Home Blog Left SidebarPage 955

ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗೆ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿ

ಕುಂದಾಪುರ: ಫೈನಾನ್ಸ್ ಪಾಲುದಾರ ಕೂಡಾಲ್ ನಿವಾಸಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೂಪ್ ಶೆಟ್ಟಿಯನ್ನು ಪೊಲೀಸರು ಸೋಮವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.   ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ಅಂದರೆ ಅಗಸ್ಟ್ 9ರ ತನಕ ಪೊಲೀಸ್ ಕಸ್ಟಡಿಗೆ ನೀಡಿ 1ನೇ ಜೆಎಮ್‌ಎಫ್‌ಸಿ

ಬೇಲೂರಿನಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಕೂಡ ರೈತರ ಸಂಕಷ್ಟದಲ್ಲಿದ್ದರೂ ಸಾಲ ಮನ್ನಾ ಮಾಡದೆ ರೈತರನ್ನು

ಶ್ರೀನಿವಾಸ ವಿವಿಯ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ: ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ

ಹೌಸ್ ಕೀಪಿಂಗ್ ವಿಭಾಗದ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನಲ್ಲಿ ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ ವನ್ನು ನಡೆಸಲಾಯಿತು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಗೃಹ ವಿಜ್ಞಾನ ವಿಭಾಗದ ಎಚ್. ಒ.ಡಿ ಪ್ರೊ. ಗಾಯತ್ರೀ ಕೆ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಂತಿಮ ವರ್ಷದ ಬಿಎಚ್‌ಎಂಸಿಟಿಯ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಪ್ರೊ.ಗಾಯತ್ರೀ ಅವರು ಹೋಟೆಲ್ ಗಳಲ್ಲಿ ಹೂವಿನ

2021-22ನೇ ಸಾಲಿನಲ್ಲಿ ಪುತ್ತೂರು ವಿಧಾಸಭಾ ಕ್ಷೇತ್ರಕ್ಕೆ ರೂ. 92.11 ಕೋಟಿ ಅನುದಾನ ಮಂಜೂರು-ಶಾಸಕ ಮಠಂದೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ ಮಾಸದಲ್ಲಿ ಈ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನಡೆಸಲಾಗುವುದು ಎಂದು ಪುತ್ತೂರು ಶಾಸಕ

ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ

ಬಂಟ್ವಾಳದಲ್ಲಿ ಹಸಿರು ನಮನ ಹಾಗೂ ಶ್ರದ್ಧಾಂಜಲಿ ಸಭೆ

ಗದಗ ಜಿಲ್ಲೆಯ ನರಗುಂದದಲ್ಲಿ 41 ನೇ ರೈತಹುತಾತ್ಮ ದಿನಾಚರಣೆಯ ಅಂಗವಾಗಿ ಕೃಷಿ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿಸಂಕಲ್ಪ ದಿನದಂದು ದೇಶದ ರೈತರ ಸಂಕಕ್ಷಣೆ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಪ್ರತಿಜ್ಞೆ ಮಾಡಿ ಹಿಂತಿರುಗುವ ಸಂದರ್ಭದಲ್ಲಿ ಚಿಕ್ಕಮಗಳೂರಿನ ಹತ್ತಿರ ಭಾರಿ ವಾಹನ ಅಪಘಾತದಲ್ಲಿ ಹುತಾತ್ಮರಾದ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷರಾದ ಎಮ್.ರಾಮು ಚೆನ್ನಪಟ್ಟಣ ಹಾಗೂ ಹಿರಿಯ ಉಪಾಧ್ಯಕ್ಷರಾದ ಜಿ.ಟಿ.ರಾಮಸ್ವಾಮಿಯವರಿಗೆ ಹಸಿರು ನಮನ ಹಾಗೂ

ಹಿರಿಯ ವಿದ್ಯಾರ್ಥಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹೆಮ್ಮೆಯ ಪಾಲುದಾರರು – ಡಾ. ಬಿ. ಯಶೋವರ್ಮ

ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ ಯಶೋವರ್ಮ ಕರೆ ನೀಡಿದರು. ಅವರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಳೆ

ಅಜೇಂದ್ರ ಶೆಟ್ಟಿ‌ ಮರ್ಡರ್ ಕೇಸ್: ಹೊಸ ಕಾರು ಕೊಟ್ಟಿತು ಆರೋಪಿಯ ಸುಳಿವು!?

ಕುಂದಾಪುರ: ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್‌ ಶೆಟ್ಟಿ ಗೋವಾದ ಹೊಟೇಲ್ ಒಂದರಲ್ಲಿ ಮೂರು ದಿನಗಳ‌ ಹಿಂದೆಯೇ ರೂಮ್‌ ಕಾಯ್ದಿರಿಸಿದ್ದ ಎನ್ನುವ ಬಲವಾದ ಮಾಹಿತಿ ಬಯಲಾಗಿದೆ. ಅನೂಪ್ ಶೆಟ್ಟಿಯನ್ನು ಗೋವಾದಿಂದ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೆಲವು ಮಹತ್ತರವಾದ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆರೋಪಿ ಅನೂಪ್ ಕೊಲೆ ಮಾಡಿ ಗೋವಾಕ್ಕೆ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನದ ಭಾಗವಾಗಿ ಸಿಐಟಿಯುನಿಂದ ಪಾದಯಾತ್ರೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು  CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ