Home Blog Left SidebarPage 961

ಉಳ್ಳಾಲ ಹನಿಟ್ರಾಪ್ ಪ್ರಕರಣ : ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧನ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ

ಬಂಟ್ವಾಳ: ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ಯವಕ ನಾಪತ್ತೆ

ಬೆಂಗಳೂರು ಮೂಲದ ಯುವಕನೋರ್ವ ಪಾಣೆಮಂಗಳೂರಿನ ಹೊಸ ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸತ್ಯವೇಲು(29) ನಾಪತ್ತೆಯಾದ ಯವಕನಾಗಿದ್ದು ಬಂಟ್ವಾಳ ಪೊಲೀಸರು ಬೈಕನ್ನ ವಶಕ್ಕೆ ಪಡೆದುಕೊಂಡು ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈತ ಎರಡು ವಾರಗಳ ಹಿಂದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಬಂದಿದ್ದ. ಆದರೆ ಸ್ಥಳೀಯರು

ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯ ಕಾಮಗಾರಿ ; ಮೀನು ಮಾರಾಟ ಮಹಿಳೆಯರ ಆಕ್ರೋಶ

ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೊಜಾರವರು 2 ವರ್ಷದ ಹಿಂದೆ ಎಂಎಲ್‌ಸಿಯಾಗಿದ್ದ ಸಂದರ್ಭ ಎನ್‌ಹೆಚ್ 66 ಬೈಕಂಪಾಡಿಯಲ್ಲಿ ಮೀನುಗಾರ ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನುದಾನ ನೀಡಿ

ಪುತ್ತೂರಿನಲ್ಲಿ ಜಾನುವಾರುಗಳ ಏಲಂ ಪ್ರಕ್ರಿಯೆಗೆ ವಿರೋಧ

ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೆ. ಕೃಷ್ಣ ಪ್ರಸನ್ನ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳ ಏಲಂ

ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತ ವರ್ತನೆ : ಪೊಲೀಸ್ ಸಿಬ್ಬಂದಿಯ ಬಂಧನ

ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್  ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ

ಸೈಕಲ್‌ಗೆ ಢಿಕ್ಕಿಯಾದ ಕಾರು: ಸೈಕಲ್ ಸವಾರ ಸಾವು

ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಹೊತ್ತಿಗೆ ಈ ಅಪಘಾತ ನಡೆದಿದೆ. ಸೈಕಲ್ ಡಿವೈಡರ್

ಬಿಎಸ್‌ವೈ ಅವರನ್ನ ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್‌ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ,

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ಟಿ.ಸಿ.ಗೆಹ್ಲೋಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ