Home ಕರಾವಳಿ Archive by category ಉಡುಪಿ (Page 21)

ಕಾರ್ಕಳ : ಥೀಂ ಪಾರ್ಕಿನಲ್ಲಿ ಪರಶುರಾಮನ ಕಂಚಿನ ಪ್ರತಿಮೆಯೇ ಇರಬೇಕು: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ : ತಾಲ್ಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪುನರಪಿ ಪರಶುರಾಮನ ಕಂಚಿನ ಪ್ರತಿಮೆಯನ್ನೇ ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಆಗ್ರಹಿಸಿದ್ದಾರೆ. ತಾಲ್ಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಂಚಿನ ಮೂರ್ತಿಯನ್ನು ಮಾಡಲು ಕನಿಷ್ಠ 2ವರ್ಷವಾದರೂ ಅಗತ್ಯವಿದೆ. ಪ್ರವಾಸೋದ್ಯಮ

ಬ್ರಹ್ಮಾವರ: ಒಂದು ತಂತಿಯಿಂದ ನಾದ ಹೊರಹೊಮ್ಮಿಸುವ ಕಿಂದರಜೋಗಿ

ದಸರಾ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕರಾವಳಿ ಭಾಗಕ್ಕೆ ಬಂದು ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜನರನ್ನು ಬೆರಗುಗೊಳಿಸುತ್ತಿದ್ದರು. ಇದೀಗ ದಾವಣಗೆರೆ ಮೂಲದ ಭೈರಪ್ಪ ಅವರು ಕರಾವಳಿ ಭಾಗಕ್ಕೆ ಆಗಮಿಸಿದ್ದು, ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜೀವನದ ಮೌಲ್ಯವನ್ನು ಬಿತ್ತರಿಸುವ ಕಾಯಕಕ್ಕೆ ಮುಂದಾಗಿದ್ದಾರೆ. 4 ಅಡಿ ಉದ್ದದ ಬಿದಿರಿನ ದಂಡವೊಂದಕ್ಕೆ 3 ಸ್ಥರದ ಸೋರೆ ಕಾಯಿ ಬುರುಡೆಗೆ ತಂತಿಯೊಂದನ್ನು ಅಳವಡಿಸಿ ಹಾಡು ಹಾಡುವಾಗ ಸ್ವರ ತಂತುಗಳು ತಂತಿ ಮೂಲಕ

ಬೈಂದೂರು: 62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್, ಮಣಿಕಾಂತ ಹೋಬಳಿದಾರ್‍ಗೆ ಚಿನ್ನದ ಪದಕ

62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಬೈಂದೂರಿನ ಮಣಿಕಾಂತ ಹೋಬಳಿದಾರ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದ್ದಾರೆ. 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಸರ್ವಿಸರ್ಸ್ ತಂಡವನ್ನು ಪ್ರತಿನಿಧಿಸಿದ 21 ವರ್ಷದ ಮಣಿಕಾಂತ ಹೋಬಳಿದಾರ್ ಅವರು 100 ಮೀ. ಓಟದ ಸೆಮಿಫೈನಲನ್ನು ಕೇವಲ 10.23 ಸೆಕೆಂಡ್‍ಗಳಲ್ಲಿ ಓಡುವ ಮೂಲಕ ರಾಷ್ಟ್ರೀಯ ದಾಖಲೆ ಬರೆದು ಅಗ್ರಸ್ಥಾನದೊಂದಿಗೆ ಫೈನಲ್‍ಗೆ

ಕಾರ್ಕಳ: ಭರದಿಂದ ಸಾಗುತ್ತಿರುವ ಪರಶುರಾಮನ ಮೂರ್ತಿಯ ಕೆಲಸ

ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕಿನಲ್ಲಿ ಪರಶುರಾಮನ ಅಸಲಿ ಮೂರ್ತಿಯ ಕೆಲಸ ಭರದಿಂದ ನಡೆಯುತ್ತಿದೆ. ಆದರೆ ಪ್ರತಿಮೆಯ ನಕಲಿತನ ಬಹಿರಂಗಪಡಿಸಿದ ನಂತರ ಇದೀಗ ಶಾಸಕರು ಅಸಲಿ ಮೂರ್ತಿಯ ಕೆಲಸ ಪ್ರಾರಂಭಿಸಿದ್ದಾರೆ. ಇದು ಶಾಸಕರಿಗೆ ಶೋಭೆ ತರುವಂತದ್ದಲ್ಲ ಎಂದು ಕಾಂಗ್ರೆಸ್ ವಕ್ತಾರ ಶುಭೋದ್ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಈಗಾಗಲೇ ನಕಲಿ ಪರಶುರಾಮ ಮೂರ್ತಿಗೆ ಟರ್ಪಾಲನ್ನು ಹೊದಿಸಿ, ಯಾರಿಗೂ ಕಾಣದಂತೆ

ಉಡುಪಿ: ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸುವ ಪರಿಸ್ಥಿತಿ ಸೃಷ್ಠಿ ಮಾಡಬೇಡಿ: ಕೋಟ ಶ್ರೀನಿವಾಸ ಪೂಜಾರಿ

ಕರ್ನಾಟಕದ ಎಲ್ಲಾ ವಿರೋಧ ಪಕ್ಷದ ಶಾಸಕರಿಗೆ ಅನ್ವಯಿಸುವ ಸಮಸ್ಯೆ ಇದು. ವಿರೋಧಪಕ್ಷದ ಶಾಸಕರನ್ನ ಸಿದ್ದರಾಮಯ್ಯ ಸರ್ಕಾರ ಹಣೆಯಲು ಹೊರಟಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಯನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಶಾಸಕ ಮುನಿರತ್ನ ಪ್ರತಿಭಟನೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮಂಜೂರಾದ ಯೋಜನೆಯ ಹಣವನ್ನು ಬಿಡುಗಡೆ ಮಾಡದೆ ತಡೆಹಿಡಿಯಲಾಗಿದೆ. ಹೊಸ

ಕುಂದಾಪುರ: ಸೇನಾಪುರ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಹೋರಾಟ ಸಮಿತಿಯಿಂದ ಆಗ್ರಹ

ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು, ಬಳಿಕ ರೈಲ್ವೇ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಸಂಚಾಲಕ ರಾಜೀವ್

ಉಡುಪಿ: ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ: ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ

ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಗಮಿಸಿದ್ದ ರಾಜ್ಯಪಾಲ ಥಾವರ್‍ಚಂದ್ ಗೇಹಲೋಟ್‍ರವರಿಗೆ

ಕುಂದಾಪುರ: ಕೊಲ್ಲೂರು ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್

ಪಡುಬಿದ್ರಿ: ಕೇವಲ ಸ್ಪರ್ಶದಿಂದಲೇ ನೋವು ನಿವಾರಣೆ ಮಾಡುವ ಶೇಷಾನಂದ..!!

ಕಾಲುಗಳಿಗಿಲ್ಲ ತನ್ನ ಬೇಕು ಬೇಡಗಳನ್ನು ಪೂರೈಸುವ ಶಕ್ತಿ… ಆದರೆ ಜನರ ಉದ್ಧಾರಕ್ಕೂ ಎಂಬಂತೆ ತನ್ನೆಲ್ಲಾ ಸುಖ ಸಂತೋಷಗಳನ್ನು ಬದಿಗೊತ್ತಿ,.. ತನ್ನಲ್ಲಿ ಅಡಕವಾಗಿರುವ ನೋವುಗಳನ್ನು ಮರೆತು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾರೆ. ಇದೀಗ ಪಡುಬಿದ್ರಿಯ ಸುಜ್ಲಾನ್ ಕಾಲೋನಿಯ ಒಂದು ಮನೆಯಲ್ಲಿ ಜನರ ಸೇವೆಗೆ ಲಭ್ಯವಿದ್ದಾರೆ. ಕೇರಳ ಮೂಲದ “ಶೇಷಾನಂದ” ವಯಸ್ಸು ಕೇವಲ ಮೂವತ್ತ ನಾಲ್ಕು, ವಿದ್ಯಾಭ್ಯಾಸ ರಹಿತವಾಗಿರುವ ಇವರು ಕನ್ನಡ, ಹಿಂದಿ, ಮಲಯಾಳಂ ಸಹಿತ

ಉಡುಪಿ: ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ಉಡುಪಿ ಪ್ರವೇಶಕ್ಕೆ ನಿರ್ಬಂಧ

ಉಡುಪಿ: ವಿಎಚ್‌ಪಿ- ಬಜರಂಗದಳ ವತಿಯಿಂದ ಇಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ