Home Blog Left SidebarPage 921

ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ : ಮುಖ್ಯಮಂತ್ರಿಗೆ ಮಡಿವಾಳ ಕ್ಷೇಮಾಭಿವೃದ‍್ಧಿ ಸಂಘ ಮನವಿ

ಬೆಂಗಳೂರು:  ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ದೀಪಕ್ ವಿ. ಈ ಕುರಿತು

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ : ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ ಮಕ್ಕಳೊಂದಿಗೆ ವ್ಯಕ್ತಿಯೊಬ್ಬ ದಾರಿಯಲ್ಲಿ ಬಂದಿದ್ದು, ಮಕ್ಕಳು ಮಾಸ್ಕ್ ಧರಿಸಿರಲಿಲ್ಲ

ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ : ಪುರಸಭಾ ಸದಸ್ಯ ಗಿರೀಶ್ ಜಿ.ಕೆ ಎಚ್ಚರಿಕೆ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಸಂಸದರು, ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಾವೇನು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ. ಪ್ರತೀ ಬಾರಿ ಸಭೆಗೆ ಒಬ್ಬೊಬ್ಬ ಅಧಿಕಾರಿಗಳು ಬಂದು ಸುಳ್ಳು ಭರವಸೆಗಳನ್ನು ಕೊಟ್ಟು ಹೋಗುತ್ತೀರಿ. ನಾವೇನು ನಿಮಗೆ ಆಟದ ಗೊಂಬೆಗಳ ಹಾಗೆ ಕಾಣುತ್ತಿದ್ದೇವಾ. ನಿಮ್ಮಲ್ಲಿ ಸಾಧ್ಯವಿಲ್ಲದಿದ್ದರೆ ಹೇಳಿಬಿಡಿ. ನಮ್ಮ ಊರಿನ ಬಗ್ಗೆ ನಮಗೆ ಕಾಳಜಿ ಇದೆ. ನೀವು ಕೇಸು ಹಾಕಿ

ಮತ್ತೆ ಗ್ರಾಹಕರಿಗೆ ಸಿಲಿಂಡರ್ ದರ ಏರಿಕೆ ಬಿಸಿ: ಎಲ್‌ಪಿಜಿ ಸಿಲಿಂಡರ್ ದರ 25ರೂ.ಗೆ ಏರಿಕೆ

 ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ. ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್

ಬಾಣಾವರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಆತ್ಮಹತ್ಯೆ: ಸಾರ್ವಜನಿಕರ ಆಕ್ರೋಶ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಾಣಾವರದಲ್ಲಿ ವಾಹನ ತಪಾಸಣೆ ವೇಳೆ ಹೆಚ್ಚು ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಾಹನ ಚಾಲಕ ಮಂಜುನಾಥ್ (೫೦) ತನ್ನ ವಾಹನದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಬಾಣಾವರ ಸಮೀಪದ ಸರ್ವೆ ಕೊಪ್ಪಲು ಮೂಲದವರಾಗಿದ್ದು ಆರ್.ಟಿ.ಓ ಅಧಿಕಾರಿಗಳ ತಪಾಸಣೆಯ ವೇಳೆ ಹದಿನೇಳು ಸಾವಿರ ದಂಡವಿಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೊರೋನಾ ಹಿನ್ನೆಲೆಯಲ್ಲಿ ವಾಹನ

ಮಹಿಳೆಯರಿಂದ ಗಣೇಶ ವಿನ್ಯಾಸ ಇರುವ ಚಿನ್ನದ ಆಭರಣ ಉತ್ಸವ : ಸೆ.3ರಂದು ಸಚಿವ ಡಾ. ಸುಧಾಕರ್ ಚಾಲನೆ

ಬೆಂಗಳೂರು, ಆ 31; ಕೋವಿಡ್ ಸಂಕಷ್ಟದಿಂದ ಜನತೆ ಹೊರ ಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಗೌರಿ – ಗಣೇಶ ಹಬ್ಬಕ್ಕಾಗಿ ವಿಶೇಷವಾಗಿ ಯಲಹಂಕದ ಜಕ್ಕೂರಿನ ಮಧುರ ಮಿಲನ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 3 ರಿಂದ 5 ರ ವರೆಗೆ ಮಹಿಳೆಯರಿಂದಲೇ ವಿಶೇಷ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಈ ಬಾರಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿದ್ದು, ಹಬ್ಬಕ್ಕೆ ಹೊಳಪು ಮತ್ತು ಮೆರಗು ನೀಡಲು ಮಹಿಳೆಯರಿಂದಲೇ ವಿಶೇಷ ಆಭರಣ ಮೇಳ

ಪಡುಬಿದ್ರಿಯಲ್ಲಿ ಎರ್ರಾ ಬಿರ್ರಿ ಚಲಿಸಿದ ಲಾರಿ:ಮೂರು ದ್ವಿಚಕ್ರ ವಾಹನ ಸಹಿತ ಒಂದು ಕಾರು ಜಖಂ

ಲಾರಿ ಚಾಲಕನೊರ್ವನ ಅಜಾಗರೂಕತೆಯ ಚಾಲನೆಯಿಂದಾಗಿ ರಸ್ತೆಯಂಚಿನಲ್ಲಿ ಪಾರ್ಕ್ ಮಾಡಲಾದ ದ್ವಿಚಕ್ರ ವಾಹನಗಳು, ಕಾರೊಂದರ ಸಹಿತ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತಗ್ಗು ಪ್ರದೇಶದಲ್ಲಿ ನಿಂತಿದೆ. ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ಪಡುಬಿದ್ರಿ ಬಂಟರ ಸಂಘದ ಮುಂಭಾಗದ ಹೊಟೇಲೊಂದರ ಮುಂಭಾಗ ರಸ್ತೆಯಂಚಿನಲ್ಲಿ ಹೊಟೇಲ್ ಗ್ರಾಹಕರುನಿಲ್ಲಿಸಿದ ಎರಡು ಬೈಕ್ ಒಂದು ಸ್ಕೂಟರ್ ಹಾಗೂ ಒಂದು ರಿಡ್ಜ್ ಕಾರಿಗೆ ಡಿಕ್ಕಿಯಾಗಿ ಮುಂದಿದ್ದ ವಿದ್ಯುತ್ ಕಂಬಕ್ಕೂ ಡಿಕ್ಕಿಯೊಡೆದು ಸುಮಾರು

ತೆಂಕನಿಡಿಯೂರು ಕಾಲೇಜು : ರಾಷ್ಟ್ರೀಯ ಕ್ರೀಡಾ ದಿನ ಪ್ರಯುಕ್ತ ರಕ್ತದಾನ ಶಿಬಿರ

ಉಡುಪಿ : ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ, ಇದರ ದೈಹಿಕ ಶಿಕ್ಷಣ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ), ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಹರಿಯಪ್ಪ ಕೋಟ್ಯಾನ್

ಜಾತಿವಾರು ಜನಗಣತಿ ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‌ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ : ಮೂಡುಬಿದರೆಯಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್