Home Blog Left SidebarPage 96

ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ

ಕೊಕ್ಕೇಶ್ವರ ಕಾಂಪೆಕ್ಸ್‌ನಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಲೋಕಾರ್ಪಣೆ

ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಆಸ್ತಿ ಅಡಮಾನ ಸಾಲ, ವ್ಯವಹಾರ ಸಾಲ, ಚಿನ್ನಾಭರಣ ಸಾಲ, ವೈಯಕ್ತಿಕ ಸಾಲ, ವಾಹನ ಸಾಲ, ಸ್ವ-ಸಹಾಯ ಗುಂಪು ಸಾಲ,ಹಾಗೂ ಹಲವಾರು ಠೇವಣಿಗಳು, ಬಂಪರ್ ಆರ್ ಡಿ

ಬೈಂದೂರು ರೋಟರಿ ಕ್ಲಬ್: ನೂತನ ಪದಾಧಿಕಾರಿಗಳ ಪದಪ್ರದಾನ

ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ೨೦೨೫-೨೬ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ಬೈಂದೂರು ರೋಟರಿ ಕ್ಲಬ್ ನ

ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಸಾರಾಂಗ ಸಲಹಾ ಸಮಿತಿ ಸದಸ್ಯರಾಗಿ ಡಾ. ಮುರಲೀ ಮೋಹನ್ ಚೂಂತಾರು ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ

ಮುರುಳ್ಯ ಅಲೆಕ್ಕಾಡಿ ಶಾಲಾ ವಠಾರದಲ್ಲಿ ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲ ವಠಾರದಲ್ಲಿ ಶಾಲೆಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಇಂದು ಅಡಿಕೆ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರು ಸಸಿ ನಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರ ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಇದು ಒಳ್ಳೆಯ ಕಾರ್ಯ ಶಾಲೆಗೆ ಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಇದರಿಂದ ಮುಂದಿನ ದಿನಗಳಲ್ಲಿ ಪ್ರಯೋಜನವಾಗಲಿದೆ,ಇಂತಹ ಸ್ವಾವಲಂಬಿ ಯೋಜನೆಗಳನ್ನು ಇಲ್ಲಾ ಜಾಗ ಇರುವ ಶಾಲೆಗಳಲ್ಲಿ

ಸುಬ್ರಹ್ಮಣ್ಯ:ವಿಶ್ವಜನಸಂಖ್ಯಾ ದಿನಾಚರಣೆ

ತಾಲ್ಲೂಕು ಆಡಳಿತ- ತಾಲ್ಲೂಕು ಪಂಚಾಯತ್, SSPU ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಇಂದು Sspu ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜನಸಂಖ್ಯೆ ಸ್ಪೋಟದಿಂದ ಉಂಟಾಗುವ ಸಮಸ್ಯೆಗಳು ಅದರಿಂದ ಆಗುವಂತಹ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಕರಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ

ಮಂಗಳೂರು: ಜುಲೈ 12ರಂದು ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಪಂಪ್‌ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್‍ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ ಜುಲೈ 12ರಂದು ಲೋಕಾರ್ಪಣೆಗೊಳ್ಳಲಿದೆ. ವಿವಿಧ ಪಾರ್ಟನರ್‍ಸ್‌ಗಳಾದ ಲೆಕ್ಕೊ ಕ್ಯುಸಿನ್, ಮ್ಯಾನುಪ್ಯಾಕ್ಟರಿಂಗ್ ಮಾಡ್ಯೂಲರ್ ಕಿಚನ್, ವಾರ್ಡ್ ರೂಬ್ ಆಂಡ್ ವ್ಯಾನಿಟಿ, ಪಾರ್ಟನರ್‌ಗಳಾಗಿ

ಕ್ಲಾಕ್ ಟವರ್ – ಸ್ಟೇಟ್‍ಬ್ಯಾಂಕ್ ದ್ವಿಮುಖ ಸಂಚಾರ : ಕೂಡಲೇ ವರದಿ ಸಲ್ಲಿಸಲು ಡಿಸಿ ಸೂಚನೆ

ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ದ್ವಿಮುಖ ವಾಹನ ಸಂಚಾರವಿದ್ದ ಈ ರಸ್ತೆಯನ್ನು ಏಕಮುಖ ಮಾಡಿರುವುದರಿಂದ

ಯಶಸ್ವಿನಿ ವಿಮಾ ಯೋಜನೆ ಪುತ್ತೂರಿನ ಖಾಸಗಿ ಆಸ್ಪತ್ರೆಗಳಿಗೂ ಅನ್ವಯ ಮಾಡಿ; ಸಹಕಾರ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆ‌ಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ ಅಶೋಕ್ ರೈ ಅವರು ಸಹಕಾರ ಇಲಾಖೆಯ ಯಶಸ್ವಿನಿ ವಿಮಾ ಸೌಲಭ್ಯವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿರುವುದರಿಂದ ವಿಮೆ ಹೊಂದಿರುವವರಿಗೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ