Home ಕರಾವಳಿ Archive by category ಉಡುಪಿ (Page 129)

ಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ

ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್

ಮಣಿಪಾಲದಲ್ಲಿ ಸಿಲಿಂಡರ್ ಸ್ಪೋಟ

ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ

ಸರಕಾರ ಸಹಾಯ ಮಾಡದಿದ್ರೆ ಸುಗಮ ಸಂಚಾರ ಕಷ್ಟ : ಕುಯಿಲಾಡಿ ಸುರೇಶ್ ನಾಯಕ್ 

ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಗ್ರಹಿಸಿದ್ದಾರೆ. ಕಳೆದ ವರುಷ ಕೆ ಎಸ್ ಅರ್ ಟಿಸಿ ದರ ಕಡಿತ ಹಾಗೂ ವಿದ್ಯಾರ್ಥಿಗಳಿಗೆ ವಿನಾಯಿತಿ ಮಾಡಿರುವ ಕಾರಣಗಳನ್ನು ನೀಡಿದ ಹಿನ್ನಲೆಯಲ್ಲಿ, ಸರಕಾರ ಸುಮಾರು

ಉಡುಪಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ವಿವಿಧ ಸಂಘಟನೆಗಳಿಂದ ಜನಾಂದೋಲನ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ

ಹೆಜಮಾಡಿಯಲ್ಲಿ ಸಮುದ್ರದ ಅಲೆಗೆ ಸಿಲುಕಿ ಮೀನುಗಾರ ಮೃತ್ಯು

ಹೆಜಮಾಡಿಯ ನದಿ ಹಾಗೂ ಸಮುದ್ರ ಒಂದಾಗುವ ಅಳುವೆ ಬಾಗಿಲಿಗೆ ಮೀನುಗಾರಿಕೆಗೆ ತೆರಳಿದ ಮೀನುಗಾರರೋರ್ವರು ಸಮುದ್ರದ ಬೃಹತ್ ಅಲೆಯ ದಾಳಿಗೆ ತುತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಹೆಜಮಾಡಿ ಕೋಡಿ ಮಾನಂಪಾಡಿ ನಿವಾಸಿ ಜಯಂತ್ (51).ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಹೊಂದಿದ್ದ ಇವರು ಮುಂಜಾನೆ ತೀರ ಮೀನುಗಾರಿಕೆ ನಡೆಸುವುದಕ್ಕಾಗಿ ಅಳವೆ ಪ್ರದೇಶಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,

ಕಾಪುವಿನಲ್ಲಿ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ ಕಾಪುವಿನಲ್ಲಿ ನಡೆಯಿತು. ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ, ಕೇಂದ್ರ ಸರ್ಕಾರಗಳ ಹಾಗೂ ಕಾಪು ಶಾಸಕರ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟಿಸಿದ್ದಾರೆ. ನೂರಾರು ಕಾರ್ಯಕರ್ತರು ಕಾಪು ರಾಜೀವ ಭವನದಿಂದ ಜಾಥದ ಮೂಲಕ ಶಾಸಕರ ಕಛೇರಿಯ ಮುಂಭಾಗದಲ್ಲಿ ಸಾಮಾಜಿಕ ಅಂತರದಲ್ಲಿ ನಿಂತು ಪ್ರತಿಭಟನೆಗೆ ಸಾತ್

ಭೂಗತವಾಗುತ್ತಿರುವ ಪಡುಬಿದ್ರಿ ಸ್ಮಶಾನ ಮುಕ್ತಿಗಾಗಿ ಬೇಡಿಕೆ..

ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಭೇಟಿ ನೀಡಿ ಸಮಸ್ಯೆ ತಕ್ಷಣವೇ ಪರಿಹಾರ ಮಾಡುವ ಭರವಸೆ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿಯ ಕಂಚಿನಡ್ಕ ಭಾಗದಲ್ಲಿ ಇರುವ ಏಕೈಕ ಸಾರ್ವಜನಿಕ ರುದ್ರಭೂಮಿ ಇದಾಗಿದೆ, ಇಲ್ಲಿ ಎಲ್ಲಾ

ಕುಸಿದು ಬಿದ್ದ ಮಠದಬೆಟ್ಟು ಕಾಲು ಸೇತುವೆ: ಸಂಪರ್ಕ ಕಡಿತ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದ್ರಾಣಿ‌ ಹೊಳೆ ತುಂಬಿ ಹರಿಯುತ್ತಿದ್ದು‌,ಇದರಿಂದಾಗಿ ಶಿಥಿಲಗೊಂಡಿದ್ದ ಕಾಲು ಸೇತುವೆ ಒಂದು ಭಾಗ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ಮಠದ ಬೆಟ್ಟು ,ಕೊಪ್ಪರ ತೋಟಕ್ಕೆ ಸಂಪರ್ಕಿಸುವ ಕಾಲು ಸಂಕವಾಗಿದ್ದು,ಹಲವು ಸಮಯಗಳಿಂದ‌ ಶಿಥಿಲವಸ್ಥೆಗೊಂಡಿತ್ತು.ಶನಿವಾರ ಮಧ್ಯಾಹ್ನ ಕಾಲು ಸೇತುವೆ ಯ ಒಂದು ಭಾಗ ಕುಸಿದು ಬಿದ್ದಿದ್ದು,ಸ್ಥಳೀಯ ಯುವಕರು ತಾತ್ಕಲಿಕವಾಗಿ ಮರದ ದಿಮ್ಮಿಗಳನ್ನು ಹಾಕಿ ಸರಿಪಡಿಸಲು ಹರಸಹಾಸ

ಎರ್ಮಾಳ್: ಸ್ಕೂಟರ್‌ಗೆ ಕಾರು ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರನ್ನು ಅದಮಾರಿನ ಕೆಮುಂಡೇಲು ನಿವಾಸಿ ಡ್ಯಾನಿಶ್ ಡಿಸೋಜ (50) ಎಂದು ಗುರುತಿಸಲಾಗಿದೆ. ಇವರು ಅದಮಾರು ಶಿಕ್ಷಣ ಸಂಸ್ಥೆಯ ವಾಹನದ ಚಾಲಕನಾಗಿದ್ದು, ಬೆಳಿಗ್ಗೆ ಪಡುಬಿದ್ರಿಗೆ ದಿನಬಳಕೆ ಸಾಮಗ್ರಿ

ಪಡುಬಿದ್ರಿ ಜಂಕ್ಷನ್‌ ನಲ್ಲಿ ಟ್ಯಾಂಕರ್ ಕಂಟೈನರ್ ಡಿಕ್ಕಿ : ಸಂಚಾರ ಅಸ್ತವ್ಯಸ್ತ

ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್‌ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್‌ನಲ್ಲಿ ಕಾರ್ಕಳ ರಸ್ತೆಗೆ ತಿರುಗುತ್ತಿದ್ದ ವೇಳೆ, ಹಿಂದಿನಿಂದ ಇಂಧನ ಏರಿಕೊಂಡು ಬಂದ ಟ್ಯಾಂಕರ್ ಚಾಲಕ, ಟ್ಯಾಂಕರನ್ನು