ದುರಂತಕ್ಕೀಡಾಗಿದೆ. ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಶರೀಫ್ ನಾಪತ್ತೆಯಾದವರು. ಮೀನುಗಾರಿಕೆ ನಡೆಸಲು ಅಝರ್ ಎಂಬವರ ಮಾಲಕತ್ವದ ಎಫ್.ಎನ್.ಚಿಲ್ಡ್ರನ್ಸ್ ಗಿಲ್ ನೆಟ್ ದೋಣಿಯು ಸಮುದ್ರಕ್ಕೆ ತೆರಳಿತ್ತು. ಆದರೆ ಇಂದು ಬೆಳಗ್ಗೆ 7.30 ಸುಮಾರಿಗೆ ಈ ದೋಣಿಯು ಪಣಂಬೂರು ಬೀಚ್ ಬಳಿ ಬಿರುಗಾಳಿಯ ಹೊಡೆತಕ್ಕೆ

ನಿರರ್ಥಕ ಜಯಕ್ಕಿಂತ ಸಾರ್ಥಕ ಅಪಜಯ ಶ್ರೇಷ್ಠ: ಪ್ರೊ.ರಾಜಾರಾಮ ತೋಳ್ಪಾಡಿ

ಸಂಶೋಧನೆ ಎಂಬ ಜಟಿಲ ಮತ್ತು ಸಂಕೀರ್ಣವಾದ ಪರಿಕಲ್ಪನೆಯನ್ನು ಸರಳವಾಗಿ ವಿವರಿಸುವ ಪ್ರಯತ್ನ ಮಾಡುವ ಮತ್ತು ಸಂಶೋಧನೆ ಅಂದರೆ ಏನು, ಸಂಶೋಧನೆಯನ್ನು ಉನ್ನತ ಶಿಕ್ಷಣವೆಂದು ಯಾಕೆ ಕರೆಯುತ್ತಾರೆ ಎಂಬುದನ್ನು ತಾತ್ವಿಕವಾಗಿ ವಿವೇಚನೆಗೆ ಒಳಪಡಿಸುವ ‘ಮಾರ್ಗಾನ್ವೇಷಣೆ’ ಪುಸ್ತಕವು ಒಂದು ಸಾಹಸೀ ಪ್ರಯೋಗವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನೆಹರು ಚಿಂತನ ಕೇಂದ್ರದ ನಿರ್ದೇಶಕರಾಗಿರುವ ಪ್ರೊ. ರಾಜಾರಾಮ ತೋಳ್ಪಾಡಿ ಹೇಳಿದರು. ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಮತ್ತು

ಆನೆಗುಡ್ಡೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಹಸ್ರ ನಾರಿಕೇಳ ಗಣಯಾಗ

ಕುಂದಾಪುರ: ಕೊರೋನಾ ಭೀತಿಯ ನಡುವೆಯೂ ಗಣೇಶ ಚತುರ್ಥಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ, ಸಂಭ್ರಮದಿಂದ ನಡೆದಿದ್ದು, ಭಕ್ತರು ಸಂಕಷ್ಟಹರ ವಿನಾಯಕನ ಪೂಜೆಯಲ್ಲಿ ಪಾಲ್ಗೊಂಡರು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಭಕ್ತರ ದಂಡು ಕಂಡುಬಂದಿತ್ತು. ಬೆಳಿಗ್ಗೆನಿಂದಲೇ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವಾಲಯದ ಒಳಗೆ ಗಣಪನ ದರ್ಶನಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಯಿತು. ಅರ್ಚಕರಿಂದ

ಬೊಕ್ಕಪಟ್ಣದ ಯುವಜನ ಅಕ್ಷಯ ವತಿಯಿಂದ 53ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಂಗಳೂರಿನ ಬೊಕ್ಕಪಟ್ಣದ ಯುವ ಜನ ಅಕ್ಷಯ ವತಿಯಿಂದ 53ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣ ಶ್ರೀ ವೀರವಿನಾಯಕ ಜನಸೇವಾ ಟ್ರಸ್ಟಿನ ಸಭಾಭವನದಲ್ಲಿ ಗಣಪನ ವಿಗ್ರಹವನ್ನ ಪ್ರತಿಷ್ಠಿಸಲಾಗಿದೆ. ಮೂರು ದಿನಗಳ ಕಾಲ ಪರ್ಯಂತ ಗಪಣನಿಗೆ ವಿಶೇಷ ಪೂಜೆ ನಡೆಯಲಿದೆ.ಆದಿತ್ಯವಾರದಂದು ವಿವಿಧ ಪೂಜೆ ಹಾಗೂ ಮಹಪೂಜೆಯೊಂದಿಗೆ ಮೆರವಣಿಗೆ ಮೂಲಕ ಶ್ರೀ ಬಹ್ಮ ಬೊಬ್ಬರ್ಯ ದೇವಸ್ಥಾನದ ಹಿಂದುಗಡೆಯಿರುವ ನದಿ ಕಿನಾರೆಯಲ್ಲಿ ಜಲಸ್ತಂಭನಗೊಳ್ಳಲಿದೆ. ಈ ವೇಳೆ

ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮಂಗಳೂರಿನ ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವವನ್ನ ಸರ್ಕಾರದ ಕೋವಿಡ್ – 19 ನಿಯಯಾವಳಿಯನ್ನ ಪಾಲಿಸಿಕೊಂಡು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣದ ಯನ್.ಯಂ. ಸುವರ್ಣರ ವ್ಯಾಯಾಮ ಶಾಲಾ ಮುಂಭಾಗದಲ್ಲಿ ಗಣಪತಿ ವಿಗ್ರಹವನ್ನ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು ಮುಂಜಾನೆ ನಂದಾದೀಪ ಬೆಳಗಿಸುವೊಂದರೊಂದಿಗೆ ದೇವರ ಪ್ರತಿಷ್ಟಾಪನೆ ಮಾಡಲಾಯ್ತು. ಇಂದು ಸಂಜೆ ರಂಗಪೂಜೆ, ಮಹಾಪೂಜೆಯೊಂದಿಗೆ ಗಣಪನ ವಿಗ್ರಹವನ್ನು

ಡಾ.ಮಾಲತಿ ಶೆಟ್ಟಿ ಮಾಣೂರು ರವರು “ರಾಷ್ಟ್ರೀಯ ಕಣ್ಮಣಿ ರಾಷ್ಟ್ರ ಪ್ರಶಸ್ತಿ ” ಗೆ ಆಯ್ಕೆ

ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ,ಸಾಹಿತಿ,ಸಮಾಜ ಸೇವಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ನೀಡುವ ” ರಾಷ್ಟ್ರೀಯ ಕಣ್ಮಣಿ” ರಾಷ್ಟ್ರ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 25 ರಂದು ಬೆಂಗಳೂರಿನಲ್ಲಿ ಸಂಸ್ಥೆಯ 29 ನೇ ವಾರ್ಷಿಕೋತ್ಸವದ ಸಮಾರಂಭದ ವೇಳೆ ಗಣ್ಯರ ಸಮ್ಮುಖದಲ್ಲಿ

ಕಾರ್ಕಳದ ಬಸ್ ನಿಲ್ದಾಣದ ಪರಿಸರದಲ್ಲಿ ಸಂಭ್ರಮದಿಂದ ಗಣೇಶೋತ್ಸವ ಆಚರಣೆ

ಕಾರ್ಕಳ: ಇಂದು ಶುಕ್ರವಾರ, ಎಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಆದರೆ ಕೋವಿಡ್ ಕಾರಣದಿಂದ ಹಿಂದಿನ ಸಡಗರ ಇಲ್ಲದೆ ಜನರು ಹಾಗೂ ಸಂಘಟಕರು ಅತಿ ಜಾಗರೂಕತೆಯಿಂದ ಹಬ್ಬವನ್ನು ಸರಕಾರ ಮತ್ತು ಜಿಲ್ಲಾಡಳಿತದ ಆದೇಶದಂತೆ ಆಚರಿಸುವುದು ಕಂಡುಬಂತು. ಈ ಸಂದರ್ಭದಲ್ಲಿ ೧೪ ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಕಾರ್ಕಳ ಬಸ್ ನಿಲ್ದಾಣ ಪರಿಸರದಲ್ಲಿ ಎಲ್ಲ ಜಾತಿಯ ಹಾಗೂ ಎಲ್ಲ ಧರ್ಮದವರನ್ನು ಸೇರಿಸಿಕೊಂಡು ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇದರಲ್ಲಿ