Home Blog Left SidebarPage 957

ಕತ್ತು ಕೊಯ್ದು ಫೈನಾನ್ಶಿಯರ್ ಕಗ್ಗೊಲೆ: ಆರೋಪಿ ಗೋವಾದಲ್ಲಿ ಸೆರೆ

ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ (33) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿ ಹಾಗೂ ಆತ ಪರಾರಿಯಾಗಲು ಬಳಸಿದ್ದ‌ ಕಾರನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಗೋವಾದಲ್ಲಿ ವಶಕ್ಕೆ‌ ಪಡೆದಿದ್ದಾರೆ. ಇದೀಗ

ನಿವೃತ್ತ ವೀರಯೋಧ ಲಾರೆನ್ಸ್ ಡಿಸೋಜ ನಿಧನ: ನಿವೃತ್ತ ಸೈನಿಕರ ಸಂಘದಿಂದ ಅಂತಿಮ ಗೌರವ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರ, ಅಲಹಾಬಾದ್ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದರು. ೯೮

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ

ಮಂಗಳಮುಖಿಯರಿಗೆ ಹಲ್ಲೆ ನಡೆಸಿದ್ದ ಪ್ರಕರಣ: ನವಸಹಜ ಅಧ್ಯಕ್ಷ ನಿಖಿಲ್ ಬಂಧನ

ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ

ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ:ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಮಂಗಳೂರು:  ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ

ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ

ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ

ಕರ್ನಾಟಕ ವಿಧಾನಸಭೆ- ಎರಡು ವರ್ಷದ ಸಾಧನೆಗಳು ಪುಸ್ತಕ ಬಿಡುಗಡೆ

ಕಳೆದ ಎರಡು ವರ್ಷಗಳಿಂದ ಸಭಾಧ್ಯಕ್ಷನಾಗಿ ನನ್ನ ಕಾರ್ಯಕ್ಷೇತ್ರವು ಕೇವಲ ಸದನಕ್ಕೆ ಅಥವಾ ವಿಧಾನಸಭೆ ಸಚಿವಾಲಯದ ಆಡಳಿತಕ್ಕೆ ಸೀಮಿತಗೊಳಿಸದೆ ಅತ್ಯಂತ ಕ್ರಿಯಾಶೀಲವಾಗಿ ಜವಾಬ್ಧಾರಿ ನಿರ್ವಹಿಸಿದ ತೃಪ್ತಿ ಇದೆಯೆಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕರ್ನಾಟಕ ವಿಧಾನಸಭೆ- ಎರಡು ವರ್ಷದ ಸಾಧನೆಗಳು” (2019-2021) ಪುಸ್ತಕ ಬಿಡುಗಡೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ

ಮಂಗಳೂರಿನಲ್ಲಿ ಖಾಸಗಿ ಬಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್‌ಐ, ಸಿಪಿಐಎಮ್ ಮತ್ತು ಜೆಎಮ್‌ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಖಾಸಗಿ ಬಸ್ ದರ ಏರಿಕೆಯನ್ನು ಮಾಡಿ ಮತ್ತಷ್ಟು ಸಂಕಷ್ಠಕ್ಕೆ ತಳ್ಳಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಮ್ ಜಿಲ್ಲಾ ಮುಂಡರಾದ ಬಾಲಕೃಷ್ಣ ಶೆಟ್ಟಿ,

ಯುಪಿಸಿಎಲ್ ಪ್ರದೇಶಕ್ಕೆ ಪರಿಸರ ಅಧಿಕಾರಿಗಳ ತಂಡ ಭೇಟಿ: ರಾಸಾಯನಿಕ ನೀರು ಬಿಡುತ್ತಿರುವ ವಿರುದ್ಧ ಆಕ್ರೋಶ

ಕೃಷಿಕರ ಜೀವನಾಡಿ ನೀರಿನ ಮೂಲಕ್ಕೆ ಯುಪಿಸಿಎಲ್ ಕಂಪನಿ ಗುಪ್ತವಾಗಿ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಸ್ಥಳೀಯ ಮಳೆಯೊರ್ವರು ಆರೋಪಿಸಿದ ಮೇರೆಗೆ ಉಡುಪಿ ಪರಿಸರ ಅಧಿಕಾರಿಗಳ ತಂಡ ಪರಿಶೀಲಿಸಿ ಬಾವಿ, ತೊರೆ ಸಹಿತ ಇತರೆ ನೀರಿನ ಮೂಲಗಳಿಂದ ನೀರು ಸಂಗ್ರಹಿಸಿ ಪ್ರಯೋಗಲಯಕ್ಕೆ ಪರೀಕ್ಷೆಗಾಗಿ ರವಾನಿಸಿದ್ದಾರೆ. ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರಿನ ಕೃಷಿಕ ಕರಿಯಶೆಟ್ಟಿ ಎಂಬವರ ಮನೆಯ ಸುತ್ತಮುತ್ತಲ ಹತ್ತಾರು ಮನೆಗಳಿದ್ದು ಎಲ್ಲರೂ ಕೃಷಿಯನ್ನೇ ನಂಬಿ ಜೀವನ

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ