Home Blog Left SidebarPage 916

ಕರ್ನಾಟಕ ಮುಕ್ತ ವಿವಿ .ಕುಲಪತಿ ಡಾ. ಎಸ್. ವಿದ್ಯಾಶಂಕರ್ ವಿರುದ್ಧ ರಾಜ್ಯಪಾಲರಿಗೆ ದೂರು: ವಿವಿ ರಕ್ಷಣೆಗೆ ಥಾವರ್ ಚಂದ್ ಗೆಲ್ಹೋಟ್ ಭರವಸೆ

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ವಿಶ್ವವಿದ್ಯಾಲಯದ ರಕ್ಷಣೆಗೆ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭರವಸೆ ನೀಡಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ವಿಕೇಶ್ ಶೆಟ್ಟಿ

ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ ಪಾತ್ರವಾಗಿದೆ. ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆಯನ್ನು

ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ:ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ

ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ

ಪುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ, ಸಾಧಕರಿಗೆ, ಅಧಿಕಾರಿಗಳಿಗೆ ಗೌರವ

ಪುತ್ತೂರು: ದ.ಕ.ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕರು, ಸಾಧಕ ವಿದ್ಯಾರ್ಥಿಗಳು ಹಾಗೂ ವಿವಿಧ ಅಧಿಕಾರಿ ವರ್ಗದವರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಭಾನುವಾರ ಇಲ್ಲಿಯ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದಲ್ಲಿ ತಾಲೂಕಿನ ವಿವಿಧ ಸರಕಾರಿ ಪ್ರಾಥಮಿಕ,

ಗಾಳಿ ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್‌ಗೆ ಹಾನಿ

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ‌ ಸಮುದ್ರದಲ್ಲಿ ‌ಬಾರಿ ಗಾಳಿ ಮಳೆಯಾಗಿದ್ದು, ಕುಂದಾಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಈ ಗಾಳಿ ಮಳೆಗೆ ಸಿಲುಕಿ‌‌ ಹಾನಿಗೊಳಗಾದ ಘಟನೆ ‌ನಡೆದಿದೆ. ಕುಂದಾಪುರ ತಾಲೂಕಿನ ಕಂಚಗೋಡಿನ ಹೊಸಪೇಟೆ ನಿವಾಸಿಯಾದ ನಾಗ ಖಾರ್ವಿಯವರಿಗೆ ಸೇರಿದ ಯಕ್ಷೇಶ್ವರಿ ಅನುಗ್ರಹ ದೋಣಿಯು ಗಾಳಿ ಮಳೆಗೆ ಸಿಲುಕಿ‌‌  ದೋಣಿ ಮುಳುಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂಜಿನ್

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕನ್ನಡಿಗ ಸುಹಾಸ್: ಸಚಿವ ಕೆ. ಗೋಪಾಲಯ್ಯ ಅವರಿಂದ ಅಭಿನಂದನೆ

ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್​ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಅವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವುದು ಭಾರತದ ಮೊದಲ ಐ ಎ ಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ ಸುಹಾಸ್ ಒಬ್ಬ ಕನ್ನಡಿಗ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದರು. ಸುಹಾಸ್

ಮಂಗಳೂರಿನ ಜಪ್ಪಿನಮೊಗರು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಸಾಧಕ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್‌ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಕ್ಷೇತ್ರ

ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು -ಡಾ.ಕೆ.ವಿ.ರಾಜೇಂದ್ರ

ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮ ಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಎರಡು ಡೋಸ್ ಲಸಿಕೆ ಪಡೆದವರ

ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಐದನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ಬಂಗಾರ ಗೆದ್ದ ಕೃಷ್ಣ ನಾಗರ್

ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ (ಎಸ್‌ಎಚ್-6)ನಲ್ಲಿ ಭಾರತದ ಕೃಷ್ಣ ನಾಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ ಐದನೇ ಚಿನ್ನದ ಪದಕವಾಗಿದೆ. ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ ಎಚ್ 6 ವಿಭಾಗದಲ್ಲಿ ಭಾರತದ ಕೃಷ್ಣ ನಾಗರ್ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಹಾಂಗ್ ಕಾಂಗ್ ನ ಚು ಮನ್ ಕೈ ಅವರನ್ನು

ಟೋಕಿಯೋ ಪ್ಯಾರಾಲಿಂಪಿಕ್ಸ್ : ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್

 ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ  ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆದ್ದುಕೊಂಡು ಹೊಸ ಇತಿಹಾಸ ನಿರ್ಮಿಸಿದರು. ಸುಹಾಸ್ ಇವರು ಕರ್ನಾಟಕ  ಮೂಲದ ಐಎಎಸ್ ಅಧಿಕಾರಿ.