ಬಿಎನ್ಐ ಮಂಗಳೂರು ವತಿಯಿಂದ ಕರಾವಳಿ ಎಕ್ಸ್ ಪೋ 2021 ವರ್ಚುವಲ್ ಬಿಸಿನೆಸ್ ಎಕ್ಸಿಬಿಷನ್ ಅನ್ನು ಆಗಸ್ಟ್ 20ರಿಂದ ಆಗಸ್ಟ್ 22ರ ವರೆಗೆ ಆಯೋಜಿಸುತ್ತಿದ್ದೇವೆ ಎಂದು ಬಿಎನ್ಐ ಮಂಗಳೂರಿನ ಕರಾವಳಿ ಎಕ್ಸ್ ಪೋ ಇದರ ಅಧ್ಯಕ್ಷರಾದ ಸುನಿಲ್ ದತ್ ಪೈ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಎನ್ಐ ಮಂಗಳೂರಿನ ನಾಲ್ಕು
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಪ್ರಾಥಮಿಕ ಮೀನುಗಾರರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚಗೋಡು ಇವರ ನೇತೃತ್ವದಲ್ಲಿ ಮಸ್ತ್ಯ ಸಂಪತ್ತು ಹೇರಳವಾಗಿ ದೊರೆಯಲಿ ಮತ್ತು ಇತ್ತೀಚಿನ ದಿನಗಳಲ್ಲಿ ಮೀನಗಾರರಲ್ಲಿ ವೈಮನಸ್ಸು ಉಂಟಾಗುತ್ತಿದ್ದು ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಪರಸ್ಪರ ಸೌಹಾರ್ದತೆ ಯಿಂದ ಮೀನುಗಾರಿಕೆ ಮಾಡಲಿ ಎಂಬ ಸದುದ್ದೇಶದಿಂದ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಂಗೆ ಮಾತೆಗೆ ನಮೀಸುತ್ತಾ ಮತ್ಸ್ಯ ಬೇಟೆಯಾಡುವಾಗ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಂತೆ ನಿರ್ಬಂಧಗಳನ್ನು ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು
ಮಂಜೇಶ್ವರ : ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸಲು ಕರ್ನಾಟಕ ರಾಜ್ಯ ಸರ್ಕಾರ ಗಡಿಗಳಲ್ಲಿ ನಿಷೇಧ ಹೇರಿರುವುದಕ್ಕಾಗಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಆ.25 ಕ್ಕೆ ಮುಂದೂಡಿದ್ದು, ಈ ಮಧ್ಯೆ ದಕ್ಷಿಣ ಕನ್ನಡ ಪ್ರವೇಶಿಸಲು ಆಂಬುಲೆನ್ಸ್ ಗಳ ಹೊರತು ಇತರ ವಾಹನಗಳಲ್ಲೂ ಚಿಕಿತ್ಸೆಗೆ ತೆರಳುವವರನ್ನು ಯಾವುದೇ ಪರಿಶೋಧನೆಗೊಳಪಡಿಸದೆ(ಆರ್ ಟಿ ಪಿ ಸಿ ಆರ್ ) ತೆರಳಲು ಅವಕಾಶ ನೀಡಬೇಕು ಎಂದು ಮಂಗಳವಾರ ಹೈಕೋರ್ಟ್ ಮಧ್ಯಂತರ
ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿ ಪತ್ನಿಯನ್ನು ಕೊಂದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುನೀತಾ(30 ) ಸಾವನ್ನಪ್ಪಿದಾಕೆ. ಪತಿ ಮೂಡುಬಿದಿರೆಯ ದಿನ್ ರಾಜ್ ನನ್ನು ಇಂದು ಮುಂಜಾನೆ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ಹೆಂಡತಿಯ ತಲೆಗೆ ಹೊಡೆದಿದ್ದಾನೆ. ಆಗ ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ
ಸ್ವಾತಂತ್ರ್ಯೋತ್ಸವದ ದಿನದಂದು ಪುತ್ತೂರು ತಾಲೂಕು ಕಬಕ ಗ್ರಾಮ ಪಂಚಾಯತ್ ಆವರಣದಲ್ಲಿ, ಕೇಂದ್ರ ಸರ್ಕಾರದ ಅಜಾದಿ ಕಾ ಅಮೃತ ಮಹೋತ್ಸವದ ಆಚರಣೆ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಹಾಗೂ ಭಾರತ ಮಾತೆಯ ಭಾವಚಿತ್ರವಿರುವ ವಾಹನದ ಚಲನೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ. ಬಂಧನಕ್ಕೆ ಒಳಗಾದ ಕೇವಲ 48 ಗಂಟೆಗಳ ಒಳಗಡೆ ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪ್ರಕರಣವೂ ಸಾರ್ವಜನಿಕ ವಲಯದಲ್ಲಿ ಭಾರೀ
ವಿಟ್ಲ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕಾಗಿ ದೈವ ದೇವರ ಬಳಿ ದೂರು ನೀಡುವ ಕಾರ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡುಕಂಬಳಗುತ್ತು ಹೇಳಿದರು.
ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್ಗಿಂತ ಕೋವಿಡ್ ಕೇರ್ ಸೆಂಟರ್ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಇದರಿಂದಾಗಿ ವೈರಾಣು ಹರಡುವುದನ್ನು ತಪ್ಪಿಸುವುದರ ಜೊತೆಗೆ ರೋಗ ನಿಯಂತ್ರಣವೂ ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಮೂಡುಬಿದಿರೆ: ಪುತ್ತೂರಿನ ಕಬಕದಲ್ಲಿ ನಡೆದ ಪ್ರಕರಣವನ್ನು ಮೂಲ್ಕಿ ಮೂಡುಬಿದಿರೆ ಮಂಡಲ ಬಿಜೆಪಿ ಖಂಡಿಸಿದೆ. ಮಂಡಲ ಅಧ್ಯಕ್ಷ ಸುನೀಲ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾವರ್ಕರ್ ಬಗ್ಗೆ ವಿವಾದ ಎಬ್ಬಿಸಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗ ಸಂಘಟನೆಗಳ ನಿಷೇಧಕ್ಕಾಗಿ ಮತ್ತು ಕಬಕ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ. ಟಿಪ್ಪು ಸುಲ್ತಾನ್ ನೈಜ್ಯ ಸ್ವಾತಂತ್ರ್ಯ
2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ಪ್ರಶಸ್ತಿಗೆ 15 ಮಂದಿ ಆಯ್ಕೆಯಾಗಿದ್ದಾರೆ. ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಗೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಚಿ.ಸು.ಕೃಷ್ಣಶೆಟ್ಟಿ ಸೇರಿದಂತೆ 15 ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಆ.18ರಂದು ಸಂಜೆ 6.30ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಿ


















