Home Blog Left SidebarPage 919

V4STREAM OTT ಯಲ್ಲಿ “ನಸೀಬ್”- ಏರೆಗುಂಡು ಏರೆಗಿಜ್ಜಿ ತುಳು ಸಿನಿಮಾ ಬಿಡುಗಡೆ

ಮಂಗಳೂರು ಕ್ಯಾಮ್ ಫಿಲ್ಮ್ ಅರ್ಪಿಸುವ ಪ್ರೆಸ್ಟನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ತಯಾರಾದ ಹೆನ್ರಿ ಡಿಸಿಲ್ವ ನಿರ್ಮಿಸಿದ ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ಈಗ ನಸೀಬ್ ಏರೆಗುಂಡ ಏರೆಗಿಜ್ಜಿ ಹೆಸರಿನಲ್ಲಿ ತುಳು ಸಿನಿಮಾ ಆಗಿ ಡಬ್ಬಿಂಗ್ ಆಗಿದೆ. ಈ ತುಳು ಸಿನಿಮಾ ಸೆಪ್ಟಂಬರ್ 8ರಂದು ವಿ4 ಸ್ಟ್ರೀಮ್ ಬಿಡುಗಡೆಗೊಳ್ಳಲಿದೆ.

ವಾರಾಂತ್ಯ ಲಾಕ್ಡೌನ್ ವಿರೋಧಿಸಿ ವ್ಯವಹಾರ ನಡೆಸಲು ಕರಾವಳಿ ವರ್ತಕರ ತೀರ್ಮಾನ

ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ, ಪಾದರಕ್ಷೆ, ಫ್ಯಾನ್ಸಿ ಮುಂತಾದ ಅಂಗಡಿಗಳ ಮಾಲೀಕರು ನಿನ್ನೆ ನಡೆದ ಸಂಘದ ವಿಶೇಷ ಮಹಾ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡರು. ಪ್ರತೀ ಅಂಗಡಿಯವರು

ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಜುರುಪಾದೆಯ ಅಬ್ದುಲ್ ಮಜೀದ್, ಪಂಜ ಎಣ್ಮೂರಿನ ಪಾರೂಕ್ ಅವರನ್ನು ಸೆ.1ರಂದು ತಡ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಉಳಿದಂತೆ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಇದೀಗ ಇನ್ನೋರ್ವ ಆರೋಪಿ ಅಲೆಬಿ ಎಂಬವರನ್ನು

ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ಬಿಡೆವು: ಸುರೇಶ್ ಕಲ್ಲಾಗರ್

ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಬರೋಬ್ಬರಿ ಎರಡು ಸಾವಿರದ ಅರವತ್ತಾರು ಕೋಟಿ ರೂ. ಹಣವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲು ತಯಾರಿ ನಡೆಸುತ್ತಿದೆ. ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ನಾವು ಬಿಡುವುದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ

ಸಂರಕ್ಷಕರ ವಿರುದ್ಧ ಹಿಂಸೆ ವಿಷಯದ ಮೇಲೆ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಣಿಪಾಲ :  ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್, ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗ, ಮಾಹೆ ಮಣಿಪಾಲದ ಸಹಯೋಗದೊಂದಿಗೆ,  ಮಣಿಪಾಲದ ಡಾ ಟಿಎಂಎ ಪೈ ಹಾಲ್ ನಲ್ಲಿ “ಸಂರಕ್ಷಕರ ವಿರುದ್ಧ ಹಿಂಸೆ ” ಕುರಿತು ಮುಂದುವರಿದ ವೈದ್ಯಕೀಯ ಶಿಕ್ಷಣವನ್ನು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂರಕ್ಷಕರ ವಿರುದ್ಧ ಹಿಂಸೆ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಹಿಂಸಾಚಾರದ

ರಾಮಸೇನೆಗೆ ಸಾಮೂಹಿಕ ರಾಜೀನಾಮೆ

ಉಡುಪಿ ಜಿಲ್ಲಾ ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೇಕಲ್ಲುರವರು, ಸಂಘಟನೆಯ ರಾಜ್ಯ ಪ್ರ. ಕಾರ್ಯದರ್ಶಿಯವರ ಮಾತಿನಿಂದ ಬೇಸತ್ತು ಸಂಘಟನೆಗೆ ಒಂದು ವಾರದಿಂದ ಹಿಂದೆಯೇ ರಾಜೀನಾಮೆ ನೀಡಿದ್ದಾರೆ. ಆದರೇ ಸಂಘಟನೆಯ ರಾಜ್ಯ ನಾಯಕರು ಜಿಲ್ಲಾ ಪದಾಧಿಕಾರಿಗಳನ್ನು ಸಂಪರ್ಕಿಸದೆ ಇರುವುದು. ಹಾಗೂ ಜಿಲ್ಲಾಧ್ಯಕ್ಷರ ಮನವೋಳಿಕೆಗೆ ಪ್ರಯತ್ನಿಸದಿರುದನ್ನು ಮನಗಂಡು ಶ್ರೀ ರಾಮಸೇನೆಯ ಉಡುಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅತೀವಾ ನೋವಿನಿಂದ ಸಂಘಟನೆಗೆ

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ ದೋಷಗಳನ್ನು ಹೇಳಿ ಭಾವನಾತ್ಮಕವಾಗಿ ಜನರನ್ನು ಸೆಳೆದು ಮತಗಳಿಸಿ ಉನ್ನತ ಅಧಿಕಾರಕ್ಕೇರಿದ್ದರೂ ಜನರ

ಆಹಾರ ಪೊಟ್ಟಣ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ- ಹರೀಶ್ ಕುಮಾರ್ ಆರೋಪ

ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಡಿ ರಾಜ್ಯದಲ್ಲಿ 8೦೦೦ ಕೋಟಿ ರೂ. ಸಂಗ್ರಹವಿದೆ. ಅದರಡಿ ಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ವಿತರಣೆಗೆ ಬಂದ ಆಹಾರ ಪೊಟ್ಟಣ ಅಲ್ಲಿನ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಕಡೆಗಳಲ್ಲಿ ಇಂತಹ ಆಹಾರ ಪೊಟ್ಟಣಗಳನ್ನು ಬಿಜೆಪಿ ಪಕ್ಷದ ಮನೆಗಳಲ್ಲಿ

ಲಸಿಕೆ ವಿಚಾರದಲ್ಲಿ ತಾರತಮ್ಯ ಯಾಕೆ-ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ 

 ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಂಚಿಕೆ,

ಯಕ್ಷಮಿತ್ರರು ದುಬೈ ವತಿಯಿಂದ ಯಕ್ಷಗಾನದ ದ್ರುವತಾರೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಯಕ್ಷಗಾನದ ದ್ರುವತಾರೆ, ಯಕ್ಷ ಭೀಮ, ಅಭಿನವ ವಾಲ್ಮೀಕಿ ಕೀರ್ತಿಶೇಷ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಭಾವಪೂರ್ವ ಶ್ರದಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಯಕ್ಷಮಿತ್ರರು ದುಬೈ ಇವರ ವತಿಯಿಂದ ಈ ಕಾರ್ಯಕ್ರಮ ದುಬೈಯ ಹೋಟೆಲ್ ಒಂದರಲ್ಲಿ ಕಾರ್ಯಕ್ರಮ ನಡೆಯಿತು. ತಂಡದ ಹಿರಿಯ ಸದಸ್ಯರಾದ ವೆಂಕಟೇಶ ಶಾಸ್ತ್ರಿ, ಭವಾನಿ ಶಂಕರ್ ಶರ್ಮ, ಕೃಷ್ಣ ಪ್ರಸಾದ್ ರಾವ್ ದೀಪ ಬೆಳಗಿಸಿ ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.